ಜೆಡಿಎಸ್ ಸೆಕ್ಯುಲರ್ ಪಕ್ಷವೋ, ಆರೆಸ್ಸೆಸ್ ಬೆಂಬಲಿತವೋ?: ರಾಹುಲ್
Team Udayavani, May 4, 2018, 6:40 AM IST
ಹುಮನಾಬಾದ: ಮತ್ತೆ ಜೆಡಿಎಸ್ ವಿರುದ್ಧ ಮುಗಿಬಿದ್ದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿನ ಜನತಾದಳ ಸೆಕ್ಯುಲರ್ ಪಕ್ಷವೋ ಅಥವಾ ಸಂಘ ಪರಿವಾರಕ್ಕೆ ಬೆಂಬಲ ನೀಡುತ್ತಿ ದೆಯೋ ಎಂಬುದರ ಕುರಿತು ಉತ್ತರಿಸಬೇಕು.
ಬಿಜೆಪಿ ಜೊತೆ ಇದ್ದರೂ ಕೂಡ ಅದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಬೀದರ್ ಜಿಲ್ಲೆ ಹುಮನಾಬಾದನಲ್ಲಿ ಗುರುವಾರ
ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ರಾಹುಲ್, ಜೆಡಿಎಸ್ ವಿರುದಟಛಿ ವಾಗಾಟಛಿಳಿ ಮುಂದುವರಿಸಿದರು. ಬಳಿಕ, ಮೋದಿ ವಿರುದ್ಧ ವಾಗ್ಧಾಳಿ ನಡೆಸಿ, ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅನೇಕ ಸುಳ್ಳು ಭರವಸೆಗಳನ್ನು ನೀಡಿದೆ. ರೈತರ ನೆರವಿಗೆ ಧಾವಿಸುವುದಾಗಿ ಹೇಳಿದ ಬಿಜೆಪಿ, ರೈತರ ಸಂಕಷ್ಟದಲ್ಲಿ ಕೈ ಹಿಡಿಯುವ ಕೆಲಸ ಮಾಡಿಲ್ಲ. ನಾನು ಮೋದಿ ಅವರ ಕಚೇರಿಗೆ ಹೋಗಿದ್ದೆ. “ಮೊದಿಜೀ ಭಾರತದ ರೈತರು ಸಾಲ ಮನ್ನಾ ಮಾಡುವಂತೆ ಕೇಳುತ್ತಿದ್ದಾರೆ’ ಎಂದು ತಿಳಿಸಿದೆ. ಆದರೆ, ಈವರೆಗೂ ಮೋದಿ ಅವರು ಉತ್ತರ ನೀಡಿಲ್ಲ ಎಂದರು.
ಇದೇ ಪ್ರಶ್ನೆಯನ್ನು ನಾನು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕೇಳಿದೆ.ಕರ್ನಾಟಕದ ರೈತರ ಸಾಲ ಮನ್ನಾ ಮಾಡಲು ಸಾಧ್ಯವೇ ಎಂದು ಕೇಳಿದ ಕೇವಲ 10 ದಿನಗಳಲ್ಲಿ 8 ಸಾವಿರ ಕೋಟಿ ರೂ.ರೈತರ ಸಾಲ ಮನ್ನಾ ಮಾಡಿದ್ದಾರೆ.
ಆದರೆ, ಕೇಂದ್ರ ಸರ್ಕಾರ ಒಂದು ರೂ.ಕೂಡ ನೆರವಾಗುವ ನಿಟ್ಟಿನಲ್ಲಿ ಕೆಲಸ ಮಾಡಿಲ್ಲ ಎಂದರು. ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಭ್ರಷ್ಟಾಚಾರದ ವಿರುದಟಛಿ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಕರ್ನಾಟಕದ ಬಿ.ಎಸ್.ಯಡಿಯೂರಪ್ಪ ಹಾಗೂ ನಾಲ್ವರು ಸಚಿವರು ಜೈಲು ಊಟ ಮಾಡಿ ಬಂದಿದ್ದು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಗೆ ಘೋಷಣೆ ಮಾಡಿದ್ದಿರಿ? ಮೋದಿ ನನ್ನ ವಿರುದ್ಧ ಏನು ಬೇಕಾದರೂ ಮಾತನಾಡಬಹುದು. ಯಾವ ಪದಗಳನ್ನು ಬೇಕಾದರೂ ಬಳಸಬಹುದು. ಆದರೆ ನಾನು ಅವರ ವಿರುದ್ಧ ಒಂದು ಶಬ್ದ ಕೂಡ ಮಾತನಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ