ರೈತರ ಹಿತಕ್ಕಾಗಿ ಜೆಡಿಎಸ್‌ ಸೇರ್ಪಡೆ: ಸಂಜಯ ಖೇಣಿ


Team Udayavani, Apr 30, 2018, 3:45 PM IST

gul-5.jpg

ಹುಮನಾಬಾದ: ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಮರುಆರಂಭಕ್ಕಾಗಿ ಹಾಗೂ ರೈತರ ಹಿತ ಕಾಪಾಡುವ ಉದ್ದೇಶದಿಂದ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದೇನೆ ಎಂದು ಸಂಜಯ ಖೇಣಿ ಹೇಳಿದರು.

ಮನ್ನಾಎಖೇಳ್ಳಿ ಗ್ರಾಮದ ಜರಿನ್‌ ಹಾಲ್‌ನಲ್ಲಿ ಅನ್ಯ ಪಕ್ಷದವರ ಜೆಡಿಎಸ್‌ಗೆ ಸೇರ್ಪಡೆ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜೆಡಿಎಸ್‌ ರೈತರ ಏಳ್ಗೆಗಾಗಿ ಶ್ರಮಿಸುತ್ತಿದೆ. ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಪ್ರಣಾಳಿಕೆ ತಯಾರಿಸಲಾಗಿದೆ. ಈ ನಿಟ್ಟಿನಲ್ಲಿ ನಾನು ಜೆಡಿಎಸ್‌ಗೆ ಸೆರ್ಪಡೆಗೊಂಡಿದ್ದು, ನನ್ನ ಅನೇಕ ಬೆಂಬಲಿಗರು ಕೂಡ ನನ್ನೊಂದಿಗೆ ಬಂದಿದ್ದಾರೆ.

ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತ ಬೀದರ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು. ಬೀದರ ಸಹಕಾರ ಸಕ್ಕರೆ ಕಾರ್ಖಾನೆಗೆ ಸರ್ಕಾರ ಸೂಕ್ತ ಸಮಯಕ್ಕೆ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಕಾರ್ಖಾನೆ ಬಂದ್‌ ಆಗಿದೆ. ಇದಕ್ಕೆ ಆಡಳಿತ, ಸರ್ಕಾರ ಹಾಗೂ ಸ್ಥಳೀಯ ಶಾಸಕರು ಕೂಡ ಕಾರಣ ಎಂದು ಆರೋಪಿಸಿದರು.

ಕೊನೆಯ ಹಂತದಲ್ಲಿ ಕಾರ್ಖಾನೆಗೆ ಬಿಡುಗಡೆಯಾದ 10 ಕೋಟಿ ರೂ. ಹಣದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಗಳು ಕೇಳಿಬರುತ್ತಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಆ ಹಣದಲ್ಲಿ ಅಕ್ರಮ ಮಾಡಿದರೆ ಈವರೆಗೆ ನಾನು ಜೈಲಿನಲ್ಲಿ ಇರುತ್ತಿದ್ದೆ. ಕಾರ್ಖಾನೆ ಪ್ರಾರಂಭಕ್ಕೂ ಮುನ್ನ ಸಭೆ ನಡೆಸಿ, ಕಾರ್ಖಾನೆಗೆ ಬೇಕಾದ ಎರಡು ಕೋಟಿ ರೂ. ಅನುದಾನ ತಂದು ಪ್ರಾರಂಭಿಸಿದ್ದು, ಹಣ ಬಿಡುಗಡೆಗೊಂಡ ನಂತರ ಆ ಹಣ ಮರು ಪಾವತಿಸಬೇಕು ಎಂಬ ಷರತ್ತಿಗೆ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಸಹಿ ಹಾಕಿದ್ದಾರೆ. ಸಭೆಯ ನಡುವಳಿಕೆ ಅನುಸಾರ ಎರಡು ಕೋಟಿ ಹಣ ಪಾವತಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಜೆಡಿಎಸ್‌ಗೆ ಎಲ್ಲಾ ರೈತ ವರ್ಗದವರು ಕೂಡ ಸಹಕಾರ ನೀಡುತ್ತಿದ್ದು, ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಕಾರ್ಖಾನೆ ಮರು ಆರಂಭಗೊಂಡು ಈ ಭಾಗದ ರೈತರಿಗೆ ನೆರವಾಗಲಿದೆ ಎಂದರು.

2008ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎದುರು ಚುನಾವಣೆಗೆ ಧುಮಿಕ್ಕಿದ್ದು, 2013ರ ಚುನಾವಣೆಯಲ್ಲಿ ಅಶೋಕ ಖೇಣಿ ಗೆಲುವಿಗೆ ಮುಂದಾದ ನೀವು ಇದೀಗ ಬಂಡೆಪ್ಪ ಖಾಶೆಂಪುರ ಪರ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಶೋಕ ಖೇಣಿ ಅವರು ಹೇಳಿದಂತೆ ನಡೆದಿಲ್ಲ. ಅಭಿವೃದ್ಧಿ ಕಾರ್ಯ ಕೂಡ ನಡೆದಿಲ್ಲ. ಕಾರಣ ಬಂಡೆಪ್ಪ ಪರ ಕೆಲಸ ಮಾಡುತ್ತಿದ್ದೇನೆ ಎಂದರು.

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಮಾತನಾಡಿ, ಬೀದರ ಸಹಕಾರ ಸಕ್ಕರೆ ಕಾರ್ಖಾನೆಯ ಸ್ಥಿತಿಗತಿಗೆ ರಾಜ್ಯ ಸರ್ಕಾರ ನೇರ ಕಾರಣ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಕ್ಷೇತ್ರದ ಸಚಿವರು ಕೂಡ ಕಾರಣ. ರೈತರ ಹಿತಕಾಪಾಡುವ ನಿಟ್ಟಿನಲ್ಲಿ ಕಾರ್ಖಾನೆಗೆ ಆರ್ಥಿಕ ನೇರವು ನೀಡಬೇಕಿತ್ತು. ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರ ವಿಶೇಷ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ನಮ್ಮ ಜಿಲ್ಲೆಯ ಕಾರ್ಖಾನೆ ಬಗ್ಗೆ ಯಾಕೆ ಕಾಳಜಿ ವಹಿಸಿಲ್ಲ ಎಂದು ಪ್ರಶ್ನಿಸಿದರು. 

ಸಂಜಯ ಖೇಣಿ ತನ್ನದೆ ಆದ ಘನತೆ ಹೊಂದಿದ್ದಾರೆ. ಅವರ ಜೊತೆಗೆ ಅವರ ಬೆಂಬಲಿಗರೂ ಕೂಡ ನಮ್ಮ ಪಕ್ಷಕ್ಕೆ ಬಂದಿದ್ದು, ಪಕ್ಷಕ್ಕೆ ಹೆಚ್ಚು ಶಕ್ತಿ ಬಂದಿದೆ ಎಂದರು. ನಸಿಮೊದ್ದೀನ್‌ ಪಟೇಲ್‌, ರಮೇಶ ಪಾಟೀಲ, ಸಂತೋಷ ರಾಸೂರ್‌, ಸಂಜುರೆಡ್ಡಿ ನಿರ್ಣಾ, ದತ್ತಾತ್ರೇಯ, ಶಿವರಾಜ ಹುಲಿ, ರಾಜು ಚಿಂತಾಮಣಿ ಇದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.