ಶಾಂತಿ-ಸುವ್ಯವಸ್ಥೆ ಕಾಪಾಡಲು 36 ವೃತ್ತದಲ್ಲಿ 110 ಕ್ಯಾಮೆರಾ ಅಳವಡಿಕೆ

ಜಿಲ್ಲೆಯ ಇತರೆ ನಗರ ಹಾಗೂ ಗ್ರಾಪಂಗಳಿಗೂ ವಿಸ್ತರಿಸುವ ಯೋಜನೆ ಇದೆ

Team Udayavani, Nov 2, 2022, 6:05 PM IST

ಶಾಂತಿ-ಸುವ್ಯವಸ್ಥೆ ಕಾಪಾಡಲು 36 ವೃತ್ತದಲ್ಲಿ 110 ಕ್ಯಾಮೆರಾ ಅಳವಡಿಕೆ

ಬಸವಕಲ್ಯಾಣ: ರಾಜ್ಯದಲ್ಲಿ ಬಸವಕಲ್ಯಾಣ ನಗರದ 36 ವೃತ್ತಗಳಲ್ಲಿ 110 ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಪ್ರಪ್ರಥಮ ನಗರ ಎನಿಸಿಕೊಂಡಿದೆ. ಬಸವಕಲ್ಯಾಣದಲ್ಲಿ ಅಹಿತಕರ ಘಟನೆಗಳು ಆಗದಿರಲಿ ಮತ್ತು ಬಸವಣ್ಣನವರು ಮತ್ತು ಮಹಾತ್ಮ ಗಾಂಧೀಜಿ ಕಂಡ ಕನಸುಗಳು ನನಸಾಗಲಿ ಎಂದು ಶಾಸಕ ಶರಣು ಸಲಗರ ಹೇಳಿದರು.

ನಗರದ ಸಿಪಿಐ ವೃತ್ತ ಕಚೇರಿಯಲ್ಲಿ ಮಂಗಳವಾರ ಸಿಸಿ ಟಿವಿ ನಿಯಂತ್ರಣ ಕೊಠಡಿ ಉದ್ಘಾಟಿಸಿ ಮಾತನಾಡಿದರು. ಈ ಸಿಸಿ ಕ್ಯಾಮೆರಾಗಳು ಅಪರಾಧಿಕ ಕೃತ್ಯದಲ್ಲಿ ಭಾಗಿಯಾಗುವವರನ್ನು ಹೆಡೆಮುರಿ ಕಟ್ಟಲು ಸಹಕಾರಿ.

ಇಲ್ಲಿಯ ಬಿಕೆಡಿಬಿ ಅನುದಾನದಿಂದ ಹಾಗೂ ಪೊಲೀಸ್‌ ಇಲಾಖೆ ಮುಂಜಾಗ್ರತೆಯಿಂದಾಗಿ ಇದು ಸಾಧ್ಯವಾಗಿದೆ. ಮುಂದಿನ ಮೂರು ವರ್ಷಗಳವರೆಗೆ ಗುತ್ತಿಗೆದಾರರು ಇದನ್ನು ತೊಂದರೆಯಾಗದ ರೀತಿಯಲ್ಲಿ ಕೆಲಸ ಮಾಡಬೇಕು. ಕಲ್ಯಾಣ ಜಗತ್ತಿನ ಸುಂದರ ಪ್ರವಾಸಿ ತಾಣವಾಗಲು ಸಿಸಿ ಕ್ಯಾಮೆರಾಗಳು ಉತ್ತಮವಾಗಿವೆ ಎಂದರು.

ಹುಮನಾಬಾದ ಎಎಸ್‌ಪಿ ಶಿವಾಂಶು ರಾಜಪುತ ಮಾತನಾಡಿ, ಸಮಾಜದಲ್ಲಿ ಅಹಿತಕರ ಘಟನೆಗಳು ತಡೆಗಟ್ಟುವ ನಿಟಿನಲ್ಲಿ ಈ ಕ್ಯಾಮೆರಾಗಳು ಸಹಕಾರಿ. ಅಪರಾಧ ಕೃತ್ಯದಲ್ಲಿ ಭಾಗಿಯಾದವರ ಹೆಡೆಮುರಿ ಕಟ್ಟಲು ನಮ್ಮ ಕ್ಯಾಮೆರಾಗಳು ಉಪಯೋಗಕ್ಕೆ ಬರುತ್ತವೆ. ಜಿಲ್ಲೆಯ ಇತರೆ ನಗರ ಹಾಗೂ ಗ್ರಾಪಂಗಳಿಗೂ ವಿಸ್ತರಿಸುವ ಯೋಜನೆ ಇದೆ ಎಂದರು.

ಸಹಾಯಕ ಆಯುಕ್ತ ರಮೇಶ ಕೋಲಾರ, ಬಿಕೆಡಿಬಿ ತಹಶೀಲ್ದಾರ್‌ ಮೊಹಮ್ಮದ್‌ ಮೋಸಿನ್‌ ಮಾತನಾಡಿ, ನಗರದ 36 ಸ್ಥಳಗಳಲ್ಲಿ 110 ಕಡೆಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದ್ದು ಇದರಿದ ಅಪರಾಧ ಕೃತ್ಯಗಳು ತಡೆಗಟ್ಟಲು ಸಾಧ್ಯ ಎಂದರು.

ಈ ವೇಳೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ, ನಗರಸಭೆ ಅಧ್ಯಕ್ಷೆ ಶಹಜಹಾನ ತನ್ವೀರ ಅಹ್ಮದ್‌, ತಹಶೀಲ್ದಾರ್‌ ಶಾಂತಗೌಡ ಬಿರಾದಾರ, ನಗರಸಭೆ ಪೌರಾಯುಕ್ತ ಶಿವಕುಮಾರ, ಇಒ ಕಿರಣ ಪಾಟೀಲ, ನಗರ ಸಿಪಿಐ ಸುಶೀಲಕುಮಾರ ಸೇರಿದಂತೆ ವಿವಿಧ ಠಾಣೆಗಳ ಪಿಎಸ್‌ಐಗಳಾದ ವಸೀಮ್‌ ಪಟೇಲ್‌, ಬಸಲಿಂಗಪ್ಪ, ಪುಷ್ಪಾ, ಲಿಂಗಪ್ಪಾ ಮಣ್ಣೂರ, ರೇಣುಕಾ ಹಾಗೂ ಸಿಬ್ಬಂದಿ ಇದ್ದರು.

ಅಪರಾಧಿಕ ಕೃತ್ಯ ತಡೆಗೆ ಕಟ್ಟೆಚ್ಚರ
ಇಲ್ಲಿಯ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿ 50 ಲಕ್ಷ ರೂ. ವೆಚ್ಚದಲ್ಲಿ ನಗರದ ಪ್ರಮುಖ 36 ಸ್ಥಳಗಳಲ್ಲಿ 110 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 16 ಸ್ಥಳಗಳಲ್ಲಿ ಎಲ್‌ಇಡಿ ಮೂಲಕ ನಿಗಾ ಮಾಡಲಾಗುತ್ತಿದೆ. ಹೀಗಾಗಿ ಒಟ್ಟಾರೆ ನಗರ ಪ್ರದೇಶ ಈಗ ಪೊಲೀಸ್‌ ಕಂಟ್ರೋಲ್‌ನಲ್ಲಿದೆ. ಯಾವುದೇ ಅಹಿತಕರ ಘಟನೆಗಳು ನಡೆದರೂ ಕೂಡ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.