ವಿದೇಶದಿಂದ ಬಂದವರ ಮೇಲೆ ನಿಗಾ

ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿವೈದ್ಯರ ಸಂಪರ್ಕಿಸಲು ಸೂಚನೆ ಸಾರ್ವಜನಿಕ ಪ್ರದೇಶದಲ್ಲಿ ಇರದಂತೆ ಸಲಹೆ

Team Udayavani, Mar 16, 2020, 1:34 PM IST

16-March-13

ಹುಮನಾಬಾದ: ಚಿಟಗುಪ್ಪ ತಾಲೂಕಿನ ಎರಡು ಗ್ರಾಮಗಳಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ದುಬೈಯಿಂದ ಬಂದ ಐದು ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಿದೆ.

ನಿರ್ಣಾ ಗ್ರಾಮದ 3 ಜನ ಹಾಗೂ ರಾಮಪೂರ ಗ್ರಾಮದ ಇಬ್ಬರು ಮೂರ್ನಾಲ್ಕು ದಿನಗಳ ಹಿಂದೆ ದುಬೈದಿಂದ ಬಂದಿರುವ ಮಾಹಿತಿ ಪಡೆದ ಆರೋಗ್ಯ ಇಲಾಖೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಆರೋಗ್ಯ ಕುರಿತು ವಿಚಾರಿಸಿದ್ದಾರೆ. ಜ್ವರ, ಕೆಮ್ಮು, ಉಸಿರಾಟ ಸಮಸ್ಯೆ ಕಂಡು ಬಂದ ಕೂಡಲೆ ವೈದ್ಯರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ಒಂದು ವಾರ ಕಾಲ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ, ಜನರು ಹೆಚ್ಚಿರುವ ಕಡೆಗಳಲ್ಲಿ, ಕುಟುಂಬದವರ ಸಮೀಪದಲ್ಲಿ ಇರದಂತೆ ಸೂಚಿಸಲಾಗಿದೆ. ಒಂದೇ ದಿನದಲ್ಲಿ ಕೊರೊನಾ ವೈರಸ್‌ ರೋಗದ ಲಕ್ಷಣಗಳು ಕಂಡು ಬರುವುದಿಲ್ಲ. ಕಾರಣ ವ್ಯಕ್ತಿಗೆ ಬರುವ ಸೋಂಕು ಬೇರೆಯವರಿಗೆ ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಹಿತಿ ನೀಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ ಮೈಲಾರೆ ಮಾಹಿತಿ ನೀಡಿದ್ದಾರೆ.

ಶಕರಗಂಜವಾಡಿ ಗ್ರಾಮ: ತಾಲೂಕಿನ ಶಕರಗಂಜವಾಡಿ ಗ್ರಾಮದಕ್ಕೆ ಅಬುಧಾಬಿ ದೇಶದಿಂದ ಬಂದ ಇಬ್ಬರು ಆರೋಗ್ಯವಾಗಿದ್ದಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಅವರಿಗೆ ಕೂಡ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಕುಟುಂಬದವರು ಹಾಗೂ ಜನರೊಂದಿಗೆ ಬೆರೆಯದಂತೆ ತಿಳಿಸಲಾಗಿದೆ.

ಒಂದು ವಾರದ ಹಿಂದೆ ಹಣಮಂತವಾಡಿ ಗ್ರಾಮದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದು, ಆ ವ್ಯಕ್ತಿ ವಿದೇಶದಿಂದ ಬಂದಿಲ್ಲ. ಬದಲಾಗಿ ಬೆಂಗಳೂರಿನಿಂದ ಬಂದಿದ್ದು, ಅವರಲ್ಲಿ ಕೂಡ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಾಲೂಕು ಆರೋಗ್ಯಾ ಧಿಕಾರಿ ಅಶೋಕ ಮೈಲಾರೆ ಮಾಹಿತಿ ನೀಡಿದ್ದಾರೆ.

ಕಲ್ಯಾಣ ಮಂಟಪ ಬಂದ್‌: ಮುಂದಿನ ಒಂದು ವಾರ ಕಾಲ ಪಟ್ಟಣದ ವಿವಿಧ ಫಂಕ್ಷನ್‌ ಹಾಲ್‌, ಕಲ್ಯಾಣ ಮಂಟಪಗಳಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಅವಕಾಶ ನೀಡಬಾರದು ಎಂದು ಪಟ್ಟಣದ ಪುರಸಭೆ ಅಧಿಕಾರಿಗಳು ಕಲ್ಯಾಣ ಮಂಟಪಗಳ ಮುಖ್ಯಸ್ಥರಿಗೆ ನೋಟಿಸ್‌ ನೀಡಿ ಮಾಹಿತಿ ನೀಡಿದ್ದಾರೆ. ಕೊರೊನಾ ವೈರಸ್‌ ಹಾವಳಿ ಕಡಿಮೆ ಆಗುವವರೆಗೆ ಯಾವುದೇ ಕಾರ್ಯಕ್ರಮಗಳು ನಡೆಯದಂತೆ ನೋಡಿಕೊಳ್ಳಿ. ಕಾನೂನು ಮೀರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವುದಾಗಿ ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಶಾಯಿ ತಿಳಿಸಿದ್ದಾರೆ.

ಹಳ್ಳಿಖೇಡದಲ್ಲಿ ಮುಂಜಾಗ್ರತೆ ಕ್ರಮ: ಹಳ್ಳಿಖೇಡ(ಬಿ) ಪಟ್ಟಣದಲ್ಲಿ ರವಿವಾರ ಸ್ವಚ್ಛತಾ ಕಾರ್ಯಕ್ರಮಗಳು ಜರುಗಿದವು. ಕೊರೊನಾ ವೈರಸ್‌ ಸೇರಿದಂತೆ ಇತರೆ ಯಾವುದೇ ಸೋಂಕು ಹರಡದಂತೆ ಎಲ್ಲ ಕಡೆಗಳಲ್ಲಿ ಕ್ರಿಮಿನಾಶಕ ಸಿಂಪಡನೆ ಮಾಡಲಾಗಿದೆ. ಅಲ್ಲದೆ, ಸೋಮವಾರದಿಂದ ಬೀದಿಬದಿ ಆಹಾರ ಮಾರಾಟ ನಿಷೇಧಿಸಲಾಗಿದೆ.

ಹಳ್ಳಿಖೇಡ ಪಟ್ಟಣದಲ್ಲಿ ಕಲ್ಯಾಣ ಮಂಟಪಗಳಿಗೂ ಸೂಚನೆ ನೀಡಿದ್ದು, ವಾರ ಕಾಲ ಯಾವುದೇ ಸಭೆ, ಸಮಾರಂಭ ಮಾಡಂದತೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಬೇಕರಿ ಹಾಗೂ ಹೋಟೆಲ್‌ ಗಳ ಮಾಲೀಕರ ಸಭೆ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಲಾಗಿದೆ. ಅಲ್ಲದೆ, ಪಟ್ಟಣದಲ್ಲಿ ಹಂದಿಗಳನ್ನು ಸದ್ಯಕ್ಕೆ ಬೇರೆಕಡೆಗೆ ಸಾಗಿಸುವಂತೆ ಹಂದಿಗಳ ಮಾಲೀಕರಿಗೆ ನೋಟಿಸ್‌ ನೀಡಿ ತಿಳಿವಳಿಕೆ ನೀಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಯೂಸುಫ್‌ ಮಾಹಿತಿ ನೀಡಿದ್ದಾರೆ.

ಮಾಂಸದ ಅಂಗಡಿ ಬಂದ್‌: ಚಿಟಗುಪ್ಪ ತಾಲೂಕಿನ ಮನ್ನಾಏಖೇಳ್ಳಿ ಗ್ರಾಮ ಪಂಚಾಯತ ವತಿಯಿಂದ ಕೊರೊನಾ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಸಭೆ ನಡೆಸಿದ್ದು, ಗ್ರಾಮದ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್‌ ಮಾಡುವಂತೆ ಗ್ರಾಮ ಪಂಚಾಯತ ಅಧ್ಯಕ್ಷ ಸಂತೋಷ ಹಳ್ಳಿಖೇಡಕರ್‌ ತಿಳಿಸಿದ್ದಾರೆ.

ಅಲ್ಲದೆ, ಗ್ರಾಮದಲ್ಲಿನ ಹೋಟೆಲ್‌, ಬೇಕರಿ, ತಳ್ಳುವ ಬಂಡಿಗಳು ಮಾರಾಟ ಮಾಡುವ ಆಹಾರವನ್ನು ಸದ್ಯಕ್ಕೆ ನಿಲ್ಲಿಸಬೇಕು. ಕೊರೊನಾ ಸೋಂಕಿನ ಹಾವಳಿ ಕಡಿಮೆ ಆಗುವರೆಗೆ ಜನರು ಸಹಕಾರ ನೀಡಬೇಕು. ರಾಷ್ಟ್ರೀಯ ಹದ್ದಾರಿಗೆ ಅಂಟಿಕೊಂಡು ಗ್ರಾಮ ಇರುವ ಕಾರಣ ಎಲ್ಲ ಗ್ರಾಮಸ್ಥರು ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.