ವಾರದೊಳಗೆ ಭತ್ತ ಖರೀದಿ ಕೇಂದ್ರ ಆರಂಭಿಸಲು ಒತ್ತಾಯ
Team Udayavani, Nov 13, 2021, 3:38 PM IST
ರಾಯಚೂರು: ಒಂದು ವಾರದೊಳಗೆ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನದಲ್ಲಿ ಧರಣಿ ನಡೆಸಿದ ಸಂಘಟನೆ ಸದಸ್ಯರು ಸಹಾಯಕ ಆಯುಕ್ತ ಸಂತೋಷ ಕಾಮಗೌಡರಿಗೆ ಮನವಿ ಸಲ್ಲಿಸಿದರು.
ತೆಲಂಗಾಣ, ಆಂಧ್ರ ಮಾದರಿಯಲ್ಲಿ ಸರ್ಕಾರ 50 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ತೀರ್ಮಾನ ಕೈಗೊಳ್ಳಬೇಕು. ಪ್ರತಿ ರೈತರಿಂದ 300 ಕ್ವಿಂಟಲ್ ಭತ್ತ, 200 ಕ್ವಿಂಟಲ್ ಜೋಳ, 30 ಕ್ವಿಂಟಲ್ ತೊಗರಿ, 100 ಕ್ವಿಂಟಲ್ ಸಜ್ಜೆ ಹಾಗೂ 30 ಕ್ವಿಂಟಲ್ ಕಡಲೆ ಖರೀದಿಗೆ ನಿರ್ಧರಿಸಬೇಕು. ಅಲ್ಲದೇ, ಮುಖ್ಯವಾಗಿ ಉತ್ಪನ್ನ ಖರೀದಿಸಿದ 3 ದಿನದೊಳಗೆ ಹಣ ಪಾವತಿಸುವಂತೆ ಒತ್ತಾಯಿಸಿದರು.
ಹತ್ತಿ ಮಾರುಕಟ್ಟೆಯಲ್ಲಿ ರೈತರಿಗೆ ನಡೆಯುತ್ತಿರುವ ಮೋಸ ತಡೆಗಟ್ಟಬೇಕು. ಸೂಟ್ ಹೆಸರಲ್ಲಿ ವಂಚಿಸುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ವೇಬ್ರಿಡ್ಜ್ ಮತ್ತು ಎಲೆಕ್ಟ್ರಾನಿಕ್ಸ್ ತೂಕದ ಯಂತ್ರ ಪರಿಶೀಲಿಸಿ ರೈತರಿಗಾಗುವ ಮೋಸ ತಡೆಯಬೇಕು. ತುಂಗಭದ್ರಾ ಎಡದಡೆ, ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ ರೈತರಿಗೆ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ನಿಖರತೆ ತಿಳಿಸಲು ಕೂಡಲೇ ಸಲಹಾ ಸಮಿತಿ ಸಭೆ ಕರೆಯುವಂತೆ ಒತ್ತಾಯಿಸಿದರು.
ಈ ವೇಳೆ ಸಂಘಟನೆ ಮುಖಂಡರಾದ ಚಾಮರಸ್ ಮಾಲಿಪಾಟೀಲ್, ರಾಮಬಾಬು, ಕೆ.ಜಿ. ವೀರೇಶ, ಸೂಗುರಯ್ಯ ಆರ್ ಎಸ್.ಮಠ, ಡಿ.ಎಚ್. ಪೂಜಾರಿ, ಖಾಜಾ ಅಸ್ಲಂ ಅಹ್ಮದ್, ಮಾರೆಪ್ಪ ಹರವಿ, ಡಿ.ಎಸ್. ಶರಣಬಸವ, ರಾಮಣ್ಣ, ಜಿಂದಪ್ಪ, ಜಾನ್ ವೆಸ್ಲಿ, ಕರಿಯಪ್ಪ ಅಚ್ಚೊಳಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿದ್ರಿ ಕಲೆಯಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದ ರಶೀದ್ ಅಹ್ಮದ್ ಖಾದ್ರಿಯವರಿಗೆ ಪದ್ಮಶ್ರೀ
ರೈತರ ಜೊತೆಗಿನ ಚೆಲ್ಲಾಟ ಒಳ್ಳೆಯದಲ್ಲ: ಬಿಜೆಪಿ ಸರಕಾರಕ್ಕೆ ಹೆಚ್ ಡಿಕೆ ಎಚ್ಚರಿಕೆ
ಭಾಲ್ಕಿ: ಸಾಲಬಾಧೆ ತಾಳಲಾರದೇ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ
ಮಾಣಿಕನಗರ ಪಂಚಾಯತ್ಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ
ಜ.5 ರಿಂದ ಬೀದರ್ ನಲ್ಲಿ 4 ದಿನಗಳ ಕಾಲ ‘ಪಂಚರತ್ನ ರಥಯಾತ್ರೆ’ : ಬಂಡೆಪ್ಪ ಕಾಶೆಂಪುರ್
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿಯಲ್ಲಿ ಅತೃಪ್ತಿಯ ಹೊಗೆ
ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ಮತ್ತೆ ಭಯದಲ್ಲಿ ಜನ
ಗರಿಷ್ಠ ರಾಜಸ್ವ ಸಂಗ್ರಹವಿದ್ದರೂ ತೀವ್ರ ಸಿಬಂದಿ ಕೊರತೆ: ಇದು ಮಂಗಳೂರು ಆರ್ಟಿಒ ವ್ಯಥೆ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಸಹಕಾರಿ ಸಮಾವೇಶ ಯಶಸ್ಸಿಗೆ ಸಂಸದ ನಳಿನ್ ಸೂಚನೆ