ವಿದೇಶದಿಂದ ಬಂದವರ ಮೇಲೆ ನಿಗಾ

ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿವೈದ್ಯರ ಸಂಪರ್ಕಿಸಲು ಸೂಚನೆ ಸಾರ್ವಜನಿಕ ಪ್ರದೇಶದಲ್ಲಿ ಇರದಂತೆ ಸಲಹೆ

Team Udayavani, Mar 16, 2020, 1:34 PM IST

16-March-13

ಹುಮನಾಬಾದ: ಚಿಟಗುಪ್ಪ ತಾಲೂಕಿನ ಎರಡು ಗ್ರಾಮಗಳಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ದುಬೈಯಿಂದ ಬಂದ ಐದು ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಿದೆ.

ನಿರ್ಣಾ ಗ್ರಾಮದ 3 ಜನ ಹಾಗೂ ರಾಮಪೂರ ಗ್ರಾಮದ ಇಬ್ಬರು ಮೂರ್ನಾಲ್ಕು ದಿನಗಳ ಹಿಂದೆ ದುಬೈದಿಂದ ಬಂದಿರುವ ಮಾಹಿತಿ ಪಡೆದ ಆರೋಗ್ಯ ಇಲಾಖೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಆರೋಗ್ಯ ಕುರಿತು ವಿಚಾರಿಸಿದ್ದಾರೆ. ಜ್ವರ, ಕೆಮ್ಮು, ಉಸಿರಾಟ ಸಮಸ್ಯೆ ಕಂಡು ಬಂದ ಕೂಡಲೆ ವೈದ್ಯರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ಒಂದು ವಾರ ಕಾಲ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ, ಜನರು ಹೆಚ್ಚಿರುವ ಕಡೆಗಳಲ್ಲಿ, ಕುಟುಂಬದವರ ಸಮೀಪದಲ್ಲಿ ಇರದಂತೆ ಸೂಚಿಸಲಾಗಿದೆ. ಒಂದೇ ದಿನದಲ್ಲಿ ಕೊರೊನಾ ವೈರಸ್‌ ರೋಗದ ಲಕ್ಷಣಗಳು ಕಂಡು ಬರುವುದಿಲ್ಲ. ಕಾರಣ ವ್ಯಕ್ತಿಗೆ ಬರುವ ಸೋಂಕು ಬೇರೆಯವರಿಗೆ ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಹಿತಿ ನೀಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ ಮೈಲಾರೆ ಮಾಹಿತಿ ನೀಡಿದ್ದಾರೆ.

ಶಕರಗಂಜವಾಡಿ ಗ್ರಾಮ: ತಾಲೂಕಿನ ಶಕರಗಂಜವಾಡಿ ಗ್ರಾಮದಕ್ಕೆ ಅಬುಧಾಬಿ ದೇಶದಿಂದ ಬಂದ ಇಬ್ಬರು ಆರೋಗ್ಯವಾಗಿದ್ದಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಅವರಿಗೆ ಕೂಡ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಕುಟುಂಬದವರು ಹಾಗೂ ಜನರೊಂದಿಗೆ ಬೆರೆಯದಂತೆ ತಿಳಿಸಲಾಗಿದೆ.

ಒಂದು ವಾರದ ಹಿಂದೆ ಹಣಮಂತವಾಡಿ ಗ್ರಾಮದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದು, ಆ ವ್ಯಕ್ತಿ ವಿದೇಶದಿಂದ ಬಂದಿಲ್ಲ. ಬದಲಾಗಿ ಬೆಂಗಳೂರಿನಿಂದ ಬಂದಿದ್ದು, ಅವರಲ್ಲಿ ಕೂಡ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಾಲೂಕು ಆರೋಗ್ಯಾ ಧಿಕಾರಿ ಅಶೋಕ ಮೈಲಾರೆ ಮಾಹಿತಿ ನೀಡಿದ್ದಾರೆ.

ಕಲ್ಯಾಣ ಮಂಟಪ ಬಂದ್‌: ಮುಂದಿನ ಒಂದು ವಾರ ಕಾಲ ಪಟ್ಟಣದ ವಿವಿಧ ಫಂಕ್ಷನ್‌ ಹಾಲ್‌, ಕಲ್ಯಾಣ ಮಂಟಪಗಳಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಅವಕಾಶ ನೀಡಬಾರದು ಎಂದು ಪಟ್ಟಣದ ಪುರಸಭೆ ಅಧಿಕಾರಿಗಳು ಕಲ್ಯಾಣ ಮಂಟಪಗಳ ಮುಖ್ಯಸ್ಥರಿಗೆ ನೋಟಿಸ್‌ ನೀಡಿ ಮಾಹಿತಿ ನೀಡಿದ್ದಾರೆ. ಕೊರೊನಾ ವೈರಸ್‌ ಹಾವಳಿ ಕಡಿಮೆ ಆಗುವವರೆಗೆ ಯಾವುದೇ ಕಾರ್ಯಕ್ರಮಗಳು ನಡೆಯದಂತೆ ನೋಡಿಕೊಳ್ಳಿ. ಕಾನೂನು ಮೀರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವುದಾಗಿ ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಶಾಯಿ ತಿಳಿಸಿದ್ದಾರೆ.

ಹಳ್ಳಿಖೇಡದಲ್ಲಿ ಮುಂಜಾಗ್ರತೆ ಕ್ರಮ: ಹಳ್ಳಿಖೇಡ(ಬಿ) ಪಟ್ಟಣದಲ್ಲಿ ರವಿವಾರ ಸ್ವಚ್ಛತಾ ಕಾರ್ಯಕ್ರಮಗಳು ಜರುಗಿದವು. ಕೊರೊನಾ ವೈರಸ್‌ ಸೇರಿದಂತೆ ಇತರೆ ಯಾವುದೇ ಸೋಂಕು ಹರಡದಂತೆ ಎಲ್ಲ ಕಡೆಗಳಲ್ಲಿ ಕ್ರಿಮಿನಾಶಕ ಸಿಂಪಡನೆ ಮಾಡಲಾಗಿದೆ. ಅಲ್ಲದೆ, ಸೋಮವಾರದಿಂದ ಬೀದಿಬದಿ ಆಹಾರ ಮಾರಾಟ ನಿಷೇಧಿಸಲಾಗಿದೆ.

ಹಳ್ಳಿಖೇಡ ಪಟ್ಟಣದಲ್ಲಿ ಕಲ್ಯಾಣ ಮಂಟಪಗಳಿಗೂ ಸೂಚನೆ ನೀಡಿದ್ದು, ವಾರ ಕಾಲ ಯಾವುದೇ ಸಭೆ, ಸಮಾರಂಭ ಮಾಡಂದತೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಬೇಕರಿ ಹಾಗೂ ಹೋಟೆಲ್‌ ಗಳ ಮಾಲೀಕರ ಸಭೆ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಲಾಗಿದೆ. ಅಲ್ಲದೆ, ಪಟ್ಟಣದಲ್ಲಿ ಹಂದಿಗಳನ್ನು ಸದ್ಯಕ್ಕೆ ಬೇರೆಕಡೆಗೆ ಸಾಗಿಸುವಂತೆ ಹಂದಿಗಳ ಮಾಲೀಕರಿಗೆ ನೋಟಿಸ್‌ ನೀಡಿ ತಿಳಿವಳಿಕೆ ನೀಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಯೂಸುಫ್‌ ಮಾಹಿತಿ ನೀಡಿದ್ದಾರೆ.

ಮಾಂಸದ ಅಂಗಡಿ ಬಂದ್‌: ಚಿಟಗುಪ್ಪ ತಾಲೂಕಿನ ಮನ್ನಾಏಖೇಳ್ಳಿ ಗ್ರಾಮ ಪಂಚಾಯತ ವತಿಯಿಂದ ಕೊರೊನಾ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಸಭೆ ನಡೆಸಿದ್ದು, ಗ್ರಾಮದ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್‌ ಮಾಡುವಂತೆ ಗ್ರಾಮ ಪಂಚಾಯತ ಅಧ್ಯಕ್ಷ ಸಂತೋಷ ಹಳ್ಳಿಖೇಡಕರ್‌ ತಿಳಿಸಿದ್ದಾರೆ.

ಅಲ್ಲದೆ, ಗ್ರಾಮದಲ್ಲಿನ ಹೋಟೆಲ್‌, ಬೇಕರಿ, ತಳ್ಳುವ ಬಂಡಿಗಳು ಮಾರಾಟ ಮಾಡುವ ಆಹಾರವನ್ನು ಸದ್ಯಕ್ಕೆ ನಿಲ್ಲಿಸಬೇಕು. ಕೊರೊನಾ ಸೋಂಕಿನ ಹಾವಳಿ ಕಡಿಮೆ ಆಗುವರೆಗೆ ಜನರು ಸಹಕಾರ ನೀಡಬೇಕು. ರಾಷ್ಟ್ರೀಯ ಹದ್ದಾರಿಗೆ ಅಂಟಿಕೊಂಡು ಗ್ರಾಮ ಇರುವ ಕಾರಣ ಎಲ್ಲ ಗ್ರಾಮಸ್ಥರು ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.