ಮೀಸಲಾತಿಗೆ ಕೊಕ್ಕೆ: ಅನ್ಯಾಯ ಸರಿಪಡಿಸಿ


Team Udayavani, Mar 30, 2019, 2:43 PM IST

bid-4

ಜೇವರ್ಗಿ: 371ನೇ (ಜೆ) ವಿಧಿ ಬಗ್ಗೆ ಮಾತನಾಡುವರು ಲೋಕೋಪಯೋಗಿ ಇಲಾಖೆಯಲ್ಲಿ 870 ಇಂಜಿನಿಯರ್‌ ಹಾಗೂ ಸಹಾಯಕ ಇಂಜಿನಿಯರುಗಳ ನೇಮಕಾತಿಯಲ್ಲಿ 371(ಜೆ) ವಿಧಿ ಮೀಸಲಾತಿಗೆ ಕೊಕ್ಕೆ ಹಾಕಿದರೂ ಸುಮ್ಮನೆ ಕೂಡುವ ಬದಲು ಅನ್ಯಾಯ ಸರಿಪಡಿಸಲು ಮುಂದಾಗಬೇಕೆಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ಡಾ| ಉಮೇಶ ಜಾಧವ್‌ ಆಗ್ರಹಿಸಿದರು.

ಶುಕ್ರವಾರ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್‌ ಹಾಗೂ ಸಹಾಯಕ ಇಂಜಿನಿಯರುಗಳ ನೇಮಕಾತಿಯನ್ನು ವಿಶೇಷ ಎಂಬುದಾಗಿ ಉಲ್ಲೇಖೀಸಿ 371ನೇ (ಜೆ) ವಿಧಿ ಮೀಸಲಾತಿ ಕಡೆಗಣಿಸಿ ಈ ಭಾಗಕ್ಕೆ ತುಂಬಾ ಅನ್ಯಾಯ ಎಸಗಲಾಗಿದೆ ಎಂದರು.

ಈ ಹಿಂದೆಯೂ ಗ್ರಾಮ ಪಂಚಾಯಿತಿ ಆಪರೇಟ್‌ರುಗಳನ್ನು ಸಹ ವಿಶೇಷ ಹುದ್ದೆ ಎಂಬುದಾಗಿ ಅಧಿಸೂಚನೆ ಹೊರಡಿಸಿ ಹಾಸನ, ಬೆಂಗಳೂರು, ಮಂಡ್ಯ ಭಾಗವದರನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಲಾಗಿತ್ತು. ಆಗ ವೈಜನಾಥ ಪಾಟೀಲ ನೇತೃತ್ವದಲ್ಲಿ ಹೋರಾಟ ನಡೆದಾಗ ನೇಮಕಾತಿಯನ್ನೇ ರದ್ದುಪಡಿಸಲಾಯಿತು.

ಈಗಲೂ ಆ ಭಾಗದವರನ್ನೇ ಇಂಜಿನಿಯರ್‌ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಬೇಕೆಂಬ ಹುನ್ನಾರದಿಂದ ವಿಶೇಷ ನೇಮಕಾತಿ ಎಂಬುದಾಗಿ ಪರಿಗಣಿಸಿ ಅಧಿಸೂಚನೆ ಹೊರಡಿಸಲಾಗಿದೆ. 371ನೇ (ಜೆ) ಮೀಸಲಾತಿಗೆ ಕೊಕ್ಕೆ ಹಾಕಿದರೂ ಸರ್ಕಾರದಲ್ಲಿರುವರು ಸುಮ್ಮನೆ ಕುಳಿತಿರುವುದು ನಿಜಕ್ಕೂ ಅನ್ಯಾಯದ ಪರಮಾವಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳ ನೇಮಕಾತಿ ಮೀಸಲಾತಿ ಪ್ರಕಾರ ಹುದ್ದೆಗಳ ಭರ್ತಿಗೆ ಮುಂದಾಗಬೇಕಿತ್ತು. ಆದರೆ ವಿಶೇಷ ನೇಮಕಾತಿ ಮೂಲಕ ತಮ್ಮ ಭಾಗದವರನ್ನೇ ತುಂಬಿಕೊಳ್ಳಲು ಮುಂದಾಗಿದ್ದರೂ ಹೈಕ ಭಾಗದ ಅಭಿವೃದ್ಧಿ ಬಗ್ಗೆ ಮಾತನಾಡುವರು ತಕ್ಷಣ ಮಾತನಾಡುವುದನ್ನು
ನಿಲ್ಲಿಸಿ ಮೊದಲು ಅಧಿಸೂಚನೆ ರದ್ದುಪಡಿಸಲು ಮುಂದಾಗಲಿ ಎಂದರು.

ಏಪ್ರಿಲ್‌ 3ರಂದು ನಾಮಪತ್ರ ಸಲ್ಲಿಸುವೆ. ಆ ದಿನ ಪ್ರತಿ ಬೂತ್‌ದಿಂದ 10 ಜನರು ಬರಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಅವಕಾಶವಿದೆ. ಕಾಂಗ್ರೆಸ್‌ ಪಕ್ಷದಿಂದ ತಮಗೆ ಹಾಗೂ ಜನಾಂಗಕ್ಕೆ ಅವಮಾನ ಆಗಿದ್ದರಿಂದ ಬಿಜೆಪಿಯಿಂದ ಸ್ಪರ್ಧೆಗಿಳಿದಿದ್ದೇವೆ. ತಾವಂತೂ ಸಂವಿಧಾನಬದ್ಧವಾಗಿ ನಡೆಯುತ್ತೇವೆ. ಹೀಗಾಗಿ ತಮ್ಮೆಲ್ಲರ ಆಶೀರ್ವಾದ ಬೇಕಾಗಿದೆ ಎಂದು ಜನರಲ್ಲಿ ಮನವಿ ಮಾಡಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ ಮಾತನಾಡಿ, ಕಾಂಗ್ರೆಸ್‌ ಪಕ್ಷದ ಖತಲ್‌ ರಾತ್ರಿ ನೋಡಿದ್ದೇವೆ. ಅದನ್ನೇ ಮಾಡುತ್ತಾ ಗೆಲ್ಲುತ್ತಾ ಬಂದಿದ್ದಾರೆ. ಈಗ ಅವರ ಖತಲ್‌ ರಾತ್ರಿ ಆಟ ನಡೆಯೋದಿಲ್ಲ. ಅದನ್ನು ತಡೆಯಲಿದ್ದೇವೆ. ಅಲ್ಲದೇ ಈ ಸಲ ಕೇಂದ್ರದಲ್ಲಿ 300 ಸೀಟುಗಳನ್ನು ಬಿಜೆಪಿ ಪಡೆಯುವ ಮುಖಾಂತರ ಮತ್ತೆ ಬಿಜೆಪಿ ಸರ್ಕಾರ ಬರಲಿದೆ ಎಂದು ಹೇಳಿದರು. ಮಾಜಿ ಸಚಿವ ಡಾ| ಎ.ಬಿ. ಮಾಲಕರೆಡ್ಡಿ ಮಾತನಾಡಿ, ದೇಶ ಅಭಿವೃದ್ಧಿ ಪಥದತ್ತ ಸಾಗುವಂತಾಗಲು ಮೋದಿ ನಾಯಕತ್ವ ಅವಶ್ಯಕವಿದೆ. ಆದ್ದರಿಂದ ಉಮೇಶ ಜಾಧವ್‌ ಅವರನ್ನು ಗೆಲ್ಲಿಸುವ ಮುಖಾಂತರ ಸಾಕಾರಗೊಳಿಸಬೇಕು ಎಂದರು.

ಶಾಸಕರಾದ ಬಿ.ಜಿ. ಪಾಟೀಲ, ಬಸವರಾಜ ಮತ್ತಿಮಡು, ಮಾಜಿ ಶಾಸಕ ಶಶೀಲ್‌ ನಮೋಶಿ, ಮುಖಂಡರಾದ ಲಿಂಗರಾಜ ಬಿರಾದಾರ, ಸಾಯಬಣ್ಣ ದೊಡಮ್ಮನಿ, ಧರ್ಮಣ್ಣ ದೊಡ್ಡಮನಿ, ರಮೇಶ ವಕೀಲ್‌, ದಂಡಪ್ಪ ಸಾಹು ಕುಳಗೇರಿ, ಶಿವರಾಜ ಪಾಟೀಲ ರದ್ದೇವಾಡಗಿ, ರೇವಣಸಿದ್ಧಪ್ಪ ಸಂಕಾಲಿ, ಮಹಾದೇವಪ್ಪ ದೇಸಾಯಿ, ರಾಜು ತಳವಾರ, ಸಿದ್ರಾಮ ಯಳಸಂಗಿ, ಜೆಟ್ಟಪ್ಪ ಮಂದ್ರವಾಡ, ಭಗವಂತರಾಯ ಬೆಣ್ಣೂರ, ಸಾಹೇಬಗೌಡ ಕಲ್ಲಾ, ಸಂತೋಷ ಮಲ್ಲಾಬಾದ್‌, ಗುರುಲಿಂಗಪ್ಪಗೌಡ, ಮಲ್ಲನಗೌಡ ನೇರಡಗಿ ಮುಂತಾದವರಿದ್ದರು.

ಲೋಕಸಭೆಯ ಈ ಸಲದ ಚುನಾವಣೆಯಲ್ಲಿ ಜೇವರ್ಗಿ ಮತಕ್ಷೇತ್ರದಿಂದ 10 ಸಾವಿರ ಮತಗಳ ಲೀಡ್‌ ಕೊಡಲಾಗುವುದು. ಹೀಗಾಗಿ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸುವ ಮುಖಾಂತರ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಾಗೂ ಕಲಬುರಗಿಯಲ್ಲಿ ಡಾ| ಜಾಧವ್‌ ಗೆಲ್ಲಿಸಬೇಕೆಂದು ಜೇವರ್ಗಿ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ವಿನಂತಿಸಿದರು.

371ನೇ (ಜೆ) ವಿಧಿ ಜಾರಿಯ ಅನುಷ್ಠಾನದ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರೇ ಆಗಿದ್ದಾರೆ. ಇಷ್ಟಿದ್ದ ಮೇಲೂ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ ನೇಮಕಾತಿಯಲ್ಲಿ 371ನೇ (ಜೆ) ಮೀಸಲಾತಿ ಅಳವಡಿಕೆ ಮಾಡದೇ ಅನ್ಯಾಯ ಎಸಗಿರುವುದನ್ನು ಸರಿಪಡಿಸಲು ಏಕೆ ಮುಂದಾಗುತ್ತಿಲ್ಲ.
ಡಾ| ಉಮೇಶ ಜಾಧವ್‌, ಬಿಜೆಪಿ ಲೋಕಸಭಾ ಅಭ್ಯರ್ಥಿ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.