ಐದಾರು ದಿನಕ್ಕೊಮ್ಮೆ ಜೇವರ್ಗಿಗೆ ನೀರು
Team Udayavani, May 8, 2020, 5:34 PM IST
ಸಾಂದರ್ಭಿಕ ಚಿತ್ರ
ಜೇವರ್ಗಿ: ಪುರಸಭೆ ಅಧಿಕಾರಿಗಳ ನಿರ್ಲಕ್ಷéದಿಂದ ಐದಾರು ದಿನಕ್ಕೊಮ್ಮೆ ಪಟ್ಟಣಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ತಾಲೂಕಿನ ಕಟ್ಟಿಸಂಗಾವಿ ಹತ್ತಿರದ ಭೀಮಾನದಿಯಿಂದ ಪಟ್ಟಣಕ್ಕೆ ಪೈಪ್ ಲೈನ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಪಟ್ಟಣದಲ್ಲಿ 35 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಪಟ್ಟಣದ ಲಕ್ಷ್ಮೀಚೌಕ್ ಬಡಾವಣೆ ಹೊರತುಪಡಿಸಿ ಬಹುತೇಕ ವಾರ್ಡ್ಗಳಿಗೆ ಭೀಮಾನದಿಯೇ ಆಸರೆಯಾಗಿದೆ.
ಬೆಳಗಾದರೆ ಸಾಕು ಕೊಡ ಹಿಡಿದುಕೊಂಡು ಮಹಿಳೆಯರು, ಮಕ್ಕಳು, ವೃದ್ಧರೆನ್ನದೇ ನೀರಿಗಾಗಿ ಅಲೆದಾಡಬೇಕಾಗಿದೆ. ಪಟ್ಟಣದ ವಿಜಯಪುರ ರಸ್ತೆಯ ತಾಂಡಾದಲ್ಲಿನ ಮೋಟರ್, ಜ್ಯೋತಿ ಹೋಟೆಲ್ ಹಿಂಬದಿಯಲ್ಲಿರುವ ತೆರೆದ ಬಾವಿಗೆ ಅಳವಡಿಸಿರುವ ಮೋಟರ್, ಷಣ್ಮುಖ ಶಿವಯೋಗಿ ಮಠದ ಬಳಿಯ ಕೊಳವೆ ಬಾವಿಯ ಮೋಟರ್ಗಳು ಕೆಟ್ಟು ಹೋದರೂ ಇಲ್ಲಿಯವರೆಗೂ ದುರಸ್ತಿ ಮಾಡಿಲ್ಲ. ಭೀಮಾನದಿ ಜಾಕ್ವೆಲ್ ಬಳಿ ನೀರಿನ ಪ್ರಮಾಣ ಕಡಿಮೆ ಆಗಿದೆ. ಆದರೆ ಅಧಿಕಾರಿಗಳು ನೀರು ಸಂಗ್ರಹಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಪಟ್ಟಣದ ಶಾಸ್ತ್ರೀ ಚೌಕ್, ಬಸವೇಶ್ವರ ನಗರ, ಶಾಂತನಗರ, ಖಾಜಾ ಕಾಲೋನಿ, ಜೋಪಡಪಟ್ಟಿ, ಜನತಾ ಕಾಲೋನಿ, ಮಡ್ಡಿ ಏರಿಯಾ, ದತ್ತನಗರ, ಓಂ ನಗರ, ಶಿಕ್ಷಕರ ಕಾಲೋನಿ, ವಿದ್ಯಾನಗರ ಬಡಾವಣೆಗಳಲ್ಲಿ ನಿತ್ಯ ಕುಡಿಯುವ ನೀರಿಗಾಗಿ ಜನ ಪರಿತಪಿಸುತ್ತಿದ್ದಾರೆ. ಇನ್ನೊಂದೆಡೆ ಭೀಮಾನದಿಯಿಂದ ಪಟ್ಟಣಕ್ಕೆ ಸರಬರಾಜು ಮಾಡುತ್ತಿರುವ ನೀರಿನ ಪೈಪ್ ಕೆಲವು ಕಡೆ ಒಡೆದು ನೀರು ಚರಂಡಿ ಪಾಲಾಗುತ್ತಿದೆ.
ಪುರಸಭೆ ಮುಖ್ಯಾಧಿಕಾರಿಗಳು ಪಟ್ಟಣದ ಜನತೆಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಬಡಾವಣೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಬೀದಿ ದೀಪ, ರಸ್ತೆ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು.
ದಾವೂದ್ ಬಡಾಘರ್,
ಪುರಸಭೆ ಮಾಜಿ ಸದಸ್ಯ
ಪುರಸಭೆ ಮುಖ್ಯಾ ಧಿಕಾರಿಗಳು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಜೇವರ್ಗಿಗೆ ವರ್ಗವಾಗಿ ಬಂದ ಮೇಲೆ ನಯಾ ಪೈಸೆ ಅಭಿವೃದ್ಧಿ ಕೆಲಸ ಮಾಡಿಲ್ಲ. ಬೇಸಿಗೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇದ್ದ ಪರಿಣಾಮ ನೀರಿನ ಅಭಾವ ಸೃಷ್ಟಿಯಾಗಿದೆ.
ಕಾವ್ಯ ಹಣಮಂತ,
ಪುರಸಭೆ ಸದಸ್ಯೆ
ವಿಜಯಕುಮಾರ ಕಲ್ಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ