ಶಿಕ್ಷಕ್ಷರು-ಸ್ವಯಂ ಸೇವಕರಿಗೆ ನಾಡಿದ್ದು ತರಬೇತಿ: ತಿಣ್ಣಪ್ಪ
Team Udayavani, Jan 31, 2020, 3:20 PM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ.5ರಿಂದ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನೋಂದಣಿ ಪ್ರತಿನಿಧಿಗಳಿಗೆ ವ್ಯವಸ್ಥಿತ ಸೌಲಭ್ಯ ವಿತರಣೆಗಾಗಿ ಫೆ.2ರಂದು 250 ಎನ್ಎಸ್ಎಸ್ ಸ್ವಯಂ ಸೇವಕರು ಮತ್ತು ಶಿಕ್ಷಕರಿಗೆ ನೋಂದಣಿ ಕುರಿತು ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ನೋಂದಣಿ ಸಮಿತಿ ಅಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ನೋಂದಣಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಫೆ.5ರಂದು ಬೆಳಗ್ಗೆ 6 ಗಂಟೆಗೆ 25 ನೋಂದಣಿ ಕೌಂಟರ್ ಗಳನ್ನು ತೆರೆಯಲಾಗುವುದು. ಸಾಹಿತ್ಯ ಸಮ್ಮೇಳನಕ್ಕೆ ನೋಂದಣಿಯಾದ 22252 ಮಂದಿಗೆ ಗುಣಮಟ್ಟದ ಕಿಟ್ಗಳನ್ನು ವಿತರಿಸಲಾಗುವುದು, ವಿಶೇಷ ಪ್ರತಿನಿಧಿ ಗಳಿಗೆ 72 ಬ್ರಿಫ್ಕೇಸ್ ನೀಡಲಾಗುವುದು. ಕಿಟ್ ವಿತರಿಸಲು ಮುಂಚಿತವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಫೆ.4ರೊಳಗಾಗಿ ಕಿಟ್ ನೀಡಲಾಗುವುದು ಎಂದರು.
ಕೌಂಟರ್ಗಳ ಸ್ಥಳ ಪರಿಶೀಲಿಸಿ ನಂತರ ಪ್ರತಿಯೊಂದು ಜಿಲ್ಲೆಯ ಪ್ರತಿನಿಧಿಗಳಿಗೆ ಕಿಟ್ ವಿತರಿಸಲು ಕಾರ್ಯದರ್ಶಿ ಮತ್ತು ಸದಸ್ಯರನ್ನು ನೇಮಿಸಲಾಗುತ್ತದೆ. ಪ್ರತಿ ನೋಂದಣಿ ಕೌಂಟರ್ಗೆ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. ಕಿಟ್ ವಿತರಿಸುವ ಸಂದರ್ಭದಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡಬಾರದು. ವ್ಯವಸ್ಥಿತವಾಗಿ ವಿತರಣೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ, ನೋಂದಣಿ ಸಮಿತಿ ಕಾರ್ಯಾಧ್ಯಕ್ಷರಾದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ್ ಸಂಗಾ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಯುಸೂಫ್ ಅಲಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಬನ್ಸಿ ಪವಾರ್, ಸರ್ವ ಶಿಕ್ಷಣ ಅಭಿಯಾನ ಇಲಾಖೆ ಯೋಜನಾ ಸಮನ್ವಯಾಧಿಕಾರಿ ವೆಂಕಯ್ಯ ಇನಾಂದಾರ್, ಜಿಪಂ ಸದಸ್ಯರಾದ , ಶಿವರಾಜ ಪಾಟೀಲ ರದ್ದೇವಾಡಗಿ, ಶಿವರಾಜ ಅಪ್ಪಾ ಸಾಹೇಬ ಪಾಟೀಲ, ಶಿವರುದ್ರ, ಕಸಾಪ ಪದಾಧಿಕಾರಿಗಳಾದ ದೌಲತರಾಯ ಮಾಲಿಪಾಟೀಲ, ಅಂಬಾಜಿ ಕೌವಲಗಾ, ಡಿ.ಎಂ.ನದಾಫ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ