Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

ಸಚಿವ ಈಶ್ವರ ಖಂಡ್ರೆ ಸಹೋದರ ಅಧ್ಯಕ್ಷರಾಗಿರುವ ಬ್ಯಾಂಕ್

Team Udayavani, Apr 12, 2024, 7:33 PM IST

1-eqewewqe

ಬೀದರ್ : ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಹೋದರ ಅಧ್ಯಕ್ಷರಾಗಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಮೇಲೆ ಆದಾಯ ತೆರಿಗೆ ಅಧಿಕಾರಿಗಳ ತಂಡ ಶುಕ್ರವಾರ ದಾಳಿ ನಡೆಸಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ದಾಳಿ ನಡೆದಿರುವುದು ಕುತೂಹಲ ಮೂಡಿಸಿದ್ದು, ರಾಜಕೀಯ ತಿರುವಿಗೆ ಕಾರಣವಾಗಲಿದೆ.

ಕಲ್ಬುರ್ಗಿ, ಯಾದಗಿರಿ ಮತ್ತು ತೆಲಂಗಾಣಾದ ಅಧಿಕಾರಿಗಳನ್ನು ಒಳಗೊಂಡ 15 ಜನರ ತಂಡ ಬೆಳಗ್ಗೆ11.30 ರ ಸುಮಾರಿಗೆ ದಾಳಿ ಮಾಡಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಬ್ಯಾಂಕ್‌ನ ಮೂರು ಕಡೆಯ ಮುಖ್ಯ ದ್ವಾರಗಳಿಗೆ ಬೀಗ ಜಡಿದು, ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮೊಬೈಲ್‌ಗಳನ್ನು ಬಂದ್ ಮಾಡಿಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರದ ನಿಯಮ ಗಾಳಿಗೆ ತೂರಿ ಸಾಲ ನೀಡಿರುವ ಆರೋಪ ಹಿನ್ನಲೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಬ್ಯಾಂಕ್ ಹಲವು ವರ್ಷಗಳ ಕಾಲ ನಾಗಮಾರಪಳ್ಳಿ ಪರಿವಾರದ ಹಿಡಿತದಲ್ಲಿತ್ತು. ಆರು ತಿಂಗಳ ಹಿಂದೆಯಷ್ಟೇ ನಡೆದಿದ್ದ ಚುನಾವಣೆಯಲ್ಲಿ ಸಚಿವ ಈಶ್ವರ ಅವರ ಸಹೋದರ ಅಮರಕುಮಾರ್ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಷ್ಟೇ ಅಲ್ಲ ಈಗ ಸಚಿವರ ಪುತ್ರ ಸಾಗರ್ ಖಂಡ್ರೆ ಬೀದರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವು ದಿನ ಬಾಕಿ ಇರುವಾಗ ಐಟಿ ದಾಳಿ ಆಗಿರುವುದು ಕುತೂಹಲ ಮೂಡಿಸಿದೆ.

ಐಟಿ ದಾಳಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಸಿ ಬ್ಯಾಂಕ್ ಸಿಇಒ ಮಂಜುಳಾ, ಐಟಿ ಅಧಿಕಾರಿಗಳು ಅಕೌಂಟ್ ಬ್ಯಾಲೆನ್ಸ್ ಪರಿಶೀಲಿಸುತ್ತಿದ್ದಾರೆ. ಚುನಾವಣೆ ವೇಳೆ ಇದು ನಿರಂತರ ಪ್ರಕ್ರಿಯೆ. ನಾವು ಪಾರದರ್ಶಕವಾಗಿದ್ದು, ಅಧಿಕಾರಿಗಳು ಕೇಳುವ ಎಲ್ಲ ದಾಖಲೆಗಳನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.

ರಾಜಕೀಯ ಪ್ರೇರಿತ

ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಐಟಿ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಹೆದರಿಸುವ ಕೆಲಸವಾಗಿದೆ. ನಮಗೆ‌ ಕಾನೂನಿನ ಮೇಲೆ ನಂಬಿಕೆ ಇದ್ದು, ಜನರೂ ಸಹ‌ ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದರು.

ಬಿಜೆಪಿ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಒಬ್ಬ ಬಿಜೆಪಿ ಸಮರ್ಥಕ, ಅವರ ಸಂಸ್ಥೆಯ ಮೇಲೆ ಎಲ್ಲಿಯಾದರೂ ದಾಳಿ ಆಗಿದೆಯಾ‌ ? ಸ್ವಲ್ಪ ಕೊರತೆಯಿದ್ದರೆ ಬಿಜೆಪಿ ಸೇರಿದರೆ ಸಾಕು‌ ಪ್ರಕರಣ ರದ್ದಾಗುತ್ತದೆ‌. ಬಿಜೆಪಿಯದ್ದು ಸರ್ವಾಧಿಕಾರಿ ಧೋರಣೆಯಾಗಿದ್ದು, ಪ್ರತಿಪಕ್ಷ ಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಸಚಿವ ಖಂಡ್ರೆ ಕಿಡಿಕಾರಿದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.