ತಿರಂಗ ಧ್ವಜ ಹಿಡಿದು ಬೈಕ್ ಮೆರವಣಿಗೆ
ಗಣರಾಜ್ಯೋತ್ಸವ ಸಂಭ್ರಮ50 ಕ್ಕೂ ಹೆಚ್ಚು ಆಟೋ ಚಾಲಕರಿಂದ ರ್ಯಾಲಿ
Team Udayavani, Jan 27, 2020, 2:30 PM IST
ಕಲಬುರಗಿ: ಜಿಲ್ಲಾದ್ಯಂತ ಶನಿವಾರ 71ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ತ್ರಿವರ್ಣ ಧ್ವಜಾರೋಹಣ, ಭಕ್ತಿ ಗೀತೆಗಳ ಗಾಯನ ನಡೆಯಿತು.
ಗಣರಾಜ್ಯೋತ್ಸವ ಅಂಗವಾಗಿ ಹಲವೆಡೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಶೇಷವೆಂಬಂತೆ ಯುವಕರು ತಿರಂಗ ಧ್ವಜ ಹಿಡಿದು ನಗರದಾದ್ಯಂತ ಬೈಕ್ ರ್ಯಾಲಿ ನಡೆಸಿ ಗಮನ ಸೆಳೆದರು. 50ಕ್ಕೂ ಅಧಿಕ ಆಟೋ ಚಾಲಕರು ರ್ಯಾಲಿ ನಡೆಸಿ ಗಣರಾಜ್ಯೋತ್ಸವವನ್ನು ಸಂಭ್ರಮಿಸಿದರು.
ಪಿಡಿಎ ಕಾಲೇಜು ವಿದ್ಯಾರ್ಥಿಗಳು ಬೃಹತ್ ಧ್ವಜದ ಮೆರವಣಿಗೆ ನಡೆಸಿದರು. ಕಾಲೇಜಿನಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ವರೆಗೆ ನಡೆದ ತಿರಂಗ ಜಾಥಾ ಆಕರ್ಷಕವಾಗಿತ್ತು.
ಡಿಎಚ್ಒ ಕಚೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಡಾ| ವಿವೇಕಾನಂದ ರೆಡ್ಡಿ ನೆರವೇರಿಸಿದರು. ಡಾ| ಅವಿನಾಶ ಕಸ್ಕೆ, ಡಾ| ರತ್ನವೀರ, ಸಂತೋಷ ಕುಡಳ್ಳಿ, ಗುಂಡಪ್ಪ ದೊಡ್ಡಮನಿ, ಶೌಖತ್ ಅಲಿ, ಮಂಜುನಾಥ ಕಂಬಾಳಿಮಠ, ಸುರೇಖಾ ಹೇರಲಗಿ, ಅಬ್ದುಲ್ ಜಬ್ಬರ್, ಸುರೇಶ ದೊಡ್ಡಮನಿ, ವಿಶಾಲ ಸಜ್ಜನ್, ಅರ್ಚನಾ ಇದ್ದರು.
ಬಿಜೆಪಿ ಕಚೇರಿ: ನಗರದ ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಧ್ವಜಾರೋಹಣ ಮಾಡಿದರು. ಜಿ.ಪಂ ಅಧ್ಯಕ್ಷೆ ಸುವರ್ಣಾ ಎಚ್. ಮಲಾಜಿ, ಮಾಜಿ ಎಂಎಲ್ಸಿ ಶಶೀಲ ನಮೋಶಿ, ವಿಠ್ಠಲ ಜಾಧವ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಕಾಂಗ್ರೆಸ್ ಕಚೇರಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೆರವೇರಿಸಿದರು. ಶಾಸಕಿ ಖನೀಜ್ ಫಾತೀಮಾ, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ, ಮಹಿಳಾ ಘಟಕದ ಅಧ್ಯಕ್ಷೆ ಲತಾ ರವಿ ರಾಠೊಡ ಪಾಲ್ಗೊಂಡಿದ್ದರು.
ಜೆಡಿಎಸ್ ಕಚೇರಿ: ನಗರದ ಜಾತ್ಯತೀತ ಜನತಾ ದಳ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಧ್ವಜಾರೋಹಣ ಮಾಡಿದರು. ಮುಖಂಡರಾದ ಶಾಮರಾವ್ ಸೂರನ್, ನಾಸೀರ್ ಹುಸೇನ್ ಉಸ್ತಾದ್ ಹಾಗೂ ಪಕ್ಷದ ನಾಯಕರು ಇದ್ದರು.
ಜಿ.ಪಂ ಕಚೇರಿ: ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜಿ.ಪಂ ಅಧ್ಯಕ್ಷೆ ಸುವರ್ಣಾ ಎಚ್. ಮಲಾಜಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸಿಇಒ ರಾಜಾ ಪಿ. ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.
ಕೆಬಿಎನ್ ವಿಶ್ವವಿದ್ಯಾಲಯ: ನಗರದ ಖಾಜಾ ಬಂದಾ ನವಾಜ್ ವಿಶ್ವವಿದ್ಯಾಲಯದಲ್ಲಿ ಸಮ ಕುಲಪತಿ ಎಫ್.ಯು. ಅಹ್ಮದ್ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿದರು. ಪ್ರೊ| ಎ.ಎಚ್. ರಾಜಾಸಾಬ, ಕೆಬಿಎನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಎ. ಲತೀಫ್ ಶರೀಫ್, ಡಾ| ರುಕ್ಷರ್ ಫಾತೀಮಾ, ಮೊಹಮ್ಮದ್ ಅಜಂ ಕಮಲ್, ಶೇಖ್ ಜುನೈದ್ ಸೌದ್ ಹಾಗೂ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಾರ್ಗದರ್ಶಿ ಸೊಸೈಟಿ: ನಗರದ ಮಾರ್ಗದರ್ಶಿ ಸಂಸ್ಥೆ ವತಿಯಿಂದ ನಗರ ರಾತ್ರಿ, ಹಗಲು
ವಸತಿ ರಹಿತ ನಿರ್ಗತಿಕರ ತಂಗುದಾನದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕ ಆನಂದರಾಜ, ಶಿವಕುಮಾರ ಹೊಳಕರ್, ರಾಹುಲ್ ಮಾಳಗೆ, ಶ್ರೀನಿವಾಸ ಕುಲಕರ್ಣಿ, ಭೀಮರಾಯ, ಬಸವರಾಜ ಬಿರಾದಾರ, ನಾಗರಾಜ ಇದ್ದರು.
ಮಾರ್ಗದರ್ಶಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೆಮ್ಮದಿ ಹಿರಿಯರ ಮನೆ ವೃದ್ಧಾಶ್ರಮದಲ್ಲಿ ಹಿರಿಯ ಜೀವಿಗಳೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಸಂಧ್ಯಾರಾಜ್ ಸಾಮ್ಯುವೆಲ್ ಧ್ವಜಾರೋಹಣ ಮಾಡಿದರು. ಯೋಜನಾ ನಿರ್ದೇಶಕಿ ವಿಜಯಲಕ್ಷ್ಮೀ , ಶಿವಕುಮಾರ ಹೊಳಕರ್, ರಾಹುಲ್ ಮಾಳಗೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ