ವೈರಸ್‌ ಭಯ ಬಿಟ್ಟು ಜಾಗ್ರತೆ ಕ್ರಮ ಅನುಸರಿಸಿ

ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಿಗಾಗಿ ಆಯೋಜನೆ

Team Udayavani, Mar 16, 2020, 5:49 PM IST

16-March-31

ಹುಮನಾಬಾದ: ಕೊರೊನಾ ವೈರಸ್‌ ಕುರಿತು ಭಯ ಬೇಡ. ಆದರೆ, ಸೋಂಕು ಬರದಂತೆ ಸರ್ಕಾರ ಸೂಚಿಸಿದ ಸೂಕ್ತ ಜಾಗೃತಿ ಕ್ರಮಗಳನ್ನು ಅನುಸರಿಸಬೇಕು ಎಂದು ಡಾ| ಎಸ್‌. ಜನಾರ್ಧನ ರಾವ್‌ ಹೇಳಿದರು.

ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಸತ್ಯಾದೀಪ ಕೆಮಿಕಲ್ಸ್‌ ಕಂಪನಿಯಲ್ಲಿ ರವಿವಾರ ಕೊರೊನಾ ವೈರಸ್‌ ತಡೆಗಟ್ಟುವ ಕುರಿತು ಕಾರ್ಖಾನೆಯ ಕಾರ್ಮಿಕರು ಹಾಗೂ ಸಿಬ್ಬಂದಿಗಳಿಗಾಗಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶದ ಜನರಿಗೆ ಹೆಚ್ಚಾಗಿ ಈ ವೈರಸ್‌ ಬಾಧಿಸಿಲ್ಲ. ಆದರೆ, ವಿದೇಶದಿಂದ ಬಂದ ಜನರಲ್ಲಿ ಇದು ಕಂಡು ಬಂದಿದೆ. ಕೆಮ್ಮು, ಜ್ವರ, ನೆಗಡಿ ಬಂದರೆ ಅದು ಕೊರೊನಾ ಎಂಬ ಭಯ ಬೇಡ. ಆದರೆ, ಇವುಗಳ ಜೊತೆಗೆ ಉಸಿರಾಟದ ತೊಂದರೆ ಹಾಗೂ ಭೇದಿಯ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದರನ್ಯ ಭೇಟಿ ಮಾಡಿ ಚಿಕಿತ್ಸೆ ಪಡೆಯಿರಿ. ಒಂದು ವಾರದಲ್ಲಿ ಆರೋಗ್ಯ ಸುಧಾರಿಸದಿದ್ದರೆ ಹೆಚ್ಚಿನ ಚಿಕಿತ್ಸೆಗೆ ಮುಂದಾಗಬೇಕು. ಕೊರಾನಾ ರೋಗಕ್ಕೆ ಸಧ್ಯ ಯಾವುದೇ ಔಷ ಧ ಲಭ್ಯವಿಲ್ಲ. ಇದು ಹೆಚ್ಚಾಗಿ 60ಕ್ಕೂ ಅಧಿಕ ವಯಸ್ಸಿನ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಿಸುತ್ತದೆ. ಮಕ್ಕಳಿಗೆ ಈ ವೈರಸ್‌ ಹರಡಿದರೂ ಕೂಡ ಅವರ ಆರೋಗ್ಯದಲ್ಲಿ ಹೆಚ್ಚು ಸಮಸ್ಯೆ ಉಂಟಾಗುವುದಿಲ್ಲ. ಬದಲಿಗೆ ಆ ಮಕ್ಕಳಿಂದ ಇತರಿಗೆ ಸೋಂಕು ಹರಡುತ್ತದೆ ಎಂದು ವಿವರಿಸಿದರು.

ವಿದೇಶದಿಂದ ಬಂದ ಜನರಿಗೆ ಹತ್ತಿರದಿಂದ ಮಾತನಾಡುವುದು ಬೇಡ. ಕನಿಷ್ಟ 3 ಅಡಿ ದೂರದಿಂದ ಮಾತನಾಡುವುದು ಸೂಕ್ತ. ಕೈ ಕುಲುಕುವುದು ಬೇಡ, ಇದರಿಂದ ಸೋಂಕು ಹರಡುತ್ತದೆ. ಅಲ್ಲದೆ ದೇಹದ ಇತರೆ ಭಾಗಕ್ಕೂ ಸ್ಪರ್ಶವಾಗುತ್ತದೆ. ಪದೆಪದೆ ಕೈಗಳನ್ನು ಸ್ವತ್ಛ ಮಾಡುತ್ತಿರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತೆರಳುವ ಸಂದರ್ಭದಲ್ಲಿ ಮಾತ್ರ ಕಡ್ಡಾಯವಾಗಿ ಮಾಸ್ಕ್ಗಳನ್ನು ಬಳಸಿ. ಮಾಸ್ಕ್ಗಳನ್ನು ಪ್ರತಿದಿನ ಬದಲಿಸಬೇಕು. ಒಂದೇ ಮಾಸ್ಕ್ ಅನ್ನು ಎಲ್ಲ ದಿನಗಳು ಹಾಕಿಕೊಂಡರೆ ಇತರೆ ಸೋಂಕುಗಳು ಬರಬಹುದು ಎಂದು ತಿಳಿಸಿದರು.

ಕಾರ್ಖಾನೆಯ ಸಿಬ್ಬಂದಿ ಹಾಗೂ ಕಾರ್ಮಿಕರು ಕೆಲಸದ ಸಮಯ ಹಾಗೂ ಮನೆಯಲ್ಲಿ ಸರ್ಕಾರದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಚಿಕಿತ್ಸೆಗೆ ಮುಂದಾಬೇಕು. ಅಲ್ಲದೆ, ಕುಟುಂಬದವರ ಹಿತ ರಕ್ಷಣೆ ಹಿನ್ನೆಲೆಯಲ್ಲಿ ಒಬ್ಬರೇ ಒಂದು ಕಡೆ ಉಳಿದುಕೊಂಡು ಆರೋಗ್ಯ ಸುಧಾರಿಸಿದ ನಂತರ ಕುಟುಂಬದ ಜೊತೆಗೆ ಬೇರೆಯಬೇಕು. ಈ ಸಂದರ್ಭದಲ್ಲಿ ಕೆಲಸಕ್ಕೆ ರಜೆ ಕೂಡ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿಯೊಬ್ಬರು ಮಾತನಾಡಿ, ಮದ್ಯ ಸೇವಿಸಿದರೆ ಕೊರೊನಾ ಬರುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಡಾ| ಜನಾರ್ಧನರಾವ್‌, ಸಾಮಾಜಿಕ ಜಾಲಾ ತಾಣಗಳಲ್ಲಿ ಇರುವ ಸುದ್ದಿಗಳು ಸತ್ಯ ಎಂದು ತಿಳಿಯಬಾರದು. ಆಲ್ಕೋಹಾಲ್‌ ಹೆಚ್ಚಿರುವ ಸ್ಯಾನಿಟೈಸರ್‌ ಬಳಸಲು ವೈದ್ಯರು ಸಲಹೆ ನೀಡುತ್ತಾರೆ.

ಆದರೆ, ಕೊರೊನಾ ವೈರಸ್‌ಗೆ ಮದ್ಯವೇ ಮದ್ದು ಎಂಬುದು ತಪ್ಪು ಎಂದು ತಿಳಿಸಿದರು. ಅಲ್ಲದೆ, ಬೇರೆ ದೇಶಗಳಲ್ಲಿ ಅತೀ ಹೆಚ್ಚಾಗಿ ಹರಡುತ್ತಿರುವ ಸೋಂಕು ನಮ್ಮ ದೇಶದಲ್ಲಿ ಇಲ್ಲ. ಕಾರಣ ಸೂರ್ಯನ ಬಿಸಿಲು. ಸರಾಸರಿ 35 ರಿಂದ 40 ಡಿಗ್ರಿ ಬಿಸಿಲಿನ ತಾಪಮಾನ ಸೋಂಕು ಹರಡಲು ಬಿಡುವುದಿಲ್ಲ ಎಂದರು. ಇತರೆ ಸಬ್ಬಂದಿ ಪ್ರಶ್ನೆಕೇಳಿ ಉತ್ತರ ಪಡೆದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.