ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

ಕೇರಳ ನಂತರ ಕರ್ನಾಟಕವೇ ಹೃದಯ ಸಂಬಂಧಿ ಚಿಕಿತ್ಸೆ ನೀಡಿಕೆಯಲ್ಲಿ ಸ್ಥಾನ ಪಡೆದಿರುವುದು ಗಮನಾರ್ಹ

Team Udayavani, Sep 20, 2021, 6:40 PM IST

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

ಬೀದರ: ಹೃದಯರೋಗ ಸಂಬಂಧಿತ ಆಸ್ಪತ್ರೆಗಳ ಸುಧಾರಣೆ ಅಗತ್ಯವಿದೆ. ಆಸ್ಪತ್ರೆಗಳು ಕೇವಲ ಹಣ ಗಳಿಕೆಗಾಗಿ ಸ್ಪರ್ಧೆಗಿಳಿಯದೇ ಜನರ ಆರೋಗ್ಯ ಸುಧಾರಣೆಗೆ ಮುಂದಾಗಬೇಕೆಂದು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯ ಹೃದಯ ಶಸ್ತ್ರ ಚಿಕಿತ್ಸಕ ಡಾ| ವಿವೇಕ ಜವಳಿ ಸಲಹೆ ನೀಡಿದರು.

ನಗರದ ಗುದಗೆ ಮಲ್ಟಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಕ್ಯಾಥಲ್ಯಾಬ್‌ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಹೃದಯ ಸಂಬಂಧಿ  ರೋಗಿಗಳ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಸುವರ್ಣ ಆರೋಗ್ಯ ಟ್ರಸ್ಟ್‌ ನಡಿ ಜಾರಿಯಾದ ಆಯುಷ್ಮಾನ ಭಾರತ ಹಾಗೂ ಆರೋಗ್ಯ ಕರ್ನಾಟಕ ಸೇರಿದಂತೆ ಇತರೆ ಯೋಜನೆಗಳು ಬಡ ಜನರಿಗೆ ಹೆಚ್ಚು ಅನುಕುಲವಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ 75 ಸೇರಿ ರಾಜ್ಯಾದ್ಯಂತ 175 ಹೃದಯರೋಗ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ಕನಿಷ್ಟ 10 ಲಕ್ಷ ಜನರ ಪೈಕಿ 800 ಜನರಿಗೆ ಅನುಕೂಲವಾಗುವಂತೆ ಹೃದಯ ಸಂಬಂಧಿ ಆಸ್ಪತ್ರೆಗಳಿಗೆ ಅವಕಾಶ ಇರಬೇಕು. ಅವು ಹೆಚ್ಚಾದರೆ ಜನರಿಗೆ ಪರಿಣಾಮಕಾರಿ ಚಿಕಿತ್ಸೆ ದೊರಕಲು ಸಾಧ್ಯವಾಗುವುದಿಲ್ಲ. ದೇಶದಲ್ಲೇ ಮಹಾರಾಷ್ಟ್ರ, ಕೇರಳ ನಂತರ ಕರ್ನಾಟಕವೇ ಹೃದಯ ಸಂಬಂಧಿ ಚಿಕಿತ್ಸೆ ನೀಡಿಕೆಯಲ್ಲಿ ಸ್ಥಾನ ಪಡೆದಿರುವುದು ಗಮನಾರ್ಹ ಸಂಗತಿ ಎಂದರು.

ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ವಾಸಿಸುವ ಪ್ರತಿ ಏಳು ಜನರಲ್ಲಿ ಒಬ್ಬರಿಗೆ ಸಕ್ಕರೆ ಕಾಯಿಲೆ, ರಕ್ತದೊತ್ತಡ ಸಾಮಾನ್ಯವಾಗಿ ಕಂಡು ಬರುತ್ತಿದೆ. ಇದು ಮುಂದೆ ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುತ್ತದೆ. ಸಾತ್ವಿಕ ಆಹಾರ ಸೇವನೆ, ವ್ಯಾಯಾಮ, ದುಶ್ಚಟಗಳ ದೂರ ಇರಬೇಕು. ಸೂಕ್ತ ಚಿಕಿತ್ಸೆಯಿಂದ ಶೇ.80ರಷ್ಟು ಹೃದ್ರೋಗಿಗಳು ಕಾಯಿಲೆಯಿಂದ ಪಾರಾಗಬಹುದು ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ಬೀದರನಲ್ಲಿ ಬ್ರಿಮ್ಸ್‌ ಆರಂಭ ಬಳಿಕ ಸಾಕಷ್ಟು ಸ್ಟೆಷಾಲಿಟಿ ಆಸ್ಪತ್ರೆಗಳು ಸ್ಥಾಪನೆಯಾಗುತ್ತಿದ್ದು, ಇರಿಂದ ಚಿಕಿತ್ಸೆಗಾಗಿ ಮಹಾ ನಗರಗಳಿಗೆ ಹೋಗುವುದು ತಪ್ಪಿದೆ. ಗುದಗೆ ಆಸ್ಪತ್ರೆಯ ಅತ್ಯಾಧುನಿಕ ಕ್ಯಾಥಲ್ಯಾಬ್‌ನ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಶಾಸಕ ರಾಜಶೇಖರ ಪಾಟೀಲ, ಹೃದಯ ರೋಗ ತಜ್ಞ ಡಾ| ನಿತೀನ್‌ ಗುದಗೆ ಮಾತನಾಡಿದರು.

ಎನ್‌.ಬಿ ರೆಡ್ಡಿ ಗುರೂಜಿ, ಶಾಸಕ ರಹೀಮ್‌ ಖಾನ್‌, ಕೆಎಸ್‌ಐಐಡಿಸಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ಕೆಆರ್‌ಇ ಸಂಸ್ಥೆ ಅಧ್ಯಕ್ಷ ಡಾ| ಬಸವರಾಜ ಪಾಟೀಲ, ಅಭಿಷೇಕ ಪಾಟೀಲ, ಪ್ರತಿಮಾ ಬಹೇನ್‌, ಶಕುಂತಲಾ ಬೆಲ್ದಾಳೆ, ಬಾಬುರಾವ ಗುದಗೆ, ಬಿ.ಎಸ್‌ ಕುದರೆ, ವೈಜಿನಾಥ ಕಮಠಾಣೆ, ಡಾ| ಚನ್ನಬಸಪ್ಪ ಹಾಲಹಳ್ಳಿ, ಶಿವಶರಣಪ್ಪ ವಾಲಿ, ಬಸವರಾಜ ಪಾಟೀಲ, ಬಸವರಾಜ ಜಾಬಶೆಟ್ಟಿ, ಸುಮಿತ್‌ ಮೋರ್ಗೆ, ಡಾ| ಜನಾರ್ಧನ, ಡಾ| ಸ್ವಾತಿ, ಡಾ| ನಾಗಭೂಷಣ ಎಂ., ಡಾ| ಮಹೇಶ ತೊಂಡಾರೆ ಇದ್ದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.