ಹುಮನಾಬಾದ್ ಕಾಲೇಜಿಗೂ ವಿಸ್ತಾರಣೆಗೊಂಡ ಹಿಜಾಬ್- ಕೇಸರಿ ಶಾಲು ವಿವಾದ
Team Udayavani, Feb 22, 2022, 1:03 PM IST
ಹುಮನಾಬಾದ: ಹಿಜಾಬ್- ಕೇಸರಿ ಶಾಲು ವಿವಾದ ಇದೀಗ ಹುಮನಾಬಾದ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿಗೂ ಮಂಗಳವಾರ ವಿಸ್ತಾರಗೊಂಡಿದೆ.
ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ನ್ಯಾಯಾಲಯದ ಹಾಗೂ ಸರ್ಕಾರದ ಆದೇಶ ಪಾಲಿಸುತ್ತಿಲ್ಲ. ಕಾಲೇಜಿನ ವರ್ಗಕೋಣೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿನಿತ್ಯ ಹಿಜಾಬ್ ಹಾಗೂ ಬುರ್ಖಾ ಧರಿಸುತ್ತಿದ್ದಾರೆ. ಆದೇಶ ಬಂದು ವಾರ ಕಳೆದರೂ ಕೂಡ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿಗಳು ವಿಫಲವಾಗಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದರು.
ಈ ಕುರಿತು ಅನೇಕ ಬಾರಿ ಉಪನ್ಯಾಸರಿಗೆ ಮನವರಿಕೆ ಮಾಡಿದರು ಕೂಡ ಕಾಲೇಜು ಸಿಬ್ಬಂದಿಗಳು ಮಾತ್ರ ನಮ್ಮ ಮಾಹಿತಿಗೆ ಗೌರವ ನೀಡದ ಹಿನ್ನೆಲೆಯಲ್ಲಿ ಇಂದು ಕೇಸರಿ ಶಾಲು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಹಿಜಾಬ್-ಬುರ್ಖಾ ತೆಗೆಸಲು ಸಾಧ್ಯವಾಗದ ಉಪನ್ಯಾಸಕರು ನಮ್ಮ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲರಿಗೂ ಒಂದೇ ನ್ಯಾಯ ಇರಬೇಕು, ಈ ಕುರಿತು ಕಾಲೇಜಿನ ಸಿಸಿ ಕ್ಯಾಮೆರಾಗಳ ದೃಶ್ಯಗಳು ಬೇಕಾದರೆ ಪರಿಶೀಲನೆ ಮಾಡಲಿ. ನ್ಯಾಯಾಲಯದ ಆದೇಶದ ನಂತರ ಕಾಲೇಜಿನಲ್ಲಿ ಕಾನೂನು ಪಾಲನೆಯಾಗಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ಮಾಡಲಿ ಎಂದು ಶಾಲು ಧರಿಸಿಬಂದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಮನವಿ
ಕಾಲೇಜಿನ ಪ್ರಾಚಾರ್ಯರ ವೀರಪ್ಪ ತುಪ್ಪದ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ನಡೆಸಿದರು. ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರು ಮೊದಲ ಕಾನೂನು ಪಾಲನೆ ಮಾಡಲು ತಿಳಿಸಿ ನಂತರ ನಾವು ಕೂಡ ಶಾಲು ತೆಗೆಯುತ್ತೇವೆ ಎಂದು ಹೇಳಿದರು. ಆದರೆ, ಯಾರು ಕೂಡ ಮಾತು ಕೆಳದ ಹಿನ್ನೆಲೆಯಲ್ಲಿ ತರಗತಿಗಳು ರದ್ದು ಮಾಡಿ ಮನೆಗೆ ತೆರಳುವಂತೆ ತಿಳಿಸಿದರು.
ಕಾಲೇಜಿನಲ್ಲಿ ಸಮಸ್ಯೆ ಇಲ್ಲ
ಇಷ್ಟು ದಿನಗಳ ಕಾಲ ಕಾಲೇಜಿನಲ್ಲಿ ಯಾವುದೆ ವಿವಾದ ಇದ್ದಿಲ್ಲ. ಆದರೆ, ಇಂದು ಬಿಕಾಂ ವರ್ಗದಲ್ಲಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಅವರನ್ನು ಮನವೊಲಿಸುವ ಕೆಲಸ ಮಾಡಿ ಮನೆಗೆ ಕಳುಹಿಸಲಾಗಿದೆ. ಸದ್ಯ ಕಾಲೇಜಿನಲ್ಲಿ ಯಾವುದೇ ದೊಡ್ಡ ಸಮಸ್ಯೆ ಇಲ್ಲ. ಕಾಲೇಜಿನಲ್ಲಿ ಕಾನೂನು ಪಾಲನೆ ಮಾಡಲಾಗುತ್ತಿದೆ ಎಂದು ಪ್ರಾಚಾರ್ಯ ವೀರಪ್ಪ ತುಪ್ಪದ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ