ಮದ್ಯ ಖರೀದಿಗೆ ಬರುವವರಿಂದ ಆತಂಕ

ಕಲಬುರಗಿಯಿಂದ ಬರುತ್ತಿದ್ದಾರೆ ಹುಮನಾಬಾದಗೆ | ಕೌಂಟರ್‌ ಸೇಲ್‌ ಅಂಗಡಿಗಳ ಬಂದ್‌ಗೆ ಆಗ್ರಹ

Team Udayavani, Mar 20, 2020, 11:53 AM IST

20-March-5

ಹುಮನಾಬಾದ: ನೆರೆಯ ಜಿಲ್ಲೆ ಕಲಬುರಗಿಯಲ್ಲಿ ಕೊರೊನಾ ಹಾವಳಿ ಹೆಚ್ಚಿರುವುದರಿಂದ ಎಲ್ಲ ತರಹದ ಮದ್ಯದ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಇದರ ಪರಿಣಾಮ ಅಲ್ಲಿನ ಜನರು ಇದೀಗ ಹುಮನಾಬಾದ ಕಡೆ ಮುಖ ಮಾಡಿದ್ದು, ಇಲ್ಲಿನ ಜನರಿಗೆ ಆತಂಕ ಹುಟ್ಟುವಂತೆ ಮಾಡಿದೆ.

ಕೊರೊನಾ ಸೋಂಕಿನಿಂದ ಜನರನ್ನು ಉಳಿಸಲು ಕಲಬುರಗಿ ಜಿಲ್ಲಾಡಳಿತ ಕಠಿಣ ಕ್ರಮಗಳು ಕೈಗೊಳ್ಳುತ್ತಿರುವ ಮಧ್ಯದಲ್ಲೇ ಮದ್ಯ ಕುಡಿಯಲೇ ಬೇಕು ಎಂಬ ನಿಟ್ಟಿನಲ್ಲಿ ಜನರು ಇಲ್ಲಿಗೆ ಬಂದು ಖರೀದಿಸುತ್ತಿದ್ದಾರೆ. ಗುರುವಾರದಿಂದ ಜಿಲ್ಲೆಯಲ್ಲಿ ಕೂಡ ವಿವಿಧ ಹಂತದ ಮದ್ಯ ಅಂಗಡಿಗಳನ್ನು ಬಂದ್‌ ಮಾಡಿ ಆದೇಶದ ಹೊರಡಿಸಿದ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಅವರು, ಜಿಲ್ಲೆಯಲ್ಲಿನ ಕೌಂಟರ್‌ ಸೇಲ್‌ ಮಾಡುತ್ತಿರುವ ಮದ್ಯದ ಅಂಗಡಿಗಳನ್ನು ಕೂಡ ಬಂದ್‌ ಮಾಡಿ ಆದೇಶ ಹೊರಡಿಸಬೇಕು ಎಂದು ಇಲ್ಲಿನ ಜನರು ಒತ್ತಾಯಿಸುತ್ತಿದ್ದಾರೆ.

ಯಾವ ವ್ಯಕ್ತಿಗೆ ಸೋಂಕಿದೆ ಅಥವಾ ಯಾವ ವ್ಯಕ್ತಿ ಯಾರ ಸಂಪರ್ಕದಲ್ಲಿ ಬಂದಿದ್ದಾನೆ ಎಂಬುದು ಗೊತ್ತಾಗುವುದಿಲ್ಲ. ರೋಗದ ಲಕ್ಷಣಗಳು ಕಂಡುಬಂದಾಗ ಮಾತ್ರ ವ್ಯಕ್ತಿಗೆ ಸೋಂಕಿನಿಂದ ಬಳಲುತ್ತಿದ್ದಾನೆ ಎಂದು ಗುರುತಿಸಲಾಗುತ್ತದೆ. ಕಾರಣ ಮದ್ಯ ಖರೀದಿಗಾಗಿ ಕಲಬುರಗಿಯಿಂದ ಹುಮನಾಬಾದ ಕಡೆಗೆ ಬರುತ್ತಿರುವ ಜನರ ಬಗ್ಗೆ ಕೂಡ ಜಿಲ್ಲಾಡಳಿತ ಗಮನ ಹರಿಸಬೇಕಾಗಿದೆ. ತಾಲೂಕಿನಲ್ಲಿ ಒಟ್ಟಾರೆ ವಿವಿಧ ಹಂತದ 34 ಮದ್ಯ ಅಂಗಡಿಗಳು ಇದ್ದು, ಈ ಪೈಕಿ 14 ಅಂಗಡಿಗಳು ಮಾತ್ರ ಬಂದ್‌ ಆಗಿವೆ. ತಾಲೂಕಿನಲ್ಲಿ ಇನ್ನು 20 ಕೌಂಟರ್‌ ಸೇಲ್‌ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿವೆ. ಸದ್ಯ ಅಬಕಾರಿ ಇಲಾಖೆಗೆ ಆದಾಯ ಹೆಚ್ಚಾಗುವ ಸಾಧ್ಯತೆಗಳು ಇವೆ. ಅಬಕಾರಿ ಅಧಿಕಾರಿಗಳ ಪ್ರಕಾರ ಈ ತಿಂಗಳಲ್ಲಿ ಹೆಚ್ಚು ಮದ್ಯ ಮಾರಾಟವಾಗುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ.

ಹುಮನಾಬಾದ ಪಟ್ಟಣದಲ್ಲಿಯೇ ಸುಮಾರು ಆರು ಅಂಗಡಿಗಳು ಮದ್ಯ ಮಾರಾಟ ಮಾಡುತ್ತಿರುವ ಕಾರಣ ನೆರೆ ಜಿಲ್ಲೆಯ ಜನರು ಈ ಕಡೆ ಮುಖ ಮಾಡುತ್ತಿದ್ದಾರೆ. ಗುರುವಾದಿಂದ ಪಟ್ಟಣದ ಹೊರವಲಯದಲ್ಲಿನ ವಿವಿಧ ಡಾಬಾಗಳು ಬಂದ್‌ ಆದ ಕಾರಣ ಮದ್ಯ ಖರೀದಿಸಿ ಮರಳಿ ಕಲಬುರಗಿಗೆ ತೆಳುತ್ತಿದ್ದಾರೆ ಎಂದು ವೈನ್‌ಶಾಪ್‌ ಸಿಬ್ಬಂದಿಗಳು ತಿಳಿಸಿದ್ದಾರೆ.

ಸುಳ್ಳು ಸುದ್ದಿಗೆ ಮಹತ್ವ ಬೇಡ: ಇತ್ತಿಚೇಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆದ “ಒಂದು ಪೆಗ್‌ನಲ್ಲಿ ಪ್ಯಾಕ್‌ ಆಗಲಿದೆ ಕೊರೊನಾ’ ಎಂಬ ಸುದ್ದಿ ಸತ್ಯವೆಂದು ತಿಳಿದುಕೊಂಡು ಅಲ್ಲಿನ ಜನರು ಮದ್ಯಕ್ಕೆ ಮಹತ್ವ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮದ್ಯ ಕುಡಿಯುವ ವ್ಯಕ್ತಿಗೆ ಕೊರೊನಾ ವೈರಸ್‌ ಪ್ರಭಾವ ಬೀರುವುದಿಲ್ಲ. ಕೊರೊನಾಗೆ ಮದ್ಯವೇ ಮದ್ದು ಎಂದು ನಂಬಿಕೊಂಡಿದ್ದಾರೆ ಎಂದು ವಿವಿಧ ಅಂಗಡಿಗಳ ಮುಖ್ಯಸ್ಥರು ತಿಳಿಸಿದ್ದಾರೆ.

ಆತಂಕದಲ್ಲಿದ್ದಾರೆ ಜನರು: ಕೊರೊನಾ ಪ್ರಕರಣಗಳು ಕಲಬುರಗಿಯಲ್ಲಿ ಹೆಚ್ಚಾಗುತ್ತಿರುವ ಕಾರಣ ಅಲ್ಲಿನ ಜನರು ಈ ಕಡೆಗೆ ಬರುತ್ತಿರುವುದು ತಿಳಿದ ಪಟ್ಟಣದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಅಲ್ಲಿನ ಜನರಿಂದ ಇಲ್ಲಿಗೂ ಕೂಡ ಕೊರೊನಾ ಬರಬಹುದು ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಕಲಬುರಗಿಯಿಂದ ಬರುವ ಜನರ ಬಗ್ಗೆ ಜಿಲ್ಲಾಡಳಿತ ಆರೋಗ್ಯ ತಪಾಸಣೆಗೆ ಮುಂದಾಗಬೇಕು ಎಂಬುದು ಜನರ ಮಾತು.

ಕಲಬುರಗಿಯಿಂದ ಇಲ್ಲಿಗೆ ಜನರು ಬರುತ್ತಿರುವ ಬಗ್ಗೆ ಕೇಳಿಬರುತ್ತಿದೆ. ಈಗಾಗಲೇ ಜಿಲ್ಲಾಡಳಿತ ವಿವಿಧ ಹಂತದ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಹುಮನಾಬಾದ ಪಟ್ಟಣದಲ್ಲಿ 6 ಹಾಗೂ 14 ಇತರೆ ಕಡೆಗಳಲ್ಲಿ ಕೌಂಟರ್‌ ಸೇಲ್‌ ಮಾತ್ರ ನಡೆಯುತ್ತಿದೆ. ಕಾನೂನು ಪ್ರಕಾರ ಹಾಗೂ ನಿಯಮಗಳು ಕಡ್ಡಾಯವಾಗಿ ಪಾಲಿಸುವ ಮೂಲಕ ವ್ಯಾಪಾರ ಮಾಡಲು ಸೂಚಿಸಲಾಗಿದೆ.
. ರವಿಂದ್ರ, ಅಬಕಾರಿ ಅಧಿಕಾರಿ

ಮದ್ಯ ಕುಡಿಯುವ ಜನರು ಹೆಚ್ಚು ಮುಂಜಾಗ್ರತೆ ವಹಿಸಬೇಕಾಗಿದೆ. ಮದ್ಯ ಕುಡಿಯವ ಜನರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹಾಗೂ ವೈರಸ್‌ ಜೊತೆಗೆ ಹೋರಾಡುವಲ್ಲಿ ದುರ್ಬಲರಾಗುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಸುಳ್ಳು ಸುದ್ದಿಗಳನ್ನು ಸಾರ್ವಜನಿಕರು ನಂಬಬೇಡಿ. ಮದ್ಯ ಸೇವಿಸಿ ಕೊರೊನಾ ವೈರಸ್‌ನಿಂದ ಪಾರಾಗಿ ಎಂಬುದು ಸುಳ್ಳು.
. ಅಶೋಕ ಮೈಲಾರೆ,
  ಆರೋಗ್ಯಾಧಿಕಾರಿ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.