ಪತ್ನಿ-ಮಗನನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಕಥೆ ಕಟ್ಟಿದ ಪತಿ: ಕೌಟುಂಬಿಕ ಕಲಹ ಕಾರಣವಾಯಿತೇ..?
Team Udayavani, May 19, 2022, 6:58 PM IST
ಹುಮನಾಬಾದ್ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನೊಬ್ಬ ತನ್ನ ಹೆಂಡತಿ ಹಾಗೂ ಮಗನನ್ನು ಬಾವಿಗೆ ತಳ್ಳಿದ ಘಟನೆಯೊಂದು ತಾಲೂಕಿನ ಸೋನಕಕೇರಾ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಘಟನೆಯಲ್ಲಿ ಸೋನಕೇರಾ ಗ್ರಾಮದ ಗೀತಾ (30) ಹಾಗೂ ಆಕೆಯ ಒಂದುವರೆ ವರ್ಷದ ಮಗ ವಿಶ್ವ ಬಾವಿಯಲ್ಲಿ ಮೃತಪಟ್ಟಿದ್ದಾರೆ. ಮೃತಳ ಗಂಡ ವರಬಟ್ಟಿ(ಬಿ) ಮೂಲದ ಅಂಕುಶ ಪತ್ನಿ-ಮಗುವನ್ನು ಭಾವಿಗೆ ಹಾಕಿ ಕೊಲೆ ಮಾಡಿದ್ದಾನೆಂದು ಆರೋಪಿಸಿ ಕುಟುಂಬಸ್ಥರು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಳೆದ ನಾಲ್ಕು ವರ್ಷಗಳ ಹಿಂದೆ ಇವರ ಮದುವೆಯಾಗಿದ್ದು, ಕುಟುಂಬದಲ್ಲಿ ನಿರಂತರ ಕಲಹಗಳು ನಡೆಯುತ್ತಿದ್ದವು. ಮೃತಳ ಗಂಡ ಅಂಕುಶ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಕುಟುಂಬದಲ್ಲಿ ಕಲಹಗಳು ಉಂಟಾಗಿದ್ದವು. ಅಲ್ಲದೆ ಈ ಕುರಿತು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದರು. ನಂತರ ರಾಜಿ ಸಂಧಾನ ಮಾಡಿಕೊಂಡು ಹೆಂಡತಿಯನ್ನು ಊರಿಗೆ ಕರೆದುಕೊಂಡು ಹೋಗಿದ್ದ ಗಂಡ ಗುರುವಾರ ಬೆಳಿಗ್ಗೆ ಮರಳಿ ಹೆಂಡತಿ ಊರಿಗೆ(ಸೋನಕೇರಾ ಗ್ರಾಮಕ್ಕೆ) ಬಂದಿದ್ದಾರೆ. ಈ ಸಂದರ್ಭದಲ್ಲಿ ಹೆಂಡತಿ ಮಗನೊಂದಿಗೆ ಹೊಲದಲ್ಲಿನ ಬಾವಿ ಕಡೆಗೆ ತೆರಳಿದ್ದು, ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅಂಕುಶ್ ಹೇಳುತ್ತಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಎಸ್ಎಸ್ಎಲ್ ಸಿ ಫಲಿತಾಂಶ: ಕುಮಟಾ ತಾಲೂಕಿನ ಮೂವರು ವಿದ್ಯಾರ್ಥಿಗಳು ಟಾಪರ್
ಸದ್ಯ ಘಟನೆಯ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಂಕುಶನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…