ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ : ಓಡುವ ಭರದಲ್ಲಿ ಬ್ಯಾಗನ್ನೇ ಬಿಟ್ಟು ಹೋದರು
Team Udayavani, Jul 19, 2022, 3:02 PM IST
ಹುಮನಾಬಾದ್ : ಪಟ್ಟಣದಲ್ಲಿ ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ದರೋಡೆಕೋರರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆಯೊಂದು ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಸರ್ವಿಸ್ ರಸ್ತೆಯಲ್ಲಿರುವ ಅರವಿಂದ್ ಧುಮಳೆ ಅವರ ಮನೆಯಲ್ಲಿ ದರೋಡೆ ನಡೆದಿದೆ. ಮನೆಯಲ್ಲಿ ಮಹಿಳೆಯರಿದ್ದು, ದರೋಡೆಕೋರರು ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿ ಚಿನ್ನಾಭರಣ ದೋಚಿದ್ದಾರೆ. ಸುಮಾರು ಹತ್ತು ತೊಲೆಗೂ ಅಧಿಕ ಭಾರದ ಬಂಗಾರದ ಆಭರಣಗಳು ಲೂಟಿ ಮಾಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮನೆಗೆ ನುಗ್ಗಿದ ವ್ಯಕ್ತಿಗಳು ಮೊದಲಿಗೆ ಮನೆ ಕೆಲಸ ಮಾಡುವ ಮುನ್ಯಮ್ಮ ಎಂಬ ಮಹಿಳೆಯ ಬಾಯಿ ಒತ್ತಿಹಿಡಿದು ಮನೆಯೊಳಗೆ ನುಗ್ಗಿದ್ದಾರೆ. ಜೊತೆಯಲ್ಲಿ ಮಾರಕಾಸ್ತ್ರಗಳು ತೆಗೆದುಕೊಂಡು ಬಂದಿದ್ದು, ಮಹಿಳೆಯರಿಗೆ ಚಾಕು ತೋರಿಸಿ ದರೋಡೆ ಮಾಡಿದ್ದಾರೆ. ಓಡಿ ಹೋಗುವ ಭರದಲ್ಲಿ ಬ್ಯಾಗ್ ಬಿಟ್ಟು ಪರಾರಿಯಾಗಿದ್ದಾರೆ ಎಂದು ಮನೆ ಕೆಲಸದ ಮಹಿಳೆ ತಿಳಿಸಿದ್ದಾರೆ.
ಸ್ಥಳಕ್ಕೆ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ : ಇಲಕಲ್ ಬಳಿ ಖಾಸಗಿ ಬಸ್ ಅಪಘಾತ: ಅಪಾಯದಿಂದ ಪಾರಾದ ವಿಜಯಪುರ ಗಾಣಿಗ ವನಶ್ರೀ ಮಠದಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ