ಬಿಸಿಲೂರಲ್ಲಿ ನಿಲ್ಲದ ಕೋವಿಡ್‌ ರುದ್ರನರ್ತನ!


Team Udayavani, Apr 6, 2021, 6:52 PM IST

Bisiluru

ಬೀದರ: ಹೆಮ್ಮಾರಿ ಕೋವಿಡ್‌- 19 ಸೋಂಕಿನ ರುದ್ರನರ್ತನದಿಂದ ನೆರೆ ರಾಜ್ಯ ಮಹಾರಾಷ್ಟ್ರ ನಲುಗಿ ಹೋಗುತ್ತಿದ್ದರೆ, ಇತ್ತ ಗಡಿ ನಾಡು ಬೀದರನಲ್ಲೂ ತನ್ನ ಕೆನ್ನಾಲಿಗೆ ವೇಗವಾಗಿ ಚಾಚುವ ಮೂಲಕ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಸೋಮವಾರ ಒಂದೇ ದಿನ 264 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕಳೆದ ಐದು ದಿನಗಳಲ್ಲೇ ಸೋಂಕಿತರ ಸಂಖ್ಯೆ ಸಾವಿರದ ಗಡಿ ತಲುಪಿದೆ.

ಮಹಾರಾಷ್ಟ್ರದಲ್ಲಿ ಎರಡನೇ ಅಲೆ ರೂಪದಲ್ಲಿ ಅಪ್ಪಳಿಸಿರುವ ಕೊರೊನಾ ಗಡಿ ಜಿಲ್ಲೆಗೆ ಗಂಡಾಂತರವಾಗಿ ಕಾಡುತ್ತಿದೆ. ಒಂದೂವರೆ ತಿಂಗಳ ಹಿಂದೆ ಒಂದಂಕಿಗೆ ಇಳಿದಿದ್ದ ಕೊರೊನಾ ಸೋಂಕಿತರ ಕೇಸ್‌ಗಳು ದಿನ ಕಳೆದಂತೆ ಎರಡಂಕಿಗೆ ದಾಖಲಾಗುತ್ತ ಈಗ ದ್ವಿಶತಕ ಬಾರಿಸುತ್ತಿರುವುದು ಕೋವಿಡ್‌ ಅಟ್ಟಹಾಸದ ಮುನ್ಸೂಚನೆ ತೋರಿಸುತ್ತಿದೆ. ಕೇವಲ ಐದು ದಿನಗಳಲ್ಲಿ (ಮಾ.1ರಿಂದ 5ರವರೆಗೆ) 927 ಪಾಸಿಟಿವ್‌ ಕೇಸ್ ಗಳು ಪತ್ತೆಯಾಗಿರುವುದು ಬಿಸಿಲೂರಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ.

ದೇಶದ ಹಾಟ್‌ಸ್ಪಾಟ್‌ ಜಿಲ್ಲೆಗಳಲ್ಲಿ ಬೆಂಗಳೂರು ನಂತರ ಬೀದರ ಸಹ ಒಂದಾಗಿತ್ತು. ಈಗ ಮತ್ತೂಮ್ಮೆ ಮಹಾರಾಷ್ಟ್ರದ ಕಂಟಕ ಜತೆಗೆ ಬಸವಕಲ್ಯಾಣ ಉಪ ಚುನಾವಣೆ ಹಿನ್ನಲೆ ಸಾರ್ವಜನಿಕ ಸಮಾವೇಶದಲ್ಲಿ ಸಾವಿರಾರು ಜನರು ಸೇರುವಿಕೆಯಿಂದಾಗಿ ಸೋಂಕಿತರ ಸಂಖ್ಯೆಯುಳ್ಳ ರಾಜ್ಯದ ಟಾಪ್ ಜಿಲ್ಲೆಗಳಲ್ಲಿ ಬೀದರ ಸಹ ಒಂದಾಗುತ್ತಿದೆ.

ವ್ಯಾಪಾರ-ವಹಿವಾಟು, ಉದ್ಯೋಗ ಮತ್ತು ಕೌಟುಂಬಿಕ ಸಂಬಂಧ ಹಿನ್ನೆಲೆ ಮಹಾರಾಷ್ಟ್ರಕ್ಕೆ ಓಡಾಟ ಹೆಚ್ಚಾಗಿರುವುದು ಮತ್ತೆ ಕೋವಿಡ್ ಸಂಕಷ್ಟಕ್ಕೆ ಸಿಲುಕುವ ಸಾದ್ಯತೆ ದಟ್ಟವಾಗಿಸುತ್ತಿದೆ.

ಕಠಿಣ ಕ್ರಮಕ್ಕೆ ಮುಂದಾಗದ ಆಡಳಿತ: ಕೊರೊನಾ ಸೋಂಕಿನ ಪ್ರಕರಣ ಕ್ರಮೇಣ ಹೆಚ್ಚುತ್ತಿದ್ದರೂ ಜಿಲ್ಲೆಯಲ್ಲಿ ಸಾರ್ವಜನಿಕರು ನಿಯಮ ಪಾಲಿಸುವಲ್ಲಿ ಮೈಮರೆಯುತ್ತಿದ್ದಾರೆ. ಮತ್ತೂಂದೆಡೆ ಜಿಲ್ಲಾಡಳಿತ ಸೋಂಕು ನಿಯಂತ್ರಣ ವಿಷಯದಲ್ಲಿ ಜಾರುತ್ತಿದೆ. ಕೇವಲ ಸಭೆಗಳಿಗೆ ಮಾತ್ರ ಸೀಮಿತವಾಗುತ್ತಿರುವ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಕಠಿಣ ನಿಯಮ ಜಾರಿಗೊಳಿಸುತ್ತಿಲ್ಲ. ಸಾಮಾಜಿಕ ಅಂತರ ಪಾಲನೆ ಬಿಡಿ, ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಜಾಗೃತಿ ಮೂಡಿಸುವ ಕೆಲಸಗಳು ಆಗದಿರುವುದು ಸಹ ಕೋವಿಡ್‌ ಹೆಚ್ಚಳಕ್ಕೆ ಕಾರಣವಾಗುತ್ತಿದೆ.

ಮಹಾರಾಷ್ಟ್ರದ ಗಡಿಯಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಕಾರ್ಯದಲ್ಲೂ ನಿರ್ಲಕ್ಷ ವಹಿಸಲಾಗುತ್ತಿದೆ ಎಂಬ ಆರೋಪಗಳಿವೆ. ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಹಣ ಕೊಟ್ಟು ಕೋವಿಡ್‌ ನೆಗೆಟಿವ್‌ ವರದಿ ಪಡೆದು ಸಲ್ಲಿಸುತ್ತಿದ್ದಾರೆ ಎಂದೆನ್ನಲಾಗುತ್ತಿದೆ. ಜಿಲ್ಲಾಡಳಿತ ಎಚ್ಚೆತ್ತುಕೊಂಡು ತೀವ್ರ ಕಟ್ಟೆಚ್ಚರ ಕ್ರಮ ವಹಿಸುವ ಮೂಲಕ ಮುಂದೆ ಎದುರಾಗಬಹುದಾದ ಗಂಡಾಂತರ ತಪ್ಪಿಸಬೇಕಿದೆ.

3 ತಿಂಗಳಲ್ಲಿ ದಾಖಲೆ
ಜಿಲ್ಲೆಯಲ್ಲಿ ಕೇವಲ ಐದು ದಿನಗಳಲ್ಲಿ 927 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಈ ಸಂಖ್ಯೆ ಕಳೆದ ಮೂರು ತಿಂಗಳಲ್ಲೇ ಅತಿ ಹೆಚ್ಚಿನ ದಾಖಲೆ ಎನಿಸಿದೆ. ಪಾಸಿಟಿವ್‌ ಪ್ರಕರಣಗಳ ಹೆಚ್ಚಳದೊಂದಿಗೆ ಜಿಲ್ಲೆಯಲ್ಲಿ ಏ.5ರವರೆಗೆ ಸಕ್ರಿಯ ಕೇಸ್‌ಗಳ ಒಟ್ಟು ಸಂಖ್ಯೆ ಈಗ 1518ಕ್ಕೆ ತಲುಪಿದೆ. ಏ. 1ರಂದು 218, 2ಕ್ಕೆ 126, 3ಕ್ಕೆ 172, 4ಕ್ಕೆ 147 ಸೋಂಕು ಕೇಸ್‌ ವರದಿಯಾಗಿದ್ದರೆ, ಏ.5ರಂದು 264 ಅತ್ಯಧಿ ಕ ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ ಈವರೆಗೆ 9980 ಸೋಂಕಿತರು ಪತ್ತೆಯಾಗಿದ್ದು, 8273 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಒಟ್ಟು 185 ಜನ ಕೋವಿಡ್‌ ಸೋಂಕಿಗೆ ಬಲಿಯಾಗಿದ್ದಾರೆ.

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.