ಹುಮನಾಬಾದ ಸರ್ಕಾರಿ ಆಸ್ಪತ್ರೆಯಲ್ಲಿ 50 ಬೆಡ್‌ ಭರ್ತಿ!


Team Udayavani, Apr 25, 2021, 6:21 PM IST

ಹುಮನಾಬಾದ ಸರ್ಕಾರಿ ಆಸ್ಪತ್ರೆಯಲ್ಲಿ 50 ಬೆಡ್‌ ಭರ್ತಿ!

ಹುಮನಾಬಾದ: ಕೋವಿಡ್ ಮಹಾಮಾರಿ ಹುಮನಾಬಾದ ಹಾಗೂ ಚಿಟಗುಪ್ಪ ತಾಲೂಕಿನಲ್ಲಿ ಕೂಡ ಹೆಚ್ಚಿನ ಪ್ರಭಾವಬಿರುತ್ತಿದೆ. ಎರಡು ತಾಲೂಕಿನಲ್ಲಿ ಒಟ್ಟಾರೆ 178 ಜನ ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ. ಹುಮನಾಬಾದ ಪಟ್ಟಣದಸರ್ಕಾರಿ ಆಸ್ಪತ್ರೆಯಲ್ಲಿನ 50 ಬೆಡ್‌ಗಳು ಭರ್ತಿಯಾಗಿವೆ.

ಪಟ್ಟಣದ ಆಸ್ಪತ್ರೆಯಲ್ಲಿ ಒಟ್ಟಾರೆ 100 ಬೆಡ್‌ಗಳಿದ್ದು, 50 ಬೆಡ್‌ಗಳು ಕೊವೀಡ್‌ ಕೇರ್‌ ಸೆಂಟರ್‌ಗೆ ಮೀಸಲಿರಿಸಲಾಗಿತ್ತು. ಶನಿವಾರಕ್ಕೆ ಎಲ್ಲಾ ಬೆಡ್‌ಗಳುಭರ್ತಿಯಾಗಿದ್ದು, ಇದೀಗ ಹಳ್ಳಿಖೇಡ(ಬಿ) ಪಟ್ಟಣದಲ್ಲಿನ ಆಸ್ಪತ್ರೆಯಲ್ಲಿ 15 ಬೆಡ್‌, ಮನ್ನಾಎಖೇಳ್ಳಿ ಆಸ್ಪತ್ರೆಯಲ್ಲಿ 15 ಬೆಡ್‌ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಚಿಟಗುಪ್ಪ ಪಟ್ಟಣದಲ್ಲಿನ ಆಸ್ಪತ್ರೆಯಲ್ಲಿ 15 ಬೆಡ್‌ಗಳ ವ್ಯವಸ್ಥೆ ಇದ್ದು, ಇಬ್ಬರು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಒಂದೇ ದಿನ ಎರಡು ತಾಲೂಕಿನಲ್ಲಿ 51 ಪ್ರಕರಣಗಳು ಪತ್ತೆಯಾಗಿರುವ ಕುರಿತು ಆರೋಗ್ಯ ಇಲಾಖೆ ಖಚಿತ ಪಡಿಸಿದ್ದು, ಕೆಲ ದಿನಗಳಲ್ಲಿಯೇಎಲ್ಲಾ ಕಡೆಗಳಲ್ಲಿನ ಬೆಡ್‌ಗಳು ಭರ್ತಿಯಾಗಿ ಬೆಡ್‌ಗಳ ಅಭಾವ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಸೋಂಕಿನ ಯಾವುದೇ ಲಕ್ಷಣಇಲ್ಲದ ಜನರನ್ನು ಮನೆಯಲ್ಲಿ ಆರೈಕೆಮಾಡಿಕೊಳ್ಳಲು ಅವಕಾಶ ನೀಡಿದ್ದು, ಅಲ್ಪಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳುಕಂಡು ಬರುವ ಜನರನ್ನು ಇದೀಗ ಹೊಸ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಇರಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ.

ಯಾರಿಗೆ ಸೋಂಕಿನ ಲಕ್ಷಣಗಳು ಹೆಚ್ಚಾಗಿ ಆಕ್ಸಿಜನ್‌ ನೀಡಬೇಕಾದ ಅನಿವಾರ್ಯತೆ ಇರುತ್ತದೆಯೋ ಅವರನ್ನು ಆಕ್ಸಿಜನ್‌ ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತದೆ. ಹುಮನಾಬಾದ ಪಟ್ಟಣದಹೊರವಲಯದಲ್ಲಿನ ರಾಜರಾಜೇಶ್ವರಿಕಾಲೇಜಿನಲ್ಲಿ 50 ಬೆಡ್‌ ಹಾಗೂ ಚಿಟಗುಪ್ಪಪಟ್ಟಣದ ಬಿಸಿಎಂ ವಸತಿ ನಿಲಯದಲ್ಲಿ36 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆಎಂದು ತಾಲೂಕು ಆರೋಗ್ಯಾಧಿ ಕಾರಿ ಮಾಹಿತಿ ನೀಡಿದ್ದಾರೆ. ಆರಂಭಗೊಂಡಿಲ್ಲ

ವೆಂಟಿಲೇಟರ್‌: ಹುಮನಾಬಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೋಟಿಗಳ ಲೆಕ್ಕದಲ್ಲಿ ಹಣಖರ್ಚು ಮಾಡಿ ವಿಶೇಷ ಐಸಿಯು ಘಟಕ ಹಾಗೂ 5 ವೆಂಟಿಲೇಟರ್‌ಗಳ ವ್ಯವಸ್ಥೆಮಾಡಲಾಗಿದೆ. ಆದರೆ, ನೂರಿತ ತಜ್ಞಸಿಬ್ಬಂದಿ ಇಲ್ಲದ ಕಾರಣ ವೆಂಟಿಲೇಟರ್‌ಗಳುಕಾರ್ಯ ನಿರ್ವಹಿಸುತ್ತಿಲ್ಲ. ಕೆಲ ದಿನಗಳಹಿಂದೆ ನೂರಿತ ಸಿಬ್ಬಂದಿ ನೇಮಕ ಮಾಡುವಬಗ್ಗೆ ಜಿಲ್ಲಾ ಆರೋಗ್ಯಾ ಧಿಕಾರಿಗಳು ಭರವಸೆನೀಡಿದ್ದರು. ಆದರೆ, ಈ ವರೆಗೂ ಸಿಬ್ಬಂದಿಗಳನೇಮಕವಾಗದ ಹಿನ್ನೆಲೆಯಲ್ಲಿ ಬಹುತೇಕಜನರು ಜಿಲ್ಲಾಸ್ಪತ್ರೆ, ಕಲಬುರಗಿ ಆಸ್ಪತ್ರೆ,ಹೈದ್ರಾಬಾದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡುವ ಸ್ಥಿತಿ ಬಂದಿದೆ.

ಬೇರೆ ತಾಲೂಕಿನವರು ದಾಖಲು:ಹುಮನಾಬಾದ ಸರ್ಕಾರಿ ಆಸ್ಪತ್ರೆಯಲ್ಲಿಎಲ್ಲಾ ರೀತಿಯ ಮೂಲ ಸೌಕರ್ಯಇರುವ ಕುರಿತು ಮಾಹಿತಿ ಪಡೆದಜಿಲ್ಲೆಯ ಇತರೆ ತಾಲೂಕಿನ ಸೋಂಕಿತರಕುಟುಂಬದವರು ನೇರವಾಗಿ ಇಲ್ಲಿಗೆ ಬಂದುದಾಖಲಾಗುತ್ತಿದ್ದಾರೆ. 50 ಸೋಂಕಿತರಪೈಕಿ 10ಕ್ಕೂ ಹೆಚ್ಚಿನ ಸೋಂಕಿತರು ಬೇರೆ ತಾಲೂಕಿನವರು ಇದ್ದಾರೆ ಎಂದು ಆಸ್ಪತ್ರೆಯವೈದ್ಯಾಧಿಕಾರಿ ಡಾ| ನಾಗನಾಥ ಹುಲಸೂರೆ ಮಾಹಿತಿ ನೀಡಿದ್ದಾರೆ.

ಸದ್ಯ ಹುಮನಾಬಾದ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಬೆಡ್‌ಗಳುಭರ್ತಿಯಾಗುತ್ತಿದ್ದು, ರಾಜ ರಾಜೇಶ್ವರಿ ಆರ್ಯುವೇದ ಕಾಲೇಜಿನಲ್ಲಿ50 ಬೇಡ್‌ ಕೋವಿಡ್‌ ಕೇರ್‌ ಸೆಂಟರ್‌ ತೆರೆದು ಮೂಲ ಸೌಕರ್ಯಒದಗಿಸಿದ್ದೇನೆ. ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳುಲಭ್ಯವಿದೆ. ಆದರೆ, ನೂರಿತ ತಜ್ಞರು ಇಲ್ಲದ ಕಾರಣ ಅವುಗಳುಕಾರ್ಯ ನಿರ್ವಹಿಸುತ್ತಿಲ್ಲ. ಈ ಕುರಿತು ಜಿಲ್ಲಾ ಆರೋಗ್ಯಾ ಧಿಕಾರಿಹಾಗೂ ಜಿಲ್ಲಾಧಿಕಾರಿಗಳು ವಿಶೇಷ ಗಮನ ಹರಿಸಿ ಕೂಡಲೇ ನೂರಿತ ಸಿಬ್ಬಂದಿ ನೇಮಕ ಮಾಡುವಂತೆ ತಿಳಿಸಿದ್ದೇನೆ.  –ಡಾ| ಚಂದ್ರಶೇಖರ ಪಾಟೀಲ, ವಿಧಾನ ಪರಿಷತ್‌ ಸದಸ್ಯ

ಪ್ರತಿನಿತ್ಯ ಕೊವೀಡ್‌ ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸೋಂಕಿನ ಯಾವುದೇ ಲಕ್ಷಣ ಇಲ್ಲದ ವ್ಯಕ್ತಿಗಳನ್ನು ಮನೆಯಲ್ಲಿಯೇಆರೈಕೆಗೆ ಸೂಚಿಸಲಾಗುತ್ತಿದೆ. ಸಾಧಾರಣ ಲಕ್ಷಣ ಕಂಡು ಬರುವವ್ಯಕ್ತಿಗಳನ್ನು ಕೊವೀಡ್‌ ಕೇರ್‌ ಸೆಂಟರ್‌ನಲ್ಲಿ ಆರೈಕೆ ಮಾಡಲುಸೂಚಿಸಲಾಗಿದೆ. ಸೋಂಕಿನ ಲಕ್ಷಣಗಳು ಕಂಡು ಬಂದು ಆಕ್ಸಿಜನ್‌ನೀಡಬೇಕಾದ ಸ್ಥಿತಿಯಲ್ಲಿರುವ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. – ಡಾ| ಶಿವಕುಮಾರ ಸಿದ್ದೇಶ್ವರ, ತಾಲೂಕು ಆರೋಗ್ಯಾಧಿಕಾರಿ

 

-ದುರ್ಯೋಧನ ಹೂಗಾರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.