ಹುಮನಾಬಾದ್: ಭೀಕರ ರಸ್ತೆ ಅಪಘಾತ, ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ
Team Udayavani, Jul 13, 2023, 1:48 PM IST
ಹುಮನಾಬಾದ್ : ತಾಲೂಕಿನ ಮಾಣಿಕನಗರ- ಕನಕಟ್ಟಾ ಗ್ರಾಮದ ರಸ್ತೆಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಓರ್ವ ಯುವಕ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ್ ಗ್ರಾಮದ ರೋಹಿತ್ ಮಾಣಿಕ್ (23) ಸ್ಥಳದಲ್ಲಿಯೇ ಮೃತಪಟ್ಟ ಯುವಕ. ಈತನ ಜೊತೆಗೆ ಇದ್ದ ಇನ್ನೂ ಇಬ್ಬರು ಶಿವಕುಮಾರ್ ಹಾಗೂ ಶ್ರೀಕಾಂತ್ ಗಂಭೀರ ಗಾಯಗೊಂಡಿದ್ದು, ಇವರ ಸ್ಥಿತಿ ಕೂಡ ಚಿಂತಾಜನಕವಾಗಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಭೀಕರ ಅಪಘಾತ ಕುರಿತು ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಹೇಗೆ ಅಪಘಾತ ಸಂಭವಿಸಿದೆ? ದ್ವಿಚಕ್ರ ವಾಹನಕ್ಕೆ ಹೇಗೆ ಬೆಂಕಿ ಹತ್ತಿಕೊಂಡಿತ್ತು ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವಾಹನವೊಂದು ಅತಿ ವೇಗದಲ್ಲಿ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಸಂಭವಿಸಿರಬೇಕು. ಅಪಘಾತದ ರಭಸಕ್ಕೆ ಮೃತಪಟ್ಟ ಯುವಕನ ರುಂಡ ಕೂಡ ಬೇರ್ಪಟ್ಟಿರಬೇಕು. ವಾಹನಕ್ಕೂ ಕೂಡ ಬೆಂಕಿ ಹೊತ್ತಿಕೊಂಡು ಬೈಕ್ ಸುಟ್ಟಿರಬೇಕು ಎಂದು ಪೊಲೀಸ್ ಅಧಿಕಾರಿಗಳು ಊಹಿಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಗಳ ಹೆಚ್ಚಿನ ತನಿಖೆಯ ನಂತರ ಘಟನೆಯ ಪೂರ್ಣ ವಿವರ ಹೊರಬರಲಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೂಡಿಗೆರೆ: ಶಾಲೆಯಲ್ಲಿ ಪಾಠ ಕೇಳಬೇಕಾದ ಮಕ್ಕಳು ಬಿಸಿಯೂಟಕ್ಕೆ ನೀರು ತರಲು ಹೋದರೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ