ಐಸಿಯು ಎಸಿ ಹಾಳು; ರೋಗಿಗಳ ಗೋಳು

•ಸರ್ಕಾರಿ ಆಸ್ಪತ್ರೆಗೆ ಮನೆಯಿಂದ ಫ್ಯಾನ್‌ ತರಬೇಕು•ಸಮಸ್ಯೆಯ ಅರಿವಿದ್ದರೂ ಸ್ಪಂದಿಸದ ಅಧಿಕಾರಿಗಳು

Team Udayavani, May 22, 2019, 8:18 AM IST

bdr-tdy-1..

ಬೀದರ: ನಗರದ ಜಿಲ್ಲಾಸ್ಪತ್ರೆಯ ವಾರ್ಡ್‌-46ರ ಐಸಿಯು ಘಟಕದಲ್ಲಿ ಎಸಿ ಕೆಟ್ಟಿರುವುದರಿಂದ ರೋಗಿ ಮನೆಯಿಂದ ಫ್ಯಾನ್‌ ತಂದು ಬಳಸುತ್ತಿರುವುದು.

ಬೀದರ: ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿನ ಹವಾನಿಯಂತ್ರಿತ (ಎಸಿ)ವ್ಯವಸ್ಥೆ ಎರಡು ದಿನಗಳಿಂದ ಕೈ ಕೊಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯಲು ಬರುವ ರೋಗಿಗಳು ಮನೆಯಿಂದ ಫ್ಯಾನ್‌ ತರುವ ಅನಿವಾರ್ಯತೆ ಎದುರಾಗಿದೆ.

ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಯ ತುರ್ತು ನಿಗಾ ಘಟಕ (ಐಸಿಯು)ದಲ್ಲಿ ಹವಾನಿಯಂತ್ರಿತ (ಎಸಿ) ಯಂತ್ರಗಳಿವೆ. ಆದರೆ, ಅವು ದುರಸ್ತಿಯಲ್ಲಿರುವುದರಿಂದ ಕಾರ್ಯ ನಿರ್ವಹಿಸುತ್ತಿಲ್ಲ. ಹಾಗಾಗಿ ಇಲ್ಲಿ ದಾಖಲಾಗುವ ರೋಗಿಗಳು ಮನೆಯಿಂದ ಫ್ಯಾನ್‌ ತಂದು ಗಾಳಿ ಪಡೆಯುವ ಸ್ಥಿತಿ ಇದೆ. ಒಟ್ಟು ನಾಲ್ಕು ಏಸಿಗಳನ್ನು ಇಲ್ಲಿ ಅಳವಡಿಸಿದ್ದು, ಒಂದು ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಐಸಿಯು ಘಟಕಕ್ಕೆ ಆ ಒಂದು ಏಸಿ ತಂಪು ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ರೋಗಿಗಳು ಮನೆಯಿಂದಲೇ ಫ್ಯಾನ್‌ ಹಿಡಿದುಕೊಂಡು ಬರಬೇಕಾಗಿದೆ.

ಐಸಿಯು ಘಟಕದ ಸಿಬ್ಬಂದಿಗಳ ಪ್ರಕಾರ, ಎಸಿ ದುರಸ್ತಿ ಮಾಡುವಂತೆ ಅನೇಕ ದಿನಗಳಿಂದ ಪತ್ರಗಳನ್ನು ಬರೆದಿರುವುದಾಗಿ ಹೇಳುತ್ತಿದ್ದಾರೆ. ಅಧಿಕಾರಿಗಳು ಯಾರೂ ಈವರೆಗೂ ಸ್ಪಂದಿಸಿಲ್ಲ ಎಂಬ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಏ.24ರಂದು ಗುಂಡಪ್ಪ ಪರೀಟ್ ಅವರ ತಂದೆ ಅನಾರೋಗ್ಯದಿಂದ ತಿವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಘಟಕದ ಏಸಿ ಕಾರ್ಯ ನಿರ್ಹಿಸದ ಹಿನ್ನೆಲೆಯಲ್ಲಿ ಮನೆಯಿಂದ ಫ್ಯಾನ್‌ ತಂದು ಬಳಸುತ್ತಿದ್ದಾರೆ. ಇದನ್ನು ಗಮನಿಸಿದ ಬಳಿಕವೂ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಯ ಅಧಿಕಾರಿಗಳು ಏಸಿ ದುರಸ್ತಿ ಮಾಡಿಸುವ ಕಾರ್ಯಕ್ಕೆ ಮುಂದಾಗದಿರುವುದು ಅಧಿಕಾರ್ರಿಗಳ ಕರ್ತವ್ಯಕ್ಕೆ ನಿದರ್ಶನವಾಗಿದೆ.

ತುರ್ತು ನಿಗಾ ಘಟದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಆಸ್ಪತ್ರೆಯ ಆದ್ಯ ಕರ್ತವ್ಯ. ಅಲ್ಲದೆ, ಐಸಿಯುನಲ್ಲಿ ನಿಗದಿತ ಪ್ರಮಾಣದ ತಾಪಮಾನ ಕಾಪಾಡುವುದು ಕೂಡ ಮುಖ್ಯವಾಗಿರುತ್ತದೆ. ಆ ಘಟಕದಲ್ಲಿ ಹೊರಗಿನ ಗಾಳಿ ಬರಲು ಯಾವುದೇ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಸ್ಪತ್ರೆಯ ವಾರ್ಡ್‌-46ರ ಐಸಿಯು ಘಟಕದಲ್ಲಿ ಅನೇಕ ಅವ್ಯವಸ್ಥೆಗಳಿದ್ದು, ಅಧಿಕಾರಿಗಳು ಇತ್ತ ಚಿತ್ತ ಹರಿಸಬೇಕಾಗಿದೆ. ಜೀವದ ಜತೆಗೆ ಹೋರಾಟ ಮಾಡುವ ಜೀವಗಳನ್ನು ಉಳಿಸುವ ಕಾರ್ಯಕ್ಕೆ ಜಿಲ್ಲಾಸ್ಪತೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಮುಂದಾಗಬೇಕಾಗಿದೆ. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಅನೇಕ ರೋಗಿಗಳು ಒತ್ತಾಯಿಸಿದ್ದಾರೆ.

•ದುರ್ಯೋಧನ ಹೂಗಾರ

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.