ಟೀಕಿಸಿದಷ್ಟು ಜನ ಬೆಂಬಲ ಹೆಚ್ಚಳ: ಶರಣು ಸಲಗರ

ನಾನು ಕೆಳಹಂತದಿಂದ ಎಲ್ಲರ ಕೆಲಸ ಮಾಡುತ್ತ ಬಂದವನು.

Team Udayavani, Apr 10, 2021, 6:37 PM IST

BJP-Salagara

ಬಸವಕಲ್ಯಾಣ: ವಿರೋಧ ಪಕ್ಷಗಳು ಹಾಗೂ ತಮ್ಮ ವಿರೋಧಿಗಳು ತಮ್ಮ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡಿದಷ್ಟು ಜನ ಬೆಂಬಲ ಹೆಚ್ಚಾಗುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಶರಣು ಸಲಗರ ಹೇಳಿದರು. ಕ್ಷೇತ್ರದ ಕೋಹಿನೂರ, ಬಟಗೇರಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚಿಸಿದ ಸಲಗರ, ಮೊದಲು ಕ್ಷೇತ್ರದಲ್ಲದವ ಎಂದು ಅಬ್ಬರದ ಪ್ರಚಾರ ಮಾಡಲಾಯಿತು. ತಮ್ಮೂರು ಹಿರನಾಗಾಂವ ಎಂದ ತಕ್ಷಣ ಟಿಕೆಟ್‌ ಕುರಿತು ಇಲ್ಲದ ಆರೋಪ ಮಾಡಿದ್ರು. ಈಗಂತೂ ತಮ್ಮ ತಂದೆ ಕಾಂಗ್ರೆಸ್‌ಗೆ ಬೆಂಬಲಿಸಿದ್ದಾರೆ ಎಂದು ಆರೋಪ ಮಾಡಿರುವುದು ನೋಡಿದರೆ ಕ್ಷೇತ್ರದ ಮತ ಬಾಂಧವರು ತಮಗೆ ನೀಡಿರುವ ಅಭೂತಪೂರ್ವ ಬೆಂಬಲ ಸಾಬೀತುಪಡಿಸುತ್ತದೆ. ಅಲ್ಲದೇ ತಮ್ಮ ಬಗ್ಗೆ ಇರುವ ಭಯ, ಆತಂಕ ಎಷ್ಟಿದೆ ಎನ್ನುವುದನ್ನು ನಿರೂಪಿಸುತ್ತದೆ ಎಂದರು.

ಕಾಂಗ್ರೆಸ್‌ಗೆ ತಮ್ಮ ಮನೆ ನಾಯಿ ಕೂಡ ಹೋಗುವುದಿಲ್ಲ ಎಂದು ತಿರುಗೇಟು ನೀಡಿದ ಶರಣು ಸಲಗರ, ಮನೆ ಶಾಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೊರಗೆ ರಸ್ತೆ ಮೇಲೆ ನಿಂತಿರುವುದನ್ನೇ ಕಾಂಗ್ರೆಸ್ ಪಕ್ಷಕ್ಕೆ ಸೇರಲಾಗಿದೆ ಎನ್ನುವ ಮಟ್ಟಕ್ಕೆ ಇಳಿದಿದ್ದನ್ನು ನೋಡಿದರೆ ಯಾವ ಮಟ್ಟಿಗೆ ಹತಾಶೆಯಾಗಿದ್ದಾರೆ ಎನ್ನುವುದನ್ನು ಜನರೇ ಅರ್ಥ ಮಾಡಿಕೊಂಡು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದರು.

ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್‌ ನೀಡಿದೆ. ನಾನಂತೂ ಕೆಳಹಂತದಿಂದ ಜನಸೇವೆ ಮಾಡುತ್ತಾ ಬಂದವನು. ಜನರ ಕಷ್ಟ ಏನೆಂಬುದನ್ನು
ಮನಃಪೂರ್ವಕವಾಗಿ ಬಲ್ಲೇ ಎಂದರು. ಈ ಹಿಂದೆ ಕ್ಷೇತ್ರದ ಶಾಸಕರಾದವರು 18 ಸಾವಿರ ಮತಗಳ ಭಾರಿ ಅಂತರದಿಂದ ಸೋತಿದ್ದರಿಂದ, ಜತೆಗೆ ಶಾಸಕರಾದ ಸಂದರ್ಭ ಹಾಗೂ ವರ್ಷ-6 ತಿಂಗಳುಗಟ್ಟಲೇ ನವದೆಹಲಿಯಲ್ಲಿ ಠಿಕಾಣಿ ಹೂಡಿದ್ದನ್ನು ಮತ್ತು ಕ್ಷೇತ್ರದ ಜನತೆಗೆ, ಅಭಿವೃದ್ಧಿಗಾಗಿ ತಾವು ಸದಾ ಮಿಡಿಯುತ್ತಿರುವುದನ್ನು ಕಂಡು ವರಿಷ್ಠರು ಟಿಕೆಟ್‌ ನೀಡಿದ್ದಾರೆ ಎಂದು ಪುನರುಚ್ಚರಿಸಿದರು.

ಈ ವೇಳೆ ಮುಖಂಡರಾದ ರಾಜಕುಮಾರ ಸಿರಗಾಪುರ, ರತಿಕಾಂತ ಕೋಹಿನೂರ, ಶಿವಶರಣಪ್ಪ ಸಂತಾಜಿ, ಗುರುಲಿಂಗಪ್ಪ ಸೈದಾಪುರೆ, ಜಾನೇಶ್ವರ
ಮೂಳೆ, ರೋಹಿದಾನ ಬಿರಾದಾರ, ವಿಜಯಕುಮಾರ ಖುಬಾ, ರಾಜು ಜಾನೆವಾಲೆ, ವಿಶ್ವನಾಥ ಜಾಧವ ಮುಂತಾದವರು ಇದ್ದರು.

ಶರಣಪ್ರಕಾಶ-ಪ್ರಿಯಾಂಕ್ ಖರ್ಗೆಗೆ ತಿರುಗೇಟು
ತಾವು ಜಿಪಂ ಅಧ್ಯಕ್ಷರ ಆಪ್ತ ಸಹಾಯನಾಗಿ ಜಿಪಂ ಲೂಟಿ ಮಾಡಿದ್ದೆ ಎಂದು ಮಾಜಿ ಸಚಿವರಾದ ಡಾ| ಶರಣಪ್ರಕಾಶ ಪಾಟೀಲ, ಪ್ರಿಯಾಂಕ್‌ ಖರ್ಗೆ ಟೀಕೆಗೆ ತಿರುಗೇಟು ನೀಡಿದ ಶರಣು ಸಲಗರ, ನಾನು ಕೆಳಹಂತದಿಂದ ಎಲ್ಲರ ಕೆಲಸ ಮಾಡುತ್ತ ಬಂದವನು. ಜನರ ಕಷ್ಟ ಸಮೀಪದಿಂದ ಅರಿತವನು. ನಿಮ್ಮಂತೆ ಯಾರ ಕೈಗೊಂಬೆಯಲ್ಲ. ನೀವು ಸ್ವಂತಿಕೆಯಿಂದ ಗೆದ್ದವರಲ್ಲ. ಡಾ| ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಸೋಲಲು ತಾವೇ ಕಾರಣರು ಎಂದು ನಿಮ್ಮದೇ ಪಕ್ಷದ ಸತ್ಯ ಶೋಧನಾ ಸಮಿತಿ ವರದಿ ನೀಡಿದ್ದನ್ನು ಮರೆತಿದ್ದೀರಾ? ತಮ್ಮ ಬಗ್ಗೆ ಇಲ್ಲ ಸಲ್ಲದ್ದು ಹಾಗೂ ಹಗುರವಾಗಿ ಮಾತನಾಡುವುದು ಸರಿಯಲ್ಲ. ನಾನು ಮಾತನಾಡಿದರೆ ತಮ್ಮದೇನು ಉಳಿಯುವುದಿಲ್ಲ ಎಂದು ಗುಡುಗಿದರು.

12ಕ್ಕೆ ಬಸವ ಕಲ್ಯಾಣಕ್ಷೇತ್ರಕ್ಕೆ ಮುಖ್ಯಮಂತ್ರಿ
ಶರಣು ಸಲಗರ ಪರ ಮತಯಾಚಿಸಲು ಏ.12ರಂದು ಮುಖ್ಯಮಂತ್ರಿ ಯಡಿಯೂರಪ್ಪ ಬಸವಕಲ್ಯಾಣ ಕ್ಷೇತ್ರಕ್ಕೆ ಆಗಮಿಸುವರು. ಮುಖ್ಯಮಂತ್ರಿ ಮೂರು ಕಡೆ ಬಹಿರಂಗ ಪ್ರಚಾರ ಸಭೆ ನಡೆಸುವರು. ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿರುವ ಸಿಎಂ ಆಗಮನಕ್ಕೆ ಕ್ಷೇತ್ರದ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.