ಬಸವಕಲ್ಯಾಣದಲ್ಲಿ ಮಾದರಿ ಅನುಭವ ಮಂಟಪ ಉದ್ಘಾಟನೆ

ಭಕ್ತರು ಇದನ್ನು ಬೆಳಗ್ಗೆಯಿಂದ ಸಂಜೆವರೆಗೆ ವೀಕ್ಷಿಸಬಹುದಾಗಿದೆ

Team Udayavani, Jul 30, 2022, 5:49 PM IST

ಬಸವಕಲ್ಯಾಣದಲ್ಲಿ ಮಾದರಿ ಅನುಭವ ಮಂಟಪ ಉದ್ಘಾಟನೆ

ಬಸವಕಲ್ಯಾಣ: ನಗರದ ಹೊರವಲಯದಲ್ಲಿರುವ ಡಾ| ಜಯದೇವಿತಾಯಿ ಲಿಗಾಡೆ ಸಮಾಧಿ ಸ್ಥಳದ ಹತ್ತಿರ ಸಿದ್ಧಪಡಿಸಿದ ಮಾದರಿ ಅನುಭವ ಮಂಟಪವನ್ನು ಶುಕ್ರವಾರ ಶಾಸಕ ಶರಣು ಸಲಗರ ವಿವಿಧ ಪೂಜ್ಯರ ಸಮ್ಮುಖದಲ್ಲಿ ಉದ್ಘಾಟಿಸಿದರು.

ಇದಕ್ಕೂ ಮುನ್ನ ಅನುಭವ ಮಂಟಪದ ಸಂಚಾಲಕ ಶಿವಾನಂದ ದೇವರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ವಿವಿಧ ಪೂಜ್ಯರು, ಬಿಡಿಪಿಸಿ ಪದಾ ಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಬಸವಾಭಿಮಾನಿಗಳು ಭಾಗವಹಿಸಿದ್ದರು.

ನಂತರ ಮಾತನಾಡಿದ ಶಾಸಕ ಶರಣು ಸಲಗರ, ಶರಣರ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ರಾಜ್ಯ ಸರ್ಕಾರ 612 ಕೋಟಿ ರೂ. ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲು ಮುಂದಾಗಿದ್ದು ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಈ ನೂತನ ಅನುಭವ ಮಂಟಪ ಬಸವಾಭಿಮಾನಿಗಳಿಗೆ ಮಾದರಿಯಾಗಲಿದೆ ಎಂದರು.ಮುಂದಿನ ದಿನಗಳಲ್ಲಿ ನಿತ್ಯ ಸಾವಿರಾರು ಜನರು ಕಲ್ಯಾಣ ನೋಡಲು ಆಗಮಿಸುತ್ತಾರೆ.

ಈಗಾಗಲೇ ನಮ್ಮ ಸಂಸತ್ತು ಭವನಕ್ಕೆ ಯಾವ ಮಾದರಿ ಕಲ್ಲುಗಳನ್ನು ಬಳಸಿ ಕಟ್ಟಲಾಗುತ್ತಿದೆಯೋ ಅದೇ ಮಾದರಿ ಕಲ್ಲುಗಳನ್ನು ನೂತನ ಅನುಭವ ಮಂಟಪಕ್ಕೆ ಬಳಸಿದರೆ ಉತ್ತಮ. ಸಂಸತ್ತು ಭವನ ಕಟ್ಟುತ್ತಿರುವವರನ್ನು ಒಂದು ಬಾರಿ ಭೇಟಿಯಾಗಿ ಅವರಿಂದ ಸಲಹೆ ಪಡೆಯುವಂತೆ ಒತ್ತಾಯಿಸಿದರು.

ಅನುಭವ ಮಂಟಪ ಅನುಷ್ಠಾನ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ್‌ ಸೇಡಂ ಮಾತನಾಡಿ, ನೂತನ ಅನುಭವ ಮಂಟಪ ಯಾವ ರೀತಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಾದರಿ ತಯಾರಿಸಲಾಗಿದೆ. ಭಕ್ತರು ಇದನ್ನು ಬೆಳಗ್ಗೆಯಿಂದ ಸಂಜೆವರೆಗೆ ವೀಕ್ಷಿಸಬಹುದಾಗಿದೆ ಎಂದರು. ಹುಲಸೂರನ ಡಾ| ಶಿವಾನಂದ ಸ್ವಾಮೀಜಿ, ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು, ಹರಳಯ್ಯ ಗವಿಯ ಡಾ| ಗಂಗಾಂಬಿಕಾ ಅಕ್ಕ ಮಾತನಾಡಿದರು.

ಹಾರಕೂಡನ ಡಾ| ಚನ್ನವೀರ ಶಿವಾಚಾರ್ಯರು, ಬಸವ ಮಹಾಮನೆಯ ಶ್ರೀ ಸಿದ್ರಾಮೇಶ್ವರ ಸ್ವಾಮೀಜಿ, ಬೇಲೂರನ ಉರಲಿಂಗ ಪೆದ್ದಿ ಮಠದ ಶ್ರೀ ಪಂಚಾಕ್ಷರಿ ಸ್ವಾಮೀಜಿ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಬಸವರಾಜ ಧನ್ನೂರ, ಸಹಾಯಕ ಆಯುಕ್ತ ರಮೇಶ ಕೋಲಾರ, ತಹಶೀಲ್ದಾರ್‌ ಸಾವಿತ್ರಿ ಸಲಗರ, ಬಿಕೆಡಿಬಿ ತಹಶೀಲ್ದಾರ್‌ ಮೋಸಿನ್‌, ಬಿಡಿಎ ಅಧ್ಯಕ್ಷ ರಾಜಕುಮಾರ ಬಿರಾದಾರ ಸಿರಗಾಪೂರ, ಬಿಡಿಪಿಸಿ ಅಧ್ಯಕ್ಷ ಅನೀಲ ರಗಟೆ, ಉಪಾಧ್ಯಕ್ಷ ಅಶೋಕ ನಾಗರಾಳೆ, ಸಹ ಕಾರ್ಯದರ್ಶಿ ಬಸವರಾಜ ಬಾಲಕಿಲೆ, ಕೋಶಾಧ್ಯಕ್ಷ ಸುಭಾಷ ಹೊಳಕುಂದೆ, ನಿರ್ದೇಶಕ ಬಸ್ಸು ಕೋರಕೆ, ಡಾ|ಮಹೇಶ ಪಾಟೀಲ, ಶಿವಕುಮಾರ ಬಿರಾದಾರ, ಅರವಿಂದ ಮುತ್ತೆ, ಸಿದ್ದು ಬಿರಾದಾರ, ಬಾಬಾಸಾಹೇಬ ಗಡ್ಡೆ, ಮಹಾದೇವಪ್ಪ ಇಜಾರೆ ಸೇರಿ ಗಣ್ಯರು, ಬಸವಾಭಿಮಾನಿಗಳು ಇದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.