ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು


Team Udayavani, Oct 18, 2021, 5:32 PM IST

ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು

ಹುಮನಾಬಾದ: ಪಟ್ಟಣ ಹೊರವಲಯದ ಅನೇಕ ಕೈಗಾರಿಕಾ ಕಾರ್ಖಾನೆಗಳು ಕಾನೂನು ಮೀರಿ ವಿಷಯುಕ್ತ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಪರಿಸರ ಹಾನಿ ಉಂಟು ಮಾಡುತ್ತಿವೆ.

ಹುಮನಾಬಾದ ಸುತ್ತಲ್ಲಿನ ಪ್ರದೇಶದಲ್ಲಿ ಪರಿಸರ ಮಾಲಿನ್ಯ ಉಂಟಾಗುತ್ತಿದ್ದರು ಕೂಡ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು, ಬೀದರ ಜಿಲ್ಲಾಡಳಿತ, ತಾಲೂಕು ಆಡಳಿತ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

ಹೆಚ್ಚಾಗಿ ವಿವಿಧ ರಾಸಾಯನಿಕ, ಬಹು ಔಷಧಿಗಳ ಕಚ್ಚಾ ವಸ್ತು ಉತ್ಪಾದನೆ ಸೇರಿದಂತೆ ಇತರೆ ಅನೇಕ ಪದಾರ್ಥಗಳ ಉತ್ಪನಗಳು ಇಲ್ಲಿನ ಕಾರ್ಖಾನೆಗಳಲ್ಲಿ ತಯಾರಿಸುತ್ತವೆ.

ಇಲ್ಲಿ ಯಾವುದೇ ಪರಿಸರ ಮಾಲಿನ್ಯದ ನಿಯಮಗಳು ಯಾರು ಕೂಡ ಪಾಲಿಸುತ್ತಿಲ್ಲ ಎಂಬ ಆರೋಪಗಳು ಹೆಚ್ಚಿವೆ. ಮಳೆಗಾಲದಲ್ಲಿ ನೀರು ಹರಿಯಬೇಕಿದ್ದ ಹಳ್ಳಗಳಲ್ಲಿ ವಿಷಪೂರಿತ ರಾಸಾಯನಿಕ ಹರಿದಾಡುತ್ತಿದೆ. ಈ ಕುರಿತು ಈ ಹಿಂದೆ ಅನೇಕ ಹೋರಾಟಗಳು ನಡೆದರು ಕೂಡ ಯಾವ ಪ್ರಯೋಜನವಾಗಿಲ್ಲ.

ಇತ್ತೀಚೆಗೆ ಕೂಡ ಸ್ಥಳೀಯ ಶಾಸಕ ರಾಜಶೇಖರ ಪಾಟೀಲ ಕಾರ್ಖಾನೆಗಳ ತ್ಯಾಜ್ಯದ ಸಮಸ್ಯೆ ಕುರಿತು ವಿಧಾನ ಸಭೆ ಕಲಾಪದಲ್ಲಿ ಧ್ವನಿ ಎತ್ತಿದರು ಕೂಡ ಇಲ್ಲಿ ಮಾತ್ರ ಯಾವುದೇ ಬದಲಾವಣೆಗಳು ಕಂಡು ಬರುತ್ತಿಲ್ಲ.

ಕೈಗಾರಿಕೆಗಳು ತಮ್ಮ ತ್ಯಾಜ್ಯವನ್ನು ಧುಮ್ಮನಸೂರ್ ಹೊರ ಪ್ರದೇಶದ ಚೀನಕೇರಾ ಕ್ರಾಸ್ ಹತ್ತಿರದ ಆಳದ ಪ್ರದೇಶದಲ್ಲಿ, ಆನೆಕೊಳ್ಳ ನೀರು ಹರಿಯುವ ಪ್ರದೇಶದಲ್ಲಿ ಹಾಗೂ ಲಾಲಧರಿ ಪ್ರದೇಶದ ಭೂಮಿಯೊಂದರಲ್ಲಿ ಅಧಿಕ ಪ್ರಮಾಣದ ತ್ಯಾಜ್ಯ ಸುರಿಯಲಾಗುತ್ತಿದೆ.

ಲಾಲಧರಿ ಕ್ರಾಸ್ ಸಮೀಪದಲ್ಲಿನ ಭೂಮಿಯಲ್ಲಿ ತ್ಯಾಜ್ಯದ ಮೇಲೆ ಮಣ್ಣು ಮುಚ್ಚಿರುವುದು ಕಂಡು ಬಂದಿದೆ. ಮಳೆ ಸುರಿದಂತೆ ಮಣ್ಣು ಜಾರಿ ಚಿಲಗಳಲ್ಲಿ ತುಂಬಿದ ತ್ಯಾಜ್ಯ ಎದ್ದು ಕಾಣುತ್ತಿದೆ. ಇದನು ಗಮನಿಸಿದ ಸಮೀಪದ ತಾಂಡ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಎಲ್ಲೆಂದರಲ್ಲಿ ಕಾರ್ಖಾನೆಗಳ ತ್ಯಾಜ್ಯ ಎಸೆಯಲಾಗುತ್ತಿದ್ದು, ಜನ-ಜಾನುವಾರುಗಳ ಜೀವದ ಕುರಿತು ಯಾವ ಕಾರ್ಖಾನೆಗಳು ಚಿಂತಿಸುತ್ತಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.