ಅವಸರದಲ್ಲಿ ವಾಹನ ಚಲಾಯಿಸಿದರೆ‌ ಅನಾಹುತ ಖಚಿತ


Team Udayavani, Apr 30, 2018, 3:59 PM IST

gul-6.jpg

ಬೀದರ: ವಾಹನ ಚಾಲನೆ ಮಾಡುವಾಗ ಅವಸರ ಮಾಡಿದಲ್ಲಿ ಅನಾಹುತ ಎದುರಿಸಬೇಕಾಗುತ್ತದೆ ಎಂದು ಡಿವೈಎಸ್‌ಪಿ ಎಸ್‌.ವೈ. ಹುಣಸಿಕಟ್ಟಿ ಹೇಳಿದರು. ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ 29ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರ ಪೊಲೀಸ್‌ ಠಾಣೆ ಹಾಗೂ ಭಾಗ್ಯವಂತಿ ಮೋಟಾರ್‌ ಡ್ರೈವಿಂಗ್‌ ಸ್ಕೂಲ್‌ ಸಂಯುಕ್ತಾಶ್ರಯದಲ್ಲಿ ನಡೆದ “ರಸ್ತೆ ಸುರಕ್ಷತೆ ಜೀವ ರಕ್ಷೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಚಾಲಕನ ಜೀವನ ಮುಳ್ಳಿನ ಹಾಗೆ ಇರತ್ತದೆ. ಹಾಗಾಗಿ ರಸ್ತೆಯ ಮೇಲೆ ವಾಹನವನ್ನು ಪ್ರಜ್ಞೆಯಿಂದ ಚಲಾಯಿಸಬೇಕು.

ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಮನೆಯಿಂದ ಹೊರಡುವಾಗ ಹತ್ತು ನಿಮಿಷ ಮುಂಚಿತವಾಗಿ ಬಿಡಬೇಕು. ಆಟೋದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ನಿಗದಿತ ಮಿತಿ ದಾಟದಂತೆ ಎಚ್ಚರ ವಹಿಸಬೇಕು. ರಸ್ತೆ ಮೇಲೆ ಹೋಗುವಾಗ ಅಥವಾ ದಾಟುವ ಸಂದರ್ಭದಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಶಿವನಾಂದ ಮಗದುಮ್‌ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಯೊಂದಿಗೆ ರಸ್ತೆಯ ಚಿಹ್ನೆಗಳ ಬಗ್ಗೆ ತಿಳಿದುಕೊಳ್ಳಬೇಕು. ವಾಹನ ಚಾಲನೆ ಮಾಡುವ ಮುನ್ನ ತಪ್ಪದೇ ಚಾಲನಾ ಪರವಾನಗಿ ಪತ್ರ ಪಡೆಯಬೇಕು. ವಾಹನಗಳನ್ನು ಸೇವೆಯ ಹೊರತು ಶೋಕಿಗಾಗಿ ಬಳಸಬಾರದು ಎಂದು ಸಲಹೆ ನೀಡಿದ ಅವರು, ರಸ್ತೆ ನಿಯಮಗಳನ್ನು ಪಾಲಿಸುವುದರಿಂದ ರಸ್ತೆ ಅಪಘಾತಗಳನ್ನು ತಗ್ಗಿಸಬಹುದು ಎಂದು ಹೇಳಿದರು.

ಪೊಲೀಸ್‌ ನಿರೀಕ್ಷಕ ಶ್ರೀಕಾಂತ ಅಲ್ಲಾಪುರೆ ಮಾತನಾಡಿ, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಹೆಲ್ಮೆಟ್‌ನಿಂದ ಕೂದಲು ಹಾಳಾಗುತ್ತವೆ ಎನ್ನುವ ತಪ್ಪು ಮನೋಭಾವದಿಂದ ಹೊರಬರಬೇಕು ಎಂದು ಹೇಳಿದರು.

ಕಾಲೇಜು ಪ್ರಾಶುಂಪಾಲ ಡಾ| ಎಂ.ಡಿ ಫಾರೂಕ್‌ ಅಧ್ಯಕ್ಷತೆ ವಹಿಸಿದ್ದರು. ಡ್ರೈವಿಂಗ್‌ ಶಾಲೆಯ ಪ್ರಾಂಶುಪಾಲ ಶಿವರಾಜ ಜಮಾದರ್‌ ಖಾಜಾಪುರ, ಡಾ| ತಿಪಣ್ಣಾ, ಶಶಿಧರ ಚವ್ಹಾಣ್‌, ರವಿಕಾಂತ ಕಾಮಶೆಟಿ, ಜನಾರ್ಧನ್‌ ಮೋವಿನ್‌, ಮಹಾದೇವ ಮಾಶೆಟ್ಟಿ, ಶಿವರಾಜ ಏಕಲಾರ್‌, ಎನ್‌ಎಸ್‌ಎಸ್‌ ಅಧಿಕಾರಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಇದ್ದರು. ದಮ್ಮದೀಪ ಅವರು ಕಾರ್ಯಕ್ರಮ ನಿರೂಪಿಸಿದರು.

ರಸ್ತೆ ಸುರಕ್ಷತೆ ಜಾಗೃತಿ ಜಾಥಾ: 29ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಗೃತಿ ಜಾಥಾ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಡಿವೈಎಸ್‌ಪಿ ಎಸ್‌.ವೈ.ಹುಣಸೆಕಟ್ಟಿ ಅವರು ಪುಷ್ಪಾರ್ಚನೆ ಮೂಲಕ ಜಾಥಾಗೆ ಚಾಲನೆ ನೀಡಿದರು. ಮೆರವಣಿಗೆಯು ಮಹಾವೀರ ವೃತ್ತ, ಭಗತ್‌ಸಿಂಗ್‌ ವೃತ್ತ, ಶಿವಾಜಿ ವೃತ್ತ, ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ತೆರಳಿ ಮುಕ್ತಾಯಗೊಂಡಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಧೂಮಪಾನ ಮಾಡಿ ವಾಹನ ಚಲಾಯಿಸಬೇಡಿ, ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ, ನಾಲ್ಕು ಚಕ್ರದ ವಾಹನ ಚಾಲಕರು ಕಡ್ಡಾಯ ಸೀಟ್‌ ಬೆಲ್ಟ್ ಧರಿಸಬೇಕು, ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು, ದ್ವಿ ಚಕ್ರ ವಾಹನ, ಕಾರು, ಜೀಪು ಮತ್ತಿತರ ವಾಹನಗಳಿಗೆ ಇರುವ ಹಿನ್ನೋಟ ಕನ್ನಡಿ ಬಳಕೆ ಮಾಡಬೇಕು. ಇದು ಚಾಲಕನ ಮೂರನೇ ಕಣ್ಣಿದ್ದಂತೆ ಎನ್ನುವ ಕುರಿತು ಜನರಲ್ಲಿ ಅರಿವು ಮೂಡಿಸಿದರು.

ಸಿಪಿಐ ಶ್ರೀಕಾಂತ ಅಲ್ಲಾಪುರ, ಪಿಎಸ್‌ಐ ವಿಜಯಕುಮಾರ, ಶಿವರಾಜ ಜಮಾದಾರ, ಮನೋಹರ್‌, ಪೀರಪ್ಪ, ಜನಾರ್ಧನ್‌ ಬೋವಿನ್‌, ಶಿವರಾಜ ಏಕಲಾರ್‌, ರವಿಕುಮಾರ ಕಾಮಶೆಟ್ಟಿ ಪ್ರಕಾಶ ಮಠಪತಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.