ಬೀದರನಲ್ಲಿ ದೂರವಾಗಿಲ್ಲ ಆತಂಕ

ಒಂದೂ ಸೋಂಕು ಪ್ರಕರಣಗಳಿಲ್ಲ  ಹಳ್ಳಿಗಳಿಗೆ ಮುಂಬೈ-ಹೈದ್ರಾಬಾದ್‌ ಕಂಟಕ

Team Udayavani, May 17, 2020, 11:48 AM IST

17-May-05

ಬೀದರ: ಕಳೆದ ಐದು ದಿನಗಳಿಂದ ರಣಕೇಕೆ ಹಾಕುತ್ತ ಜಿಲ್ಲೆಯಲ್ಲಿ ತಲ್ಲಣ ಮೂಡಿಸುತ್ತಿರುವ ಕೋವಿಡ್ ವೈರಸ್‌ ಶನಿವಾರ ತನ್ನ ಆರ್ಭಟ ತಗ್ಗಿಸಿದ್ದರಿಂದ ಜನರಲ್ಲಿ ನಿರಾಳತೆ ಮೂಡಿದೆ. ಆದರೆ, ಜಿಲ್ಲೆಗೆ ಕಂಟವಾಗಿರುವ ತಬ್ಲೀಘಿ ಮತ್ತು ಮುಂಬೈ ನಂಟು ಬರುವ ದಿನಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಹಿನ್ನೆಲೆ ಆತಂಕ ಮಾತ್ರ ದೂರವಾಗಿಲ್ಲ.

ಜಿಲ್ಲೆಯಲ್ಲಿ ಕಳೆದ ಐದು ದಿನಗಳಲ್ಲಿ ಮಹಾಮಾರಿ ಕೋವಿಡ್ ಎರಡನೇ ವ್ಯಕ್ತಿಯನ್ನೇ ಬಲಿ ಪಡೆದಿದ್ದಲ್ಲದ್ದೇ 32 ಜನರಿಗೆ ಒಕ್ಕರಿಸಿ ಭೀತಿ ಹೆಚ್ಚಿಸಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಸೋಮವಾರದಿಂದ ಸತತ ಕಾಡುತ್ತ ಬಂದಿರುವ ರಣ ರಕ್ಕಸ ವೈರಾಣು ಶನಿವಾರ ಕೊಂಚ ಬಿಡುವು ನೀಡಿದೆ. ಒಂದೂ ಪ್ರಕರಣಗಳು ದಾಖಲಾಗದೇ ಇರುವುದು ನಿಟ್ಟಿಸಿರು ಬಿಡುವಂತಾಗಿದೆ. ಆದರೆ, ಕೇವಲ ಬೀದರದ ಒಂದು ಭಾಗಕ್ಕಷ್ಟೇ ಸೀಮಿತವಾಗಿದ್ದ ಕೋವಿಡ್ ಸೋಂಕು ಈಗ ಜಿಲ್ಲೆಯ ಹಳ್ಳಿಗಳಿಗೂ ವ್ಯಾಪಿಸಿರುವುದು ದೊಡ್ಡ ಆಘಾತವನ್ನುಂಟು ಮಾಡಿದೆ. ನಗರದ ಓಲ್ಡ್‌ ಸಿಟಿಗೆ ತಬ್ಲೀಘಿಗಳ ನಂಟು ತಲ್ಲಣ ಮೂಡಿಸುತ್ತಿದ್ದರೆ, ಹಳ್ಳಿಗಳಿಗೆ ಮುಂಬೈ ಮತ್ತು ಹೈದ್ರಾಬಾದ್‌ ನಂಟು ಕಂಟಕವಾಗುತ್ತಿದೆ. ಜಿಲ್ಲೆಯ ಹುಣಸಗೇರಾ, ಧನ್ನೂರ(ಕೆ) ಗ್ರಾಮಕ್ಕೆ ಮುಂಬೈನಿಂದಬಂದಿರುವ ವಲಸೆ ಕಾರ್ಮಿಕರು ಮತ್ತು ಚಿಟಗುಪ್ಪಗೆ ಹೈದ್ರಾಬಾದ್‌ನಿಂದ ಬಂದಿರುವ ಮೃತ ವ್ಯಕ್ತಿಯಲ್ಲಿ ಪಾಸಿಟಿವ್‌ ದೃಢಪಟ್ಟ ಹಿನ್ನೆಲೆ ಗ್ರಾಮಗಳಲ್ಲಿ ಸೀಲ್‌ಡೌನ್‌ ಮಾಡಲಾಗಿದೆ. ಆದರೂ ಈ ನಂಜು ಸೋಂಕಿತರ ಸಂಖ್ಯೆ ಹೆಚ್ಚಿಸುವ ಸಾಧ್ಯತೆ ದಟ್ಟವಾಗುತ್ತಿದೆ.

ಬೀದರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಏ. 2ಕ್ಕೆ ಒಂದೇ ದಿನ 10 ಜನರಲ್ಲಿ ಸೋಂಕು ಕಾಣಿಸಿಕೊಂಡು ಗಮನ ಸೆಳೆದಿತ್ತು. ನಂತರ ಏ. 11ಕ್ಕೆ ಒಂದು, ಏ. 13ಕ್ಕೆ ಎರಡು, ಏ. 17ಕ್ಕೆ ಒಂದು, ಏ. 20ಕ್ಕೆ ಒಂದು, ಮೇ 2ಕ್ಕೆ ವೃದ್ಧನ ಸಾವು, ಮೇ 4ಕ್ಕೆ ಏಳು, ಮೇ 9ಕ್ಕೆ ಮೂರು ಮತ್ತು ಮೇ 11ಕ್ಕೆ ಎರಡು, ಏ. 12ಕ್ಕೆ ಎರಡು, ಏ. 13ಕ್ಕೆ ಹನ್ನೆರಡು ಮತ್ತು ಏ. 14ಕ್ಕೆ ಏಳು ಕೇಸ್‌ ಪತ್ತೆಯಾಗಿದ್ದರೆ, ಶುಕ್ರವಾರ ಏಳು ಪಾಸಿಟಿವ್‌ ವರದಿಯಾಗಿವೆ.ಜಿಲ್ಲೆಯಲ್ಲಿ ಈಗ ಒಟ್ಟಾರೆ 56 ಪಾಸಿಟಿವ್‌ ಪ್ರಕರಣಗಳು ವರದಿ ಆದಂತಾಗಿದೆ. ಅದರಲ್ಲಿ ಎರಡು ಸಾವು ಸಂಭವಿಸಿದ್ದರೆ 15 ಜನರು ಡಿಸಾcರ್ಜ್‌ ಆಗಿದ್ದು, ಇನ್ನೂ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

795 ಜನರ ವರದಿ ಬಾಕಿ
ಬೀದರ ಜಿಲ್ಲೆಯಲ್ಲಿ ಇನ್ನೂ 795 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಒಟ್ಟು 8078 ಜನರ ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 7228 ಮಂದಿಯದ್ದು ನೆಗೆಟಿವ್‌ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 56 ಪ್ರಕರಣಗಳು ವರದಿಯಾಗಿದ್ದು, ಎರಡು ಸಾವು ಸಂಭವಿಸಿದರೆ, 15 ಜನರು ಡಿಸಾcರ್ಜ್‌ ಆದಂತಾಗಿದೆ. ಇನ್ನೂ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಶಂಕಿತ 223 ಜನರು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ 163 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.