ಸರ್ಕಾರದಿಂದ ಪಪ್ಪಾಯಿ ಖರೀದಿಸಲು ಮನವಿ
Team Udayavani, Apr 16, 2020, 3:28 PM IST
ಕಲಬುರಗಿ: ಜಿಲ್ಲೆಯಲ್ಲಿ ಬೆಳೆದ ಹಣ್ಣು, ಹೂಗಳನ್ನು ಸರ್ಕಾರದ ವತಿಯಿಂದ ಖರೀದಿಸಬೇಕೆಂದು ಶಾಸಕ ಡಾ| ಅವಿನಾಶ ಜಾಧವ ಅವರಿಗೆ ಮನವಿ ಸಲ್ಲಿಸಲಾಯಿತು.
ಕಲಬುರಗಿ: ಚಿಂಚೋಳಿ ಮತಕ್ಷೇತ್ರದ ರಾಜಾಪುರ ಗ್ರಾಮದಲ್ಲಿ ಜಗದೀಶ ಪಾಟೀಲ ತಮ್ಮ 15 ಎಕರೆ ತೋಟದಲ್ಲಿ 20 ಲಕ್ಷ ರೂ. ಖರ್ಚು
ಮಾಡಿ ಸುಮಾರು ಒಂದೂವರೆ ಕೋಟಿ ರೂ. ಬೆಲೆ ಬಾಳುವ ಪಪ್ಪಾಯಿ ಬೆಳೆದಿದ್ದು, ಇವುಗಳನ್ನು ಸರಕಾರದಿಂದ ಖರೀದಿಸುವ ವ್ಯವಸ್ಥೆ ಮಾಡಿಸಬೇಕು ಎಂದು ಕಲ್ಯಾಣ ಕರ್ನಾಟಕ ತೋಟಗಾರಿಕೆ, ಕೃಷಿ, ಅರಣ್ಯ ಮತ್ತು ಪರಿಸರ ಸಂರಕ್ಷಣೆ ಸಮಿತಿಯು ಚಿಂಚೋಳಿ ಶಾಸಕ ಡಾ| ಅವಿನಾಶ ಜಾಧವಗೆ ಮನವಿ ಸಲ್ಲಿಸಿದೆ.
ಇದಕ್ಕೆ ಸ್ಪಂದಿಸಿದ ಶಾಸಕರು ಸಚಿವ ಬಿ.ಸಿ. ಪಾಟೀಲ ಅವರೊಂದಿಗೆ ಚರ್ಚಿಸಿ, ಜಿಲ್ಲಾ ಧಿಕಾರಿ ಮತ್ತು ತೋಟಗಾರಿಕೆ ಇಲಾಖೆ ಮುಖಾಂತರ ಖರೀದಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ ಸಾವಿರಾರು ರೈತರು ಪಪ್ಪಾಯಿ, ಕಲ್ಲಂಗಡಿ, ಕರಬೂಜ, ಬಾಳೆ ಮುಂತಾದ ಹಣ್ಣುಗಳನ್ನು ಬೆಳೆದಿದ್ದಾರೆ. ಈ ಹಣ್ಣುಗಳನ್ನು ಖರೀದಿ ಮಾಡದೇ ಇರುವುದರಿಂದ ರೈತರು ಚಿಂತಾಕ್ರಾಂತರಾಗಿದ್ದಾರೆ. ಈಗಾಗಲೇ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬೆಳೆದ ಹಣ್ಣುಗಳನ್ನು ಸರಕಾರದಿಂದ ಖರೀದಿಸುವಂತೆ ಮತ್ತು ಹೂ ಬೆಳೆಗೆ ಪರಿಹಾರ ನೀಡುವಂತೆ ಸರಕಾರಕ್ಕೆ ಒತ್ತಾಯಿಸಬೇಕೆಂದು ವೀರೆಂದ್ರ ಪಾಟೀಲ ಕುಮಸಿ, ಎಂ.ಬಿ. ಅಂಬಲಗಿ, ಜಗದೀಶ ಪಾಟೀಲ ಶಾಸಕರಿಗೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ