ಶರಣಬಸವೇಶ್ವರ ರಥೋತ್ಸವ

ಡಾ| ಶರಣಬಸವಪ್ಪ ಅಪ್ಪ -ಚಿರಂಜೀವಿ ದೊಡ್ಡಪ್ಪ ಅಪ್ಪ ಅವರಿಂದ ಪರುಷ ಬಟ್ಟಲು ಪ್ರದರ್ಶನ

Team Udayavani, Mar 14, 2020, 4:34 PM IST

14-March-21

ಕಲಬುರಗಿ: ಐತಿಹಾಸಿಕ, ಮಹಾದಾಸೋಹಿ. ಕಲ್ಯಾಣ ನಾಡಿದ ಆರಾಧ್ಯದೈವ ಶರಣಬಸವೇಶ್ವರ ಮಹಾರಥೋತ್ಸವ ಕೊರೊನಾ ಭೀತಿ ನಡುವೆಯೂ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.

ಶರಣಬಸವೇಶ್ವರ ಮಹಾದಾಸೋಹಿ ಸಂಸ್ಥಾನದ ಪೂಜ್ಯ ದಾಕ್ಷಾಯಣಿ ಎಸ್‌.ಅಪ್ಪ, ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರು ಶರಣಬಸವೇಶ್ವರ ಪರುಷ ಬಟ್ಟಲು ಪ್ರದರ್ಶಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಇದಕ್ಕೂ ಮುಂಚೆ ಸಂಸ್ಥಾನದ ಅನುಭವ ಮಂಟಪದಲ್ಲಿ ಸಂಸ್ಥಾನದ 8ನೇ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ ಪರುಷ ಬಟ್ಟಲು ಪ್ರದರ್ಶಿಸಿ, ಶರಣಬಸವೇಶ್ವರರ ಜಾತ್ರೆ ಎಂದರೆ ಶರಣರ ದರ್ಶನ ಪಡೆಯುವುದು ಹಾಗೂ ಅವರ ತತ್ವಗಳನ್ನು ಮೆಲಕು ಹಾಕಿ ಅವುಗಳಂತೆ ನಡೆಯುವುದಾಗಿದೆ. ಶರಣಬಸವೇಶ್ವರ ಜಾತ್ರಾ ಮಹೋತ್ಸವ ರಥೋತ್ಸವ ದಿನದಿಂದ 11 ದಿನಗಳ ಕಾಲ ಅಂದರೆ ಯುಗಾದಿ ಹಬ್ಬದ ವರೆಗೂ ನಡೆಯಲಿದೆ. ಈ 11 ದಿನಗಳುದ್ದಕ್ಕೂ ಬೇಡ ಎಂದರೂ ಭಕ್ತರು ಶರಣರ ದೇವಾಲಯಕ್ಕೆ ಬಂದು ಭಕ್ತಿ ಭಾವದಿಂದ ದರ್ಶನ ಪಡೆಯುತ್ತಾರೆ ಎಂದರು.

198 ವರ್ಷಗಳಿಂದ ಶರಣಬಸವೇಶ್ವರರ ಜಾತ್ರಾ ಮಹೋತ್ಸವದ ರಥೋತ್ಸವ ನೆರವೇರಿಸಿಕೊಂಡು ಬರಲಾಗುತ್ತಿದೆ. ಒಂದು ವರ್ಷವೂ ಆಚರಣೆ ಮಾಡುವುದನ್ನು ಬಿಟ್ಟಿಲ್ಲ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಾತ್ರೆ ಮುಂದೂಡುವಂತೆ ಜಿಲ್ಲಾಡಳಿತ ಕೋರಿದೆ. ಹೀಗಾಗಿ ಜನ ಸೇರುವ ಮುನ್ನವೇ ಸಾಂಕೇತಿಕವಾಗಿ ಮಹಾ ಸಂಸ್ಥಾನದವರು ಹಾಗೂ ಭಕ್ತರ ವತಿಯಿಂದ ರಥೋತ್ಸವ ನೆರವೇರಿಸಲಾಗಿದೆ ಎಂದು ಡಾ| ಅಪ್ಪ ವಿವರಣೆ ನೀಡಿದರು.

ಕೊರೊನಾ ಭೀತಿ ಹಿನ್ನಲೆಯಲ್ಲಿ ಬಹಳ ಜನ ಕೂಡಬಾರದು. ಮಾಂಸ ತಿನ್ನೊದು ಕಡಿಮೆ ಮಾಡಬೇಕು. ಉಳ್ಳಾಗಡ್ಡಿಗೆ ಉಪ್ಪು ಲೇಪಿಸಿ ತಿನ್ನಬೇಕೆಂದು ಡಾ| ಶರಣಬಸವಪ್ಪ ಅಪ್ಪ ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಕಲಬುರಗಿ ಜಿಲ್ಲಾಧಿಕಾರಿ ಶರತ್‌ ಬಿ.ಮಾತನಾಡಿ, ಶರಣಬಸವೇಶ್ವರರ ಜಾತ್ರೆ ರದ್ದುಗೊಳಿಸಿ ಆದೇಶ ಹೊರಡಿಸಿಲ್ಲ. ಜಾತ್ರೆ ಮುಂದೂಡುವಂತೆ ಹಾಗೂ ಜನ ಸೇರದಂತೆ ಸಂಸ್ಥೆ ವತಿಯಿಂದ ಸಾಂಪ್ರದಾಯಿಕವಾಗಿ ರಥೋತ್ಸವ ಆಚರಿಸುವಂತೆ ಜಿಲ್ಲಾಡಳಿತದಿಂದ ಮನವಿ ಮಾಡಲಾಗಿತ್ತು ಎಂದು ವಿವರಣೆ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿವಿ ಕುಲಪತಿ ಡಾ| ನಿರಂಜನ್‌ ನಿಷ್ಠಿ ಮುಂತಾದವರಿದ್ದರು. ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಲ್ಲದೇ ನಾಡಿನ ಮೂಲೆ- ಮೂಲೆಗಳಿಂದ ಭಕ್ತರು ಆಗಮಿಸಿದ್ದಾರೆ. ರಥೋತ್ಸವ ಸಂಜೆ 6ರ ಬದಲು ಮಧ್ಯಾಹ್ನ 4ಕ್ಕೆ ಜರುಗಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.