ಕೊರೊನಾ ತಡೆಗೆ ಜೋಗುಂಡಭಾವಿ ಗ್ರಾಪಂ ಪಣ


Team Udayavani, Jun 6, 2021, 7:23 PM IST

xcvbvcdsasc

ನಾರಾಯಣಪುರ: ಕೊರೊನಾ ಎರಡನೇ ಅಲೆ ತೀವ್ರ ವೇಗವಾಗಿ ಹರಡುತಿದ್ದು ಹಳ್ಳಿಗಳೂ ಇದರಿಂದ ಹೊರತಾಗಿಲ್ಲ. ಸೋಂಕಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಹುಣಸಗಿ ತಾಲೂಕಿನ ಜೋಗುಂಡಭಾವಿ ಗ್ರಾಮ ಪಂಚಾಯಿತಿ ಇದನ್ನು ತಡೆಗಟ್ಟಲು ಪಣತೊಟ್ಟು ಪ್ರಯತ್ನಿಸುತ್ತಿದೆ.

ಗ್ರಾ.ಪಂ. ಕಾರ್ಯ (ಟಾಸ್ಕ್ ಫೋರ್ಸ್‌) ಪಡೆಯು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಿಗೆ ತೆರಳಿ, ಆರೋಗ್ಯ ಇಲಾಖೆ ಸೂಚಿಸಿರುವ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಸೋಂಕು ಹರಡದಂತೆ ವಿಶೇಷ ಕಾಳಜಿ ವಹಿಸಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೋಗುಂಡಭಾವಿ, ಕೋಟೆಗುಡ್ಡ, ಅಮ್ಮಾಪುರ, ಹುಲ್ಲಿಕೇರಿ, ರಾಯನಗೊಳ, ತಂಗಡಬಯಲು, ಬಸಿರಿಗಿಡ ತಾಂಡಾ, ಗಡ್ಡದ ತಾಂಡಾ, ಬೆಳ್ಳಿಗುಂಡ ತಾಂಡಾ, ಸಣ್ಣ ಚಾಪಿ ತಾಂಡಾ, ದೊಡ್ಡ ಚಾಪಿ ತಾಂಡಾ ಗ್ರಾಮಗಳಿವೆ.

ಪಂಚಾಯತ್‌ ಒಟ್ಟು 21 ಸದಸ್ಯರನ್ನೊಳಗೊಂಡಿದೆ. ಪಂಚಾಯತ್‌ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಗ್ರಾ.ಪಂ. ವಾಹನದ ಮೂಲಕ ತೆರಳಿ ಕಡ್ಡಾಯ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಪಾಲಿಸುವಂತೆ, ಸ್ವತ್ಛತೆಗೆ ಮಹತ್ವ ನೀಡುವಂತೆ, ಸ್ಯಾನಿಟೈಸರ್‌ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಸ್ಯಾನಿಟೈಸರ್‌ ಸಿಂಪಡಣೆ ಮಾಡಿಸಲಾಗಿದೆ.

ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ವಿಧಿಸಿದ ನಂತರ ಗ್ರಾಮಗಳಲ್ಲೂ ಇದನ್ನು ಜಾರಿಗೆ ತರುವಲ್ಲಿ ಗ್ರಾ.ಪಂ. ಮುತುವರ್ಜಿ ವಹಿಸಿದೆ. ಗ್ರಾ.ಪಂ.ನ ಎಲ್ಲ ಸದಸ್ಯರು, ಸಿಬ್ಬಂದಿ ಕಂದಾಯ, ಆರೋಗ್ಯ, ಪೊಲೀಸ್‌, ಆಶಾ, ಅಂಗನವಾಡಿ ಕಾರ್ಯಕರ್ತ ರೊಟ್ಟಿಗೆ ಗ್ರಾಮಸ್ಥರು ಅನಾವಶ್ಯಕ ಮನೆಯಿಂದ ಹೊರ ಬಾರದಂತೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತ ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತಿದ್ದಾರೆ. ಅಲ್ಲದೆ ಮಾರ್ಗಸೂಚಿಯಂತೆ ಅರ್ಹರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಿ ಕೊರೊನಾ ಮುಕ್ತ ಗ್ರಾಮ ಪಂಚಾಯತಿಯಾಗಿಸುವತ್ತ ಮಹತ್ವದ ಹೆಜ್ಜೆ ಇಡಲಾಗಿದೆ.

ಗ್ರಾಮ ಪಂಚಾಯತ ಮಟ್ಟದಿಂದಲೇ ಸೋಂಕು ನಿಯಂತ್ರಿಸಲು ಶಾಸಕ ನರಸಿಂಹನಾಯಕ (ರಾಜುಗೌಡ) ಅವರು ಗ್ರಾ.ಪಂ.ಸಭಾ ಭವನದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ತಾಲೂಕು ಆಡಳಿತದ ಅಧಿಕಾರಿಗಳ, ಕಂದಾಯ, ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್‌ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದ್ದಾರೆ. ಗ್ರಾಮ ಪಂಚಾಯತ್‌ ಮಟ್ಟದಿಂದಲೇ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಪಾಲನೆಗೆ ಹೆಚ್ಚು ಒತ್ತು ನೀಡುವಂತೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗ್ರಾಮೀಣ ಮಟ್ಟದ ಕಾರ್ಯ ಪಡೆಯು ಅತ್ಯಂತ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೊರೊನಾ ಸರಪಳಿ ತುಂಡರಿಸಿ ಕೊರೊನಾ ಮುಕ್ತ ಗ್ರಾಮವಾಗಿಸುವತ್ತ ದಿಟ್ಟ ಹೆಜ್ಜೆ ಇಡಲಾಗಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ನರೆಗಾ ಅಡಿಯಲ್ಲಿ ನೋಂದಾಯಿತ ಕೂಲಿ ಕಾರ್ಮಿಕರಿಗೆ ತಮ್ಮ ಜಮೀನುಗಳಲ್ಲಿ ಬದು, ರಸ್ತೆ ನಿರ್ಮಾಣ ಸೇರಿದಂತೆ ಇತರೆ ಕೃಷಿಗೆ ಪೂರಕವಾಗುವ ಕಾಮಗಾರಿಗಳನ್ನು ಕೈಗೊಂಡು ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದೆ.

ಕೋವಿಡ್‌ ಮಾರ್ಗಸೂಚಿಯಂತೆ ಕೂಲಿ ಕಾರ್ಮಿಕರು ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವದು ಮತ್ತು ಸ್ಯಾನಿಟೈಸರ್‌ ಬಳಸಿ ಕೆಲಸ ನಿರ್ವಹಿಸುವಂತೆ ನೋಡಿಕೊಂಡು ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ವಾರ್ಡ್‌ ವ್ಯಾಪ್ತಿಯ ಮನೆಗಳಿಂದ ಸಂಗ್ರಹವಾಗುವ ಕಸವನ್ನು ವಿಲೇವಾರಿ ಮಾಡಿ ಗ್ರಾಮವನ್ನು ಕಸ ಮುಕ್ತ, ಸ್ವತ್ಛ ಗ್ರಾಮವಾಗಿಸಲು ಶ್ರಮಿಸಲಾಗುತ್ತಿದೆ.

ಕೊರೊನಾ ಸಂಕಷ್ಟದ ಮಧ್ಯೆಯೂ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಾದ ಗುರುರಾಜ ಜೋಶಿ, ಲೆಕ್ಕಿಗ ಲಕ್ಷ್ಮಣ ನಾಯಕ, ಬಿಲ್‌ ಕಲೆಕ್ಟರ್‌, ಕಂಪ್ಯೂಟರ್‌ ಆಪ್‌ರೇಟರ್‌, ವಾಟರ್‌ವೆುನ್‌, ಸ್ವತ್ಛತಾ ಕರ್ಮಿಗಳು ಇತರೆ ಎಲ್ಲ ಸಿಬ್ಬಂದಿ ಸೋಂಕು ನಿಯಂತ್ರಣಕ್ಕೆ ವಿಶೇಷ ಕಾಳಜಿ ವಹಿಸಿ ಕರ್ತವ್ಯ ನಿರ್ವಹಿಸುತ್ತ ಕೊರೊನಾ ಯೋಧರಾಗಿದ್ದಾರೆ.

 

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.