ಬಸವಣ್ಣ ನಿಂದ ಕಾವಿಗೆ ಬಂತು ಬೆಲೆ


Team Udayavani, Dec 26, 2017, 11:06 AM IST

bid-2.jpg

ಬಸವಕಲ್ಯಾಣ: ಗುರು ಬಸವಣ್ಣನವರಿಂದಲೆ ಕಾವಿಗೆ ಒಂದು ಬೆಲೆ ಬಂದಿದೆ. ಕಾವಿ ತೊಟ್ಟ ಜಂಗಮರಿಗೆ, ಸ್ವಾಮೀಜಿಗಳಿಗೆ
ಉತ್ಕೃಷ್ಟ ಗೌರವ ತಂದು ಕೊಟ್ಟವರು ಗುರು ಬಸವಣ್ಣನವರು. ಅವರಿಂದ ನಮಗೆ ಗೌರವ ಬಂದಿದೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಚಿತ್ರದುರ್ಗದ ಜಗದ್ಗುರು ಡಾ| ಶಿವಮೂರ್ತಿ ಮುರುಘರಾಜೇಂದ್ರ ಶರಣರು ಹೇಳಿದರು.

ಬೇಲೂರ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಮೂರ್ತಿ ಅನಾವರಣಗೊಳಿಸಿದ ನಂತರ ನಡೆದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಕಾವಿ ತೊಟ್ಟ ಜಂಗಮರನ್ನು ಕಂಡರೆ ಜನ ಕಾಲಿಗೆರಗಿ ಗೌರವಿಸುತ್ತಾರೆ.

ಕಾವಿ ಗೌರವ ಪಾಡಬೇಕಾದ ಕೆಲಸ ಮಠಾಧೀಶರಿಂದ ನಡೆಯಬೇಕು ಎಂದರು. ಬದುಕು ಅರಳಿಸಿಕೊಳ್ಳಲು ಬೇಕಾದ ಭಕ್ತಿಯ ಭಾವ, ಭಕ್ತಿಯ ಬೀಜವನ್ನು ಬಸವಣ್ಣನವರು ಬಿತ್ತಿ ಹೋಗಿದ್ದಾರೆ. ಎಲ್ಲಿ ಭಕ್ತಿ ಇರುತ್ತದೆ ಅಲ್ಲಿ ಬಸವಣ್ಣನವರು ಇರುತ್ತಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. 

ಬಸವಾದಿ ಶರಣರು ಕಲ್ಯಾಣರಾಜ್ಯ ಕಟ್ಟಿದ ಪ್ರದೇಶ ಈ ನಾಡು ಎನ್ನುವುದು ಸ್ಮರಿಸಿದರೆ ರೋಮಾಂಚನವಾಗುತ್ತದೆ. ಇಲ್ಲಿಗೆ ಬರುವುದೆಂದರೆ ಎಲ್ಲಿಲ್ಲದ ಸಂತಸ ನಮ್ಮದು. ಈ ಭಾಗದಲ್ಲಿ ಒಂದು ಶಾಖೆ ತೆರೆಯಬೇಕು ಎಂದು ನಮ್ಮವರು ಒತ್ತಾಯಿಸುತ್ತಿದ್ದಾರೆ. 

ಆಯ್ತು ಅದು ಕೂಡ ಮಾಡೊಣ ಎಂದ ಶರಣರು, ಬೇಲೂರು ಐತಿಹಾಸಿಕ ಗ್ರಾಮ, ಶರಣ ಉರಿಲಿಂಗ ಪೆದ್ದಿ ಅವರು ನೆಲೆಸಿದ ಗ್ರಾಮವಿದು. ಇಲ್ಲಿ ಬಸವಣ್ಣನವರ ಭವ್ಯ ಪ್ರತಿಮೆ ಸ್ಥಾಪಿಸಿದ್ದೀರಿ. ಭಕ್ತಿ ಶ್ರದ್ಧೆಯಿಂದ ಜನ ಸೇರಿದ್ದಿರಿ, ಇದು ನೀವು ಬಸವಣ್ಣನವರ ಮೇಲಿಟ್ಟಿರುವ ಭಕ್ತಿಗೆ ಸಾಕ್ಷಿಯಾಗಿದೆ ಎಂದರು.

ವಿಜಯಪುರದ ಶ್ರೀ ಯೋಗೀಶ್ವರಿ ತಾಯಿ ಆಶೀರ್ವಚನ ನೀಡಿದರು. ಬೇಲೂರ ವಿರಕ್ತ ಮಠದ ಶಿವಕುಮಾರ ಸ್ವಾಮಿಜಿ ನೇತೃತ್ವ ವಹಿಸಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಸೂರ್ಯಕಾಂತ ಚಿಲ್ಲಾಬಟ್ಟೆ, ಬಿಜೆಪಿ ಪ್ರಮುಖ ಸಂಜಯ ಪಟವಾರಿ ಮಾತನಾಡಿದರು. ಮುಖಂಡ ಜಗನ್ನಾಥ ಚಿಲ್ಲಾಬಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಾಯಗಾಂವದ ಶ್ರೀ ಶಿವಾನಂದ ಸ್ವಾಮಿಜಿ, ಶ್ರೀ ಪಂಚಾಕ್ಷರಿ ಸ್ವಾಮೀಜಿ, ಗುರುಮಠಕಲ್‌ ನ ಶ್ರೀಗಳು, ಮಾಜಿ ಶಾಸಕ ಎಂ.ಜಿ. ಮುಳೆ, ಬಿಕೆಡಿಬಿ ಸದಸ್ಯ ಶಿವರಾಜ ನರಶೆಟ್ಟಿ, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಶಂಕರ ನಾಗದೆ ಉಪಸ್ಥಿತರಿದ್ದರು. ರಾಮಲಿಂಗ ಸಾಗಾವೆ ಸ್ವಾಗತಿಸಿದರು. ಬಸವರಾಜ ಗುಂಗೆ ನಿರೂಪಿಸಿದರು.

ಬೇಲೂರ ಗ್ರಾಮದಲ್ಲಿ ಸಮಾನತೆಯ ಹರಿಕಾರ ಬಸವಣ್ಣನವರ ಮೂರ್ತಿ ಅನಾವರಣೆಗೊಂಡಿದ್ದು ಹೆಮ್ಮೆಯ ವಿಷಯ. ಮೂರ್ತಿ ಪ್ರತಿಷ್ಟಾಪಿಸಿದರೆ ಸಾಲದು ನಿತ್ಯ ಜೀವನದಲ್ಲಿ ಬಸವಣ್ಣನವರ ತತ್ವ ಆದರ್ಶಗಳನ್ನು ಅಳವಡಿಸಿಕೊಂಡು ಆಚರಣೆಗೆ ತರಬೇಕು. ಅಂದಾಗ ಮಾತ್ರ ಮೂರ್ತಿ ಸ್ಥಾಪಿಸಿದ್ದಕ್ಕೆ ಮಹತ್ವ ಬರುತ್ತದೆ.
ಹುಲಸೂರು ಡಾ| ಶಿವಾನಂದ ಸ್ವಾಮೀಜಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.