ಖಾತ್ರಿ ಯೋಜನೆಯಡಿ ಕೆಲಸ
Team Udayavani, May 15, 2020, 1:18 PM IST
ಸಾಂದರ್ಭಿಕ ಚಿತ್ರ
ಹುಣಸಗಿ: ಗೋವಾ-ಮಹಾರಾಷ್ಟ್ರ ರಾಜ್ಯದಿಂದ ಗುಳೆ ಕಾರ್ಮಿಕರು ಈಗಾಗಲೇ ಸುರಪುರ ಕ್ಷೇತ್ರದಲ್ಲಿ ಬಂದಿದ್ದಾರೆ. ಅವರಿಗೆ ಉದ್ಯೋಗ ಚೀಟಿ ಕೊಡಿಸಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡಲು ಪಂಚಾಯತ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ನರಸಿಂಹನಾಯಕ (ರಾಜುಗೌಡ) ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನ್ಯ ರಾಜ್ಯಗಳಿಗೆ ಗುಳೆ ಹೋಗಿದ್ದ ಕಾರ್ಮಿಕರು ಲಾಕ್ ಡೌನ್ನಿಂದ ಅಲ್ಲಿಂದ ಬರಲಾಗದೇ ಸಮಸ್ಯೆ ಎದುರಿಸುತ್ತಿದ್ದರು. ಅವರ ಪರಿಸ್ಥಿತಿ ಮನಗೊಂಡು ಸ್ವಂತ ಖರ್ಚಿನಲ್ಲಿ 10 ಬಸ್ಗಳ ಸೌಕರ್ಯ ಕಲ್ಪಿಸಿ ಕಾರ್ಮಿಕರನ್ನು ಕರೆ ತರಲಾಗಿದೆ. ಇಂಥವರಿಗೆ ನರೇಗಾದಲ್ಲಿ ಉದ್ಯೋಗ ಒದಗಿಸಲಾಗುವುದು ಎಂದರು.
ಸುಮಾರು 800ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ನಂತರ ಅವರು ತಮ್ಮ ಸ್ವ-ಗ್ರಾಮಗಳಿಗೆ ತೆರಳಿದಾಗ ಕೆಲಸವಿಲ್ಲದೆ ಕಷ್ಟವಾಗುತ್ತದೆ. ಈ ಸಮಸ್ಯೆ ತಪ್ಪಿಸಲು ಉದ್ಯೋಗ ಖಾತ್ರಿ ಯೋಜನೆಯಡಿ ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಕ್ಷೇತ್ರದಲ್ಲಿ ಈಗಾಗಲೇ ಕ್ವಾರಂಟೈನ್ ಮುಗಿದ ಬಹುತೇಕ ಕಾರ್ಮಿಕರು ಗ್ರಾಪಂ ವತಿಯಿಂದ ಉದ್ಯೋಗ ಖಾತ್ರಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗ ಚೀಟಿ ಹೊಂದಿರದವರಿಗೆ ಜಾಬ್ ಕಾರ್ಡ್ ನೀಡಲು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು