ನೇತ್ರ ಆರೋಗ್ಯ ಜಾಗೃತಿ ಮೂಡಿಸಿದ ಜಾಥಾ


Team Udayavani, Oct 22, 2021, 2:56 PM IST

eye-17

ಬೀದರ: ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ವೆಲ್‌ಮೆಗ್ನಾ ನೇತ್ರ ಆಸ್ಪತ್ರೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಗುರುವಾರ ನಡೆದ ಕಾಲ್ನಡಿಗೆ ಜಾಥಾದ ಮೂಲಕ ಸಾರ್ವಜನಿಕರಲ್ಲಿ ನೇತ್ರ ಆರೋಗ್ಯ ಜಾಗೃತಿ ಮೂಡಿಸಲಾಯಿತು.

ಅಂಬೇಡ್ಕರ್‌ ವೃತ್ತದಿಂದ ಆರಂಭವಾದ ಜಾಥಾ ಜಿಲ್ಲಾಧಿಕಾರಿ ಕಚೇರಿ, ಹರಳಯ್ಯ ವೃತ್ತದ ಮಾರ್ಗವಾಗಿ ಸಾಗಿ ಜಿಲ್ಲಾ ಆಸ್ಪತ್ರೆಗೆ ತಲುಪಿ ಸಮಾರೋಪಗೊಂಡಿತು.

ಜಾಥಾದಲ್ಲಿ ಪಾಲ್ಗೊಂಡವರು ನೇತ್ರ ಆರೋಗ್ಯಕ್ಕೆ ಸಂಬಂಧಿಸಿದ ಬರಹಗಳನ್ನು ಹೊಂದಿದ್ದ ಫಲಕಗಳನ್ನು ಹಿಡಿದುಕೊಂಡಿದ್ದರು. ಜಾಥಾದ ಉದ್ದಕ್ಕೂ ಘೋಷಣೆಗಳನ್ನು ಕೂಗುತ್ತ ಸಾರ್ವಜನಿಕರ ಗಮನ ಸೆಳೆದರು. ಇದಕ್ಕೂ ಮುನ್ನ ಜಾಥಾಕ್ಕೆ ಚಾಲನೆ ನೀಡಿದ ವೆಲ್‌ಮೆಗ್ನಾ ಆಸ್ಪತ್ರೆಯ ನಿರ್ದೇಶಕಿ ಡಾ| ಸಿಬಿಲ್‌ ಸಾಲಿನ್ಸ್‌ ಮಾತನಾಡಿ, “ನಿಮ್ಮ ಕಣ್ಣುಗಳನ್ನು ಪ್ರೀತಿಸಿ’ ಎನ್ನುವುದು ಈ ಬಾರಿಯ ವಿಶ್ವ ದೃಷ್ಟಿ ದಿನಾಚರಣೆಯ ಘೋಷವಾಕ್ಯವಾಗಿದೆ. ಕಣ್ಣುಗಳು ಮಾನವನ ಅತ್ಯಂತ ಮಹತ್ವದ ಅಂಗವಾಗಿವೆ. ಹೀಗಾಗಿ ಪ್ರತಿಯೊಬ್ಬರೂ ಕಣ್ಣುಗಳನ್ನು ಪ್ರೀತಿಸಬೇಕು. ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಸಲಹೆ ಮಾಡಿದರು.

40 ವರ್ಷ ಮೇಲ್ಪಟ್ಟವರು ನೇತ್ರ ಸಮಸ್ಯೆ ಕಂಡು ಬಂದರೆ ಕೂಡಲೇ ನೇತ್ರ ವೈದ್ಯರನ್ನು ಕಾಣಬೇಕು. ಮಧುಮೇಹಿಗಳು ಪ್ರತಿ ಆರು ತಿಂಗಳಿಗೊಮ್ಮೆ ನೇತ್ರ ತಪಾಸಣೆ ಮಾಡಿಸಿಕೊಳ್ಳಬೇಕು. ಕಣ್ಣಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನೂ ಲಘುವಾಗಿ ಪರಿಗಣಿಸಬಾರದು ಎಂದು ಹೇಳಿದರು.

ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆಯ ಅಧಿಕಾರಿ ಡಾ| ಮಹೇಶ ಬಿರಾದಾರ ಮಾತನಾಡಿ, ಸಾರ್ವಜನಿಕರಲ್ಲಿ ಕಣ್ಣಿನ ಆರೋಗ್ಯದ ಅರಿವು ಮೂಡಿಸಲು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ನೇತ್ರ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಈ ದಿಸೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ವೆಲ್‌ಮೆಗ್ನಾ ಆಸ್ಪತ್ರೆಯ ಆಡಳಿತಾಧಿಕಾರಿ ಫಿಲೋಮನ್‌ರಾಜ್‌ ಪ್ರಸಾದ ಮಾತನಾಡಿ, ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆ ಸಹಯೋಗದಲ್ಲಿ ವೆಲ್‌ಮೆಗ್ನಾ ನೇತ್ರ ಆಸ್ಪತ್ರೆಯು ಜಿಲ್ಲೆಯಲ್ಲಿ ಅಂಧತ್ವ ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಮೂಲಕ ಬಡ ರೋಗಿಗಳಿಗೆ ನೆರವಾಗುತ್ತಿದೆ ಎಂದರು.

ಇಲಾಖೆಯ ಸಂಜು ಮಲಗಿಕರ್‌, ಅಶೋಕ, ರಾಜಶೇಖರ, ಡಾ| ವೀರೇಂದ್ರ ಪಾಟೀಲ, ಜಾಥಾ ಸಂಯೋಜಕ ಪುಟ್ಟರಾಜ ಬಲ್ಲೂರಕರ್‌, ಸುದೇಶ್‌, ಪ್ರಕಾಶ ಓ.ಟಿ, ವೆಲ್‌ಮೆಗ್ನಾ ಆಸ್ಪತ್ರೆಯ ವ್ಯವಸ್ಥಾಪಕ ಸತೀಶ್‌, ರಮೇಶ ಇದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.