ಪ್ಲಾಸ್ಟಿಕ್ ಮುಕ್ತ ಗ್ರಾಮಕ್ಕೆ ಕೈಜೋಡಿಸಿ
Team Udayavani, Apr 1, 2022, 2:52 PM IST
ಬೀದರ: ಕಸದ ಸಮರ್ಪಕ ವಿಲೇವಾರಿ, ದ್ರವ ತ್ಯಾಜ್ಯ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡುವಲ್ಲಿ ಗ್ರಾಮದ ಜನರು ಕೈ ಜೋಡಿಸಬೇಕು ಎಂದು ತಾಪಂ ಪ್ರಭಾರಿ ಇಒ ಕೀರ್ತನಾ ಶ್ರೀನಿವಾಸ ಹೇಳಿದರು.
ಇಲ್ಲಿನ ಚಿಟ್ಟಾ ಗ್ರಾಪಂಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆಯಿಂದ ಮಾರಕ ಕಾಯಿಲೆಗಳು ಬರುತ್ತವೆ. ಪ್ಲಾಸ್ಟಿಕ್ ಬಳಸದೇ ಪರ್ಯಾಯ ದಾರಿ ಕಂಡುಕೊಳ್ಳಬೇಕು. ಇದರ ಬದಲಾಗಿ ಪೇಪರ್ ಹಾಗೂ ಕಾಟನ್ ಬಟ್ಟೆಗಳ ಕೈ ಚೀಲಗಳನ್ನು ಬಳಸಬೇಕು. ಘನ ಮತ್ತು ದ್ರವ ತ್ಯಾಜ್ಯ ಹಾಗೂ ಮುಖ್ಯವಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಪಂ ಮಾಡುವಲ್ಲಿ ತೆಗೆದುಕೊಳ್ಳುವ ಕ್ರಮಗಳು ಬಹುಮುಖ್ಯವಾಗಿದ್ದು, ಎಲ್ಲರೂ ಜೊತೆಗೂಡಿ ಮಾಡಿದರೆ ಈ ಕಾರ್ಯ ಯಶಸ್ವಿಗೊಳ್ಳಲು ಸಾಧ್ಯ ಎಂದರು.
ಸರ್ಕಾರಿ ಜಾಗದಲ್ಲಿ ಎಸ್ಡಬ್ಲ್ಯೂಎಂ ನಿರ್ವಾಹಣಾ (ಘನ, ದ್ರವ, ತ್ಯಾಜ್ಯ) ಘಟಕವು ನಿರ್ಮಾಣ ಮಾಡುವ ಮೂಲಕ ಕೆಲಸದ ಕಾರ್ಯ ಪ್ರಗತಿಯು ಯಶಸ್ವಿಯಾಗಿ ಮಾಡಬೇಕು. ಪ್ಲಾಸ್ಟಿಕ್ ಮುಕ್ತ ಗೊಳಿಸಲು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಹಳ್ಳಿಯ ಜನರಿಗೆ ಪ್ಲಾಸ್ಟಿಕ್ ಬಳಸದಂತೆ ಮನವೊಲಿಸಬೇಕು ಎಂದು ಹೇಳಿದರು.
ಜಿಪಂ (ನರೇಗಾ) ಜಿಲ್ಲಾ ಐಇಸಿ ಸಂಯೋಜಕ ಮರೆಪ್ಪ ಸಿ. ಹರವಾಳ್ಕರ್, ತಾಲೂಕು ಐಇಸಿ ಸಂಯೋಜಕ ಸತ್ಯಜೀತ್ ವೈಜನಾಥ, ಪಿಡಿಒ ಪೂಜಾ ನೀಲಾ, ಅಧ್ಯಕ್ಷ ರಮೇಶ ಬಿರಾದಾರ, ಸದಸ್ಯರಾದ ಸತೀಶ, ಅಕºರ್, ದೀಪಿಕಾ ಮಚ್ಛೇಂದ್ರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ