ಕಲ್ಯಾಣ ನಾಡಿನ ಕೀರ್ತಿ ಹೆಚ್ಚಿಸಿದ ಪಂ| ವಿರೂಪಾಕ್ಷಯ್ಯ
Team Udayavani, May 19, 2018, 11:40 AM IST
ಬಸವಕಲ್ಯಾಣ: ಭಕ್ತಿ ಸಂಗೀತದ ಮೂಲಕ ನಾಡು, ನುಡಿಗೆ ಸೇವೆ ಸಲ್ಲಿಸಿದ ಪಂಡಿತ ವಿರೂಪಾಕ್ಷಯ್ಯ ಸ್ವಾಮಿ
ಅವರು ಸಂಗೀತ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿ ಕಲ್ಯಾಣ ನಾಡಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಗೋರಟಾದ
ಡಾ| ರಾಜಶೇಖರ್ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಗೋರಟಾ ಗ್ರಾಮದ ಶ್ರೀ ಸಂಗೀತ ರುದ್ರೇಶ್ವರ ದೇವಾಲಯದ ಆವರಣದಲ್ಲಿ ಪಂ| ವಿರೂಪಾಕ್ಷಯ್ಯ ಸ್ವಾಮಿ ಅವರ 6ನೇ ಪುಣ್ಯ ಸ್ಮರಣೋತ್ಸವ ನಿಮಿತ್ತ ನಡೆದ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪಂಡಿತ ವಿರೂಪಾಕ್ಷಯ್ಯನವರ ಆದರ್ಶ ಬದುಕು ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದರು.
ಪಂಡಿತ ವಿರೂಪಾಕ್ಷಯ್ಯನವರ ಪುಣ್ಯದ ಫಲವಾಗಿಯೇ ಇಲ್ಲಿ ಶ್ರೀ ಸಂಗೀತ ರುದ್ರೇಶ್ವರ ದೇವಾಲಯ ನಿರ್ಮಾಣವಾಗಿದೆ. ಮೈಸೂರು ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದಿಂದ ಇಲ್ಲಿ ಪ್ರಾದೇಶಿಕ ಸಂಗೀತ ಅಧ್ಯಯನ ಕೇಂದ್ರ ಮಂಜೂರಾಗಿದೆ. ತಿಂಗಳ ಹಿಂದೆಯೇ ಉದ್ಘಾಟನೆಯೂ ಆಗಿದ್ದು, ಶಿಘ್ರದಲ್ಲಿಯೇ ಕಾರ್ಯರಂಭ ಮಾಡಲಿದೆ ಎಂದರು.
ಬಾಗಲಕೋಟೆಯ ಡಾ| ಸಿದ್ದರಾಮಯ್ಯ ಸ್ವಾಮಿ ಅವರು ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರೊ| ರುದ್ರೇಶ್ವರ ಸ್ವಾಮಿ, ಕಾಶಿಲಿಂಗ ಸ್ವಾಮಿ, ಸರಸ್ವತಿ ಸ್ವಾಮಿ, ನಿವೃತ್ತ ಬಿಇಒ ಬಸವರಾಜ ಸ್ವಾಮಿ, ಡಾ| ನಾಗನಾಥ ಸ್ವಾಮಿ ಹುಲಸೂರು, ಚಂದ್ರಕಾಂತ ಚಂದನಹಳ್ಳಿ, ಭೂದಾನಿ ಕರಬಸಪ್ಪ ಅಕ್ಕಣ್ಣ, ಬಸವರಾಜ ದಿಂಡೆ, ಜಗನ್ನಾಥ ಸ್ವಾಮಿ, ಬಸವರಾಜ ವಡಗಾಂವ, ಕರಬಸಪ್ಪ ಮಠಪತಿ ಇನ್ನಿತರರು ಇದ್ದರು. ಇದಕ್ಕೂ ಮುನ್ನ ಸಂಗೀತ ರುದ್ರೇಶ್ವರ ದೇವಾಲಯದ ಆವರಣದಲ್ಲಿರುವ ಪಂಡಿತ ವಿರೂಪಾಕ್ಷಯ್ಯ ಸ್ವಾಮಿ ಅವರ ಸಮಾಧಿಗೆ ಸಂಗೀತ ರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ