ಸಿಎಂ ಇಬ್ರಾಹಿಂ ಅವರ ಮಗ ಹುಮನಾಬಾದ ಕ್ಷೇತ್ರದಿಂದ ಸ್ಪರ್ಧೆ?


Team Udayavani, Sep 26, 2022, 11:18 AM IST

ಸಿಎಂ ಇಬ್ರಾಹಿಂ ಅವರ ಮಗ ಹುಮನಾಬಾದ ಕ್ಷೇತ್ರದಿಂದ ಸ್ಪರ್ಧೆ?

ಹುಮನಾಬಾದ್: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಮಗ ಸಿಎಂ ಫೈಜ್ ಮೊಹಮ್ಮದ್ ಇಂದು ಸೋಮವಾರ, ಮಂಗಳವಾರ ಹುಮನಾಬಾದ ವಿಧಾನ ಸಭಾ ಕ್ಷೇತ್ರದ ವಿವಿಧಡೆ ಸಂಚಾರ ನಡೆಸಲ್ಲಿದ್ದು, ರಾಜಕೀಯವಾಗಿ ವಿವಿಧ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರಿನಿಂದ ರಸ್ತೆ ಮೂಲಕ ನೇರವಾಗಿ ಸೋಮವಾರ ಬೆಳಿಗ್ಗೆ 11:30ಕ್ಕೆ ಹುಮನಾಬಾದ ಪಟ್ಟಣಕ್ಕೆ ಆಗಮಿಸುತ್ತಿದ್ದು, ಮೊದಲಿಗೆ ಹೊಚ್ಚಕನಳ್ಳಿ ಗ್ರಾಮದಲ್ಲಿನ ದಿವಂಗತ ಮಾಜಿ ಸಚಿವ ಮೆರಾಜೊದ್ದೀನ್ ಪಟೇಲ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ ಹುಡಗಿ ಗ್ರಾಮದ ವಿರಕ್ತಮಠದ ಚನ್ನಮಲ್ಲ ಸ್ವಾಮಿಜಿ ಭೇಟಿ, ಪಟ್ಟಣದ ಕುಲ ದೇವ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ, ಮಾಣಿಕನಗರದ ಮಾಣಿಕ ಪ್ರಭುಗಳ ದರ್ಶನ, ಮಧ್ಯಾಹ್ನ ಜೆಡಿಎಸ್ ಪಕ್ಷದ ಮುಖಂಡ ಶೌಕತ್ ಅವರ ಮನೆಯಲ್ಲಿ ಊಟ ಮಾಡಿ ನಂತರಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಲ್ಲಿದ್ದಾರೆ.

ನಂತರ ಪಕ್ಷದ ಕಚೇರಿಗೆ ತೆರಳಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲ್ಲಿದ್ದಾರೆ. ಸಂಜೆ 5:15ಕ್ಕೆ ರಾಜೇಶ್ವರದ ರುದ್ರಮುನಿ ಶಿವಾಚಾರ್ಯರ ಭೇಟಿ, ಹಿರೇನಾಗಂವ ಶಾಂತಲಿಗ ಸ್ವಾಮಿಗಳ ಭೇಟಿ ಮಾಡಲಿದ್ದಾರೆ. ಮಂಗಳವಾರ ಸೆ. 27ರಂದು ಬೆಳಿಗ್ಗೆ ಜೆಡಿಎಸ್ ಮುಖಂಡ ಸುರೇಶ ಸೀಗಿ ಅವರ ಮನೆಯಲ್ಲಿ ಉಪಹಾರ, ಬ್ಯಾಂಕ್ ರೆಡ್ಡಿ ಅವರ ಮನೆಗೆ ಭೇಟಿ, ಹಳ್ಳಿಖೇಡ (ಬಿ) ಚಿಕ್ಕಮಠಕ್ಕೆ ಭೇಟಿ, ಚಿಟಗುಪ್ಪದ ಬುಖಾರಿ ಸಾಹೇಬ್ ಅವರ ಮನೆಗೆ ಬೇಟಿ, ನಾನಾ ಹಜರತ್ ದರ್ಗಾಕ್ಕೆ ಭೇಟಿ ನೀಡಿ ರಾತ್ರೆ ಮರಳಿ ಬೆಂಗಳೂರು ಪ್ರಯಾಣ ನಡೆಸಲ್ಲಿದ್ದಾರೆ.

ಚುನಾವಣೆ ಸ್ಪರ್ಧೆಗೆ ಸಜ್ಜು:

ಸಿಎಂ  ಇಬ್ರಾಹಿಂ ಅವರು ಈ ಹಿಂದೆ ಹುಮನಾಬಾದ ಪಟ್ಟಣಕ್ಕೆ ಬೇಟಿನೀಡಿದ ಸಂದರ್ಭದಲ್ಲಿ ಅನೇಕರು ಅವರನ್ನು ಹುಮನಾಬಾದ ಕ್ಷೇತ್ರದಿಂದ ಸ್ಪರ್ಧೆ ನಡೆಸುವಂತೆ ಒತ್ತಾಯಿಸಿದರು.  ಕೆಲ ಮುಖಂಡರು ಬೆಂಗಳೂರಿಗೆ ತೆರಳಿ ಹುಮನಾಬಾದ ವಿಧಾನ ಸಭಾ ಕ್ಷೇತ್ರದ ಕುರಿತು ವಿವರಣೆ ನೀಡಿದ್ದಾರೆ. ವಿವಿಧ ಚುನಾವಣೆಗಳ ಲೆಕ್ಕಾಚಾರಗಳು ವಿವರಿಸಿದ್ದಾರೆ. ಕಾರಣ ಸಿಎಂ ಇಬ್ರಾಹಿಂ ಅವರು ತಮ್ಮ ಮಗನಿಗೆ ಹುಮನಾಬಾದ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸುವುದಾಗಿ ತಿಳಿಸಿದ್ದಾರೆ. ಕಾರಣ ಮತ ಕ್ಷೇತ್ರದ ಎಲ್ಲಾ ಕಡೆಗಳಲ್ಲಿ ಎರಡು ದಿನಗಳಕಾಲ ಸಂಚಾರ ನಡೆಸಲ್ಲಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.

 

– ದುರ್ಯೋಧನ ಹೂಗಾರ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.