ಮಕ್ಕಳಿಗೆ ಸೋಂಕು: ಗ್ರಾಮಸ್ಥರಲ್ಲಿ ಢವಢವ


Team Udayavani, May 25, 2020, 5:36 PM IST

25-May-27

ಸಾಂದರ್ಭಿಕ ಚಿತ್ರ

ಹುಮನಾಬಾದ: ಬೀದರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌-19 ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ರವಿವಾರ ಹುಮನಾಬಾದ್‌ ತಾಲೂಕಿನ ಎರಡು ಗ್ರಾಮಗಳ ಮೂರು ಮಕ್ಕಳಲ್ಲಿ ಸೋಂಕು ಪತ್ತೆ ಆಗಿದ್ದು, ಗ್ರಾಮೀಣ ಜನರ ನಿದ್ದೆಗೆಡಿಸಿದೆ.

ಮುಂಬಯಿನಿಂದ ಬಂದ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ತಾಲೂಕಿನ ಲಾಲಧರಿ ತಾಂಡಾದ ಒಂದೇ ಕುಟುಂಬದ 7 ವರ್ಷ ಹಾಗೂ 9 ವರ್ಷದ ಇಬ್ಬರು ಮಕ್ಕಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಮಕ್ಕಳ ಪಾಲಕರು ಮುಂಬಯಿನಿಂದ ಎಂ.ಆರ್‌ ಟ್ರಾವೆಲ್ಸ್‌ ಮೂಲಕ ಪ್ರಯಾಣಿಸಿ ಲಾಲಧರಿ ಗ್ರಾಮಕ್ಕೆ ತಲುಪಿದ್ದರು. ಇವರು ಪ್ರಯಾಣಿಸಿದ ಬಸ್‌ನಲ್ಲಿ ಸುಮಾರು 44 ಜನರಿದ್ದರು. ಈ ಪೈಕಿ 39 ಜನರನ್ನು ಬಸವಕಲ್ಯಾಣ ತಾಲೂಕಿನ ಅತಿವಾಳ ತಾಂಡಾದ ವಸತಿ ನಿಲಯದ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂಬಯಿನಿಂದ ಬಂದಿರುವ ಮಾಹಿತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮದ ಒಳಗೆ ಬರುವ ಮುನ್ನ ಅಧಿಕಾರಿಗಳಿಗೆ ಮಾಹಿತಿ ನೀಡಿ ವಸತಿ ನಿಲಯದಲ್ಲಿ ಇರಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಹಳ್ಳಿಖೇಡ (ಕೆ) ವಸತಿ ಶಾಲೆಯಲ್ಲಿ ಸೋಂಕಿತರನ್ನು ಇರಿಸಲಾಗಿತ್ತು. ಅದೇ ರೀತಿ ತಾಲೂಕಿನ ಹಣಕುಣಿ ಗ್ರಾಮದ ಕುಟುಂಬವೊಂದು ಮುಂಬಯಿನಿಂದ ಬಂದಿದ್ದು, 17 ತಿಂಗಳ ಮಗುವಿಗೆ ಸೋಂಕು ಇರುವುದು ಪತ್ತೆಯಾಗಿದೆ. ಮಗುವಿನ ತಂದೆ-ತಾಯಿಗಳ ಜೊತೆಗೆ ಇತರೆ 3 ಜನ ಸಂಬಂಧಿಕರು ಕೂಡ ಪ್ರಯಾಣ ಮಾಡಿ ಗ್ರಾಮ ಸೇರಿದ್ದಾರೆ. ಮುಂಬಯಿನಿಂದ ಆಟೋ ಹಾಗೂ ದ್ವಿಚಕ್ರ ವಾಹನದಲ್ಲಿ ಪ್ರಯಾಣ ಮಾಡಿ ಇಲ್ಲಿಗೆ ಬಂದಿದ್ದಾರೆ. ಇವರ ಸಂಬಂಧಿಕರಾದ ಮೂರು ಜನರು ಕಲಬುರಗಿ ಜಿಲ್ಲೆಯ ಚೂಮನಚೋಡ್‌ ಗ್ರಾಮಕ್ಕೆ ತೆರಳಿದ್ದಾರೆ. ಇವರು ಕೂಡ ಹಳ್ಳಿಖೇಡ (ಕೆ) ವಸತಿ ನಿಲಯದಲ್ಲಿನ ಕ್ವಾರಂಟೈನ್‌ನಲ್ಲಿ ಉಳಿದುಕೊಂಡಿದ್ದು, ಮಗುವಿಗೆ ಪರೀಕ್ಷೆ ನಡೆಸಿದ್ದು, ಇದೀಗ ಪಾಸಿಟಿವ್‌ ವರದಿ ಬಂದಿದೆ. ಇಲ್ಲಿನ ವೈದ್ಯರು 10 ವರ್ಷದ ಒಳಗಿನ ಮಕ್ಕಳಿಗೆ ಮೊದಲ ಆದ್ಯತೆ ನೀಡಿ ಸ್ಯಾಂಪಲ್‌ ತೆಗೆದು ಪರೀಕ್ಷೆಗೆ ಕಳುಹಿಸಿದ ಹಿನ್ನೆಲೆಯಲ್ಲಿ ಮೂರು ಮಕ್ಕಳಲ್ಲಿ ಕೋವಿಡ್ ಪಾಸಿಟಿವ್‌ ಪತ್ತೆಯಾಗಿದೆ.

ಹಳ್ಳಿಖೇಡ (ಕೆ) ಕ್ವಾರಂಟೈನ್‌ ಕೇಂದ್ರಕ್ಕೆ ತಹಶೀಲ್ದಾರ್‌ ನಾಗಯ್ನಾ ಹಿರೇಮಠ, ಕೋವಿಡ್‌ ತಾಲೂಕು ಉಸ್ತುವಾರಿ ಡಾ| ಗೋವಿಂದ, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ ಮೈಲಾರೆ, ಚಿಟಗುಪ್ಪ ಆಸ್ಪತ್ರೆ ಅಧಿಕಾರಿ ಡಾ| ವೀರನಾಥ ಕನಕ, ಪಿಎಸ್‌ಐ ಸುರೇಶ ಭಾವಿಮನಿ ಸೇರಿದಂತೆ ಇತರೆ ಅಧಿಕಾರಿಗಳು ಭೇಟಿ ನೀಡಿ ಪಾಸಿಟಿವ್‌ ಪತ್ತೆಯಾದ ಮಕ್ಕಳನ್ನು ಬೀದರ ಜಿಲ್ಲಾಸ್ಪತ್ರೆಗೆ ಕಳುಹಿಸಿದರು. ಅಲ್ಲದೆ, ಇದೀಗ ಮಕ್ಕಳ ಪಾಲಕರು ಹಾಗೂ ಸಂಪರ್ಕದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಯಾಂಪಲ್‌ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿದೆ.

ಟಾಪ್ ನ್ಯೂಸ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.