ಸತತ 5 ಬಾರಿ ಗೆದ್ದ ಇಸ್ಮಾಯಿಲ್‌

ರೈತನಿಗೆ ಸೋಲಿಲ್ಲದ ಸರದಾರ ಪಟ್ಟ ,6ನೇ ಬಾರಿ ಅದೃಷ್ಟ ಪರೀಕ್ಷೆಗೆ ಸಜ್ಜು

Team Udayavani, Dec 21, 2020, 5:10 PM IST

BIDARA-TDY-2

ಬೀದರ: ಜಿಲ್ಲೆಯ ಕಣಜಿ (ಕೆ) ಗ್ರಾಪಂಗೆ ಮತ್ತು ರೈತ ಇಸ್ಮಾಯಿಲ್‌ ಶಿಂಧೆಗೂ ಬಿಡಿಸಲಾಗದ ನಂಟು. ಸತತ ಐದು ಬಾರಿ ಗೆಲುವು ಸಾಧಿಸುತ್ತ ಬಂದಿರುವ ಈ ಅಪರೂಪದ ಅಭ್ಯರ್ಥಿ ತಮ್ಮ ಜೀವನದ ಅರ್ಧ ಭಾಗವನ್ನು ಪಂಚಾಯತಿಯಲ್ಲೇ ಕಳೆದಿದ್ದಾರೆ. ಅಷ್ಟೇ ಅಲ್ಲ ಇಸ್ಮಾಯಿಲ್‌ ತಂದೆ ಶಂಬಣ್ಣ ಸಹ ಎರಡು ಬಾರಿ ಸದಸ್ಯರಾಗಿರುವುದು ಸಿಂಧೆ ಕುಟುಂಬದ ವಿಶೇಷ.

ಕೇವಲ ಐದನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆದಿರುವ ಇಸ್ಮಾಯಿಲ್‌ ಶಿಂಧೆ (60) ಒಬ್ಬ ಕೃಷಿಕ. ಕಣಜಿ(ಕೆ) ಗ್ರಾಪಂ ವ್ಯಾಪ್ತಿಯ ಹುಣಜಿ ಗ್ರಾಮದಿಂದ ಕಳೆದ ಐದು ಅವಧಿಗೆ ಸದಸ್ಯರಾಗಿ ಆಯ್ಕೆ ಆಗಿದ್ದಾರೆ. ಪ್ರತಿ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವಿನ ನಗೆಬೀರುತ್ತ ಬಂದಿದ್ದಾರೆ. ಗ್ರಾಮದ ಜನರು ಕೂಡ ಪದೇ ಪದೆ ಇಸ್ಮಾಯಿಲ್‌ ಅವರನ್ನೇ ಆಯ್ಕೆ ಮಾಡಿಕೊಳ್ಳುವ ಮೂಲಕ ಸೋಲಿಲ್ಲದ ಸರದಾರ ಎಂಬ ಪಟ್ಟಕ್ಕೇರಿಸಿದ್ದಾರೆ.

ಈ ಗ್ರಾಪಂ ವ್ಯಾಪ್ತಿಯಲ್ಲಿ ಕಣಜಿ ಮತ್ತು ಹುಣಜಿ ಎರಡು ಗ್ರಾಮಗಳು ಸೇರಿದ್ದು, ಒಟ್ಟು 12 ಸದಸ್ಯ ಸ್ಥಾನಗಳಿವೆ. ಕಳೆದ ನಾಲ್ಕು ದಶಕಗಳಿಂದ ಹುಣಜಿ ಗ್ರಾಮದ ಒಂದು ಸ್ಥಾನ ಇಸ್ಮಾಯಿಲ್‌ ಕುಟುಂಬಕ್ಕೆ ಸೀಮಿತ ಆದಂತಾಗಿದೆ. ಇಸ್ಮಾಯಿಲ್‌ಗ‌ೂ ಮುನ್ನ ಅವರ ತಂದೆ ಶಂಬಣ್ಣ ಎರಡು ಬಾರಿ ಮಂಡಲ್‌ ಪಂಚಾಯತ್‌ನ ಸದಸ್ಯರಾಗಿ ಜನಮನ್ನಣೆ ಪಡೆದಿದ್ದರು. ಮುಂದೆ ಅವರ ಮಗ ಸತತವಾಗಿ ಗೆಲ್ಲುತ್ತ ಬಂದಿದ್ದು, ಈಗ 6 ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಸರಳ, ಸಜ್ಜನಿಕೆಯ ವ್ಯಕ್ತಿ: ಇಸ್ಮಾಯಿಲ್‌ ಅತಿ ಸರಳ, ಸಜ್ಜನಿಕೆಯ ವ್ಯಕ್ತಿ. ಒಂದೆರಡು ಎಕರೆ ಭೂಮಿಯಲ್ಲಿ ಕೃಷಿ ಕಾಯಕ ಮಾಡಿಕೊಂಡಿರುವ ಈ ಸದಸ್ಯ ತಮ್ಮ ಗ್ರಾಮ, ಗ್ರಾಮದ ಜನರ ಅಭಿವೃದ್ಧಿ ಅವರ ಕಷ್ಟ-ಸುಖಕ್ಕಾಗಿ ಅವರ ಮನಸ್ಸು ಮಿಡಿಯುತ್ತಲೇ ಇರುತ್ತದೆ. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಕಾಡಿ ಬೇಡಿ ಗ್ರಾಮಕ್ಕೆ ಸಾಕಷ್ಟು ಯೋಜನೆಗಳನ್ನು ತಂದಿದ್ದಾರೆ. ನಿರ್ಗತಿಕರಿಗೆ ನಿವೇಶನ, ಮನೆ, ಭೂಮಿ, ಕುಡಿಯುವ ನೀರು, ರಸ್ತೆ ಮತ್ತು ಚರಂಡಿ ಸೇರಿ ಮೂಲ ಸೌಕರ್ಯ ಕಲ್ಪಿಸಿಕೊಟ್ಟು ಪ್ರಾಮಾಣಿಕ ಜನಪ್ರತಿನಿಧಿ  ಎನಿಸಿಕೊಂಡಿದ್ದಾರೆ. ಹಾಗಾಗಿಯೇ ಪ್ರತಿ ಚುನಾವಣೆಯಲ್ಲೂ ಗ್ರಾಮಸ್ಥರು ಭಾರೀ ಅಂತರದಿಂದ ಗೆಲ್ಲಿಸುತ್ತ ಬಂದಿದ್ದಾರೆ.

ಸತತ ಐದು ಬಾರಿ ಸದಸ್ಯರಾಗಿರುವ ಇಸ್ಮಾಯಿಲ್‌ಗೆ ಗ್ರಾಪಂ ಅಧ್ಯಕ್ಷರಾಗುವ ಆಸೆ ಮಾತ್ರ ಈಡೇರಿಲ್ಲ. ಕಣಜಿ (ಕೆ) ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಿಗದಿತ ಮೀಸಲಾತಿ ಯೋಗ ಕೂಡಿ ಬಂದಿಲ್ಲ. ಇನ್ನು ಕಣಜಿ(ಕೆ) ಪಂಚಾಯತನ ಧರ್ಮಣ್ಣ ಪಾಟೀಲ ಸಹ ಹ್ಯಾಟ್ರಿಕ್‌ ಗೆಲುವು ಸಾಧಿಸಿ ಈಗ ನಾಲ್ಕನೇ ಸಲ ಹಾಗೂ ಪರಮೇಶ್ವರ ಎರಡು ಬಾರಿ ಗೆದ್ದು, ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ನಮ್ಮ ಕುಟುಂಬ ಗ್ರಾಮ, ಗ್ರಾಮಸ್ಥರ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಹಾಗಾಗಿ ಗ್ರಾಪಂ ಚುನಾವಣೆಯಲ್ಲಿ ಸತತ 5 ಬಾರಿ ನನ್ನನ್ನ ಗೆಲ್ಲಿಸುತ್ತ ಬಂದಿದ್ದಾರೆ. ನಮ್ಮ ತಂದೆಯೂ ಎರಡು ಬಾರಿ ಸದಸ್ಯರಾಗಿದ್ದರು. ಜನರ ಸೇವೆಯೇ ನನಗೆ ಮುಖ್ಯ. ಪ್ರಾಮಾಣಿಕವಾಗಿ ಸರ್ಕಾರದ ಯೋಜನೆಗಳನ್ನು ಗ್ರಾಮಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇನೆ. ಈ ಸಲವೂ ನನಗೆ ಜನ ಬೆಂಬಲ ವ್ಯಕ್ತವಾಗಲಿದೆ. – ಇಸ್ಮಾಯಿಲ್‌ ಶಿಂಧೆ, ಗ್ರಾಪಂ ಅಭ್ಯರ್ಥಿ

 

ವಿಶೇಷ ವರದಿ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.