ಜನರ ನಿರೀಕ್ಷೆ ತಕ್ಕಂತೆ ಕಾರ್ಯ ಮಾಡುವೆ
Team Udayavani, May 17, 2018, 5:09 PM IST
ಭಾಲ್ಕಿ: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕ ಈಶ್ವರ ಖಂಡ್ರೆ ಅವರನ್ನು ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿದ ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಹತ್ತು ವರ್ಷಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿಯನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕ್ಷೇತ್ರದಲ್ಲಿ ಕೈಗೊಂಡ ಜನಪರ, ಅಭಿವೃದ್ಧಿ ಕಾರ್ಯಗಳೇ ಹ್ಯಾಟ್ರಿಕ್ ಗೆಲುವಿಗೆ ಸಹಕಾರಿಯಾಗಿವೆ. ಮತ್ತೂಮ್ಮೆ ಕ್ಷೇತ್ರದ ಜನತೆ ನನ್ನನ್ನು ಆಶೀರ್ವದಿಸಿದ್ದು, ಅಪೂರ್ಣಗೊಂಡಿರುವ ಕಾರ್ಯಗಳಿಗೆ ವೇಗ ನೀಡಿ ಶೀಘ್ರ ಪೂರ್ಣಗೊಳಿಸಲಾಗುವುದು. ಸರಕಾರದಿಂದ ಮತ್ತಷ್ಟು ಅನುದಾನ ಬಿಡುಗಡೆಗೊಳಿಸಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಜತೆಗೆ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.
ಹಿರೇಮಠ ಸಂಸ್ಥಾನ ವಿದ್ಯಾಪೀಠದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಪುರಸಭೆ ಅಧ್ಯಕ್ಷ ವಿಶಾಲ ಪೂರಿ, ಸದಸ್ಯ ಮಹಾದೇವ ಸ್ವಾಮಿ, ಕೋನಮೇಳಕುಂದಾ ಗ್ರಾಪಂ ಅಧ್ಯಕ್ಷ ಶಶಿಧರ ಕೋಸಂಬೆ, ಪ್ರಮುಖರಾದ ಅನಿಲ ಲೋಖಂಡೆ, ಶರಣು ಪಾಟೀಲ, ಸಂಗಮೇಶ ವಾಲೆ, ಕಪಿಲ್ ಕಲ್ಯಾಣೆ, ಶಿವಪುತ್ರ ಧಾಬಶೆಟ್ಟೆ, ಸಾಗರ ಈಶ್ವರ ಖಂಡ್ರೆ ಇದ್ದರು.