ಅಂತರಂಗದ ಸೌಂದರ್ಯಕ್ಕೆ ಪುರಾಣ ಆಲಿಸಿ


Team Udayavani, Jan 24, 2020, 4:59 PM IST

24-Jnauary-22

ಕಲಬುರಗಿ: ದೇಹ, ತಲೆ ಮಾಸಿದರೆ ಸೋಪು, ಶ್ಯಾಂಪೋ ಹಚ್ಚಿ ಬಾಹ್ಯ ಸೌಂದರ್ಯ ಹೆಚ್ಚಿಸಲು ಹೇಗೆ ಯತ್ನಿಸುತ್ತೇವೆಯೋ ಅಂತರಂಗದ ಶುದ್ಧಿಗಾಗಿ ಪುರಾಣ-ಪ್ರವಚನ ಆಲಿಸಬೇಕೆಂದು ಚಿನ್ಮಯಗಿರಿಯ ವೀರ ಮಹಾಂತ ಶಿವಾಚಾರ್ಯರು ಹೇಳಿದರು.

ತಾಲೂಕಿನ ಕಡಣಿಯಲ್ಲಿ ಗದಿಗೇಶ್ವರ ಹಿರೇಮಠದ ನೂತನ ಕಟ್ಟಡ ಲೋಕಾರ್ಪಣೆ,
ಶ್ರೀ ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಂಡ 11ದಿನಗಳ ಶ್ರೀ ರೇಣುಕಾಚಾರ್ಯರ ಪುರಾಣಕ್ಕೆ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಜೀವನ ಎನ್ನುವುದು ಸದಾ ಜಂಜಾಟದಿಂದಲೇ ಕೂಡಿದೆ. ಜೀವನ ಪಾವನಗೊಳ್ಳಬೇಕಾದರೆ,
ಪವಿತ್ರವಾದ ಜಾಗಗಳಲ್ಲಿ ಸತ್ಸಂಗ ಮಾಡಬೇಕು. ಟಿವಿ ಎದುರು ಕೂತರೆ ಬದುಕು ಪಾವನವಾಗಲಾರದು. ಟಿವಿಯಿಂದ ಮನಸ್ಸಿನ ನೆಮ್ಮದಿ ಕದಡುತ್ತದೆ. ಆದ್ದರಿಂದ ಮಠ, ಮಂದಿರಗಳಿಗೆ ಹೋಗಿ ಸಂತರ ಹಿತನುಡಿ ಆಲಿಸುವುದರಿಂದ ಬದುಕು ಪಾವನಗೊಳಿಸಿಕೊಳ್ಳುತ್ತದೆ ಎಂದರು.

ಸಾನ್ನಿಧ್ಯ ವಹಿಸಿದ್ದ ರಟಕಲ್‌ ಹಿರೇಮಠದ ರೇವಣಸಿದ್ಧ ಶಿವಾಚಾರ್ಯರು ಆಶೀರ್ವಚನ
ನೀಡಿ, ಮನಸ್ಸಿನ ನೆಮ್ಮದಿಗಾಗಿ ಮಠ-ಮಂದಿರಗಳತ್ತ ಜನ ಬರಬೇಕು ಎಂದು ಕರೆ ಕೊಟ್ಟರು.
ಬಿಜೆಪಿ ಮುಖಂಡ ಭೀಮಾಶಂಕರ ಪೊಲೀಸ್‌ ಪಾಟೀಲ ಬಿದನೂರ ಅಧ್ಯಕ್ಷತೆ ವಹಿಸಿದ್ದರು. ಹಣಮಂತರಾಯ ಎ. ಶಿವರಾಯಗೋಳ, ಗಣ್ಯರಾದ ಸಿದ್ಧಣಗೌಡ ಪಾಟೀಲ, ನಸರಣಗೌಡ
ಪಾಟೀಲ, ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಮಡಿವಾಳ, ಮಿಣಜಗಿಯ ಗಣ್ಯರಾದ ಲಿಂಗಣಗೌಡ ಎ.
ಪಾಟೀಲ, ದೊಡ್ಡಪ್ಪಗೌಡ ಎಸ್‌. ಪೊಲೀಸ್‌ ಪಾಟೀಲ, ಈರಣ್ಣಗೌಡ ದಳಪತಿ, ವಿಜಯಕುಮಾರ ಬಿ. ಬಸವಪಟ್ಟಣ, ಬಸವರಾಜ ಸಾಲುಕ್ಯ, ಭೈಲಪ್ಪ ಪೂಜಾರಿ ಮುಂತಾದವರಿದ್ದರು.

ಮಹಾಂತೇಶ ಚೇಂಗಟಿ, ಮಲ್ಲಿಕಾರ್ಜುನ ಗಿರೆಪ್ಪಗೋಳ ನಿರೂಪಿಸಿದರು. ವಡಗೇರಾದ
ಪಂ ನಾಗಯ್ಯ ಶಾಸ್ತ್ರೀಗಳ ಸಿರಿಕಂಠದಲ್ಲಿ ಪುರಾಣ ಪ್ರಾರಂಭಿಸಲಾಯಿತು. ಗವಾಯಿಗಳಾದ
ರಾಮಲಿಂಗಯ್ಯ ಗೌಡಗಾಂವ ಸಂಗೀತಕ್ಕೆ ಸಿದ್ಧಣ್ಣ ದೇಸಾಯಿ ಕಲ್ಲೂರ ತಬಲಾ ಸಾಥ್‌ ನೀಡಿದರು.

ನಂದಿಯಾಗಿ ಶಂಕಣ್ಣ ಗಿರೆಪ್ಪಗೋಳ ಪುರಾಣಕ್ಕೆ ಸಾಕ್ಷಿಯಾದರು. ಚಿನ್ಮಯಗಿರಿಯ ಹಿರಿಯ
ಪೂಜ್ಯರಾದ ಸಿದ್ಧರಾಮ ಶಿವಾಚಾರ್ಯರು ಶ್ರೀ ಪಂಚಾಚಾರ್ಯರ ಬಾವುಟ ಆರೋಹಣ ಮಾಡುವ ಮೂಲಕ ಧರ್ಮ ಸಮಾರಂಭಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು ಎಂದು ಸ್ವಾಗತ ಸಮಿತಿ ಸದಸ್ಯ ಶರಣಗೌಡ ಕೆ. ಮಾಲಿ ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.