ಸತತವಾಗಿ ಸುರಿದ ಮಳೆ: ನಾವದಗಿ ಹನುಮ ದೇವಾಲಯದ ಗರ್ಭಗುಡಿ ನೆಲಸಮ
Team Udayavani, Aug 30, 2021, 7:38 PM IST
ಭಾಲ್ಕಿ: ಸೋಮವಾರ ನಸುಕಿನ ಜಾವದಲ್ಲಿ ಸತತವಾಗಿ ಸುರಿದ ಮಳೆಯಿಂದ ತಾಲೂಕಿನ ನಾವದಗಿ ಗ್ರಾಮದ ಹನುಮ ದೇವಾಲಯದ ಗರ್ಭಗುಡಿ ಕಳಸ ಸಮೇತ ನೆಲಸಮವಾಗಿದೆ. ಹಳ್ಳದ ಪಕ್ಕದಲ್ಲಿರುವ ಮನೆಗಳಲ್ಲಿ ನೀರು ನುಗ್ಗಿ, ಮನೆಯಲ್ಲಿರುವವರಿಗೆ ಗಂಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ.
ಸೋಮವಾರ ನಸುಕಿನ ಜಾವದಿಂದಲೇ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನ ಹಲವು ಗ್ರಾಮಗಳ ಮನೆಗಳಲ್ಲಿ ನೀರು ನುಗ್ಗಿ ಮನೆಯಲ್ಲಿರುವ ಎಲ್ಲಾ ಸಾಮಾನುಗಳು ನೀರು ಪಾಲಾಗಿವೆ. ಭಾಗಶಹ ಗೋಡೆ ಕುಸಿದಿರುವುದು, ಸೇರಿದಂತೆ ಮಳೆಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಖುದ್ದು ತಾಲೂಕು ದಂಡಾಧಿಕಾರಿಗಳು ಗ್ರಾಮಗಳಿಗೆ ಭೇಟಿ ಕೊಟ್ಟು ಪರಿಶೀಲಿಸಿದರು.
ಅಲ್ಲದೆ ನಾವದಗಿ ಗ್ರಾಮದ ಹಳ್ಳದ ಪಕ್ಕದಲ್ಲಿರುವ ಹನುಮ ದೇವಾಲಯದ ಗರ್ಭಗುಡಿಯು ಕಳಸ ಸಮೇತ ನೆಲಸಮ ವಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಾಗೆಯೇ ಹಳ್ಳದ ಪಕ್ಕದಲ್ಲಿರುವ ಸೂರ್ಯಕಾಂತ ಬಡಿಗೇರ, ಕಲ್ಲಪ್ಪಾ ಹರಿಜನ ಸೇರಿದಂತೆ ಸುಮಾರು ಐದಾರು ಮನೆಗಳಲ್ಲಿ ನೀರು ನುಗ್ಗಿ ಮನೆಯಲ್ಲಿರುವ ಎಲ್ಲಾ ಸಾಮಾನುಗಳು ಹಾಳಾಗಿವೆ. ಇದರಿಂದ ಈ ಮನೆಯ ನಿವಾಸಿಗರನ್ನು ಗ್ರಾಮದ ಹೊರವಲಯದಲ್ಲಿರುವ ಆಯುಸ್ಮಾನ್ ಭವನದಲ್ಲಿರುವ ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ತಹಸಿಲ್ದಾರ ಭೇಟಿ: ಮಳೆಯಿಂದ ಹಾನಿಗೊಳಗಾದ ಗ್ರಾಮಗಳಾದ ಏಣಕೂರ, ನಾವದಗಿ, ದಾಡಗಿ, ಮದಕಟ್ಟಿ, ಮಾವಿನಹಳ್ಳಿ, ವರವಟ್ಟಿ(ಬಿ) ಸೇರಿದಂತೆ ಮುಂತಾದ ಗ್ರಾಮಗಳಿಗೆ ತಹಸೀಲ್ದಾರ ಕೀರ್ತಿ ಚಾಲಕ ಮತ್ತು ತಾ.ಪಂ. ಈ.ಓ ದೀಪಿಕಾ ನಾಯ್ಕರ್ ರವರು ಭೇಟಿ ನೀಡಿ ಪರಿಶೀಲಿಸಿ, ಹಾನಿಗೊಳಗಾದ ಮನೆ ಮತ್ತು ಗ್ರಾಮಗಳ ಆಸ್ತಿಯ ಬಗ್ಗೆ ಪರಿಶೀಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ತಿಳಿಸಿದರು.
ನಾವದಗಿ ಗ್ರಾಮದ ಹನುಮ ದೇವಾಲಯದ ಗರ್ಭಗುಡಿ ಸೇರಿದಂತೆ ಗ್ರಾಮದ ಮಧ್ಯದಲ್ಲಿರುವ ದೊಡ್ಡ ದೊಡ್ಡಿಯ ದ್ವಾರ ಬಾಗಿಲು ಈ ಹಿಂದೆ ಮಳೆಯಿಂದ ಕುಸಿದು ಬಿದ್ದಿದ್ದು, ಅದನ್ನೂ ಪರಿಶೀಲಿಸಿದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಸೇರಿದಂತೆ ವಿವಿಧ ಅಧಿಕಾರಿ ವರ್ಗದವರು ಜೊತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು