ಹಾಳಾದ ಗುಲಾಬಿ ಬೆಳೆ: ಪರಿಹಾರಕ್ಕೆ ಮನವಿ
Team Udayavani, Apr 16, 2020, 5:27 PM IST
ಕಲಬುರಗಿ: ಮಾರಾಟವಾಗದೇ ಹಾಳಾಗಿರುವ ಗುಲಾಬಿ ಹೂ ಪ್ರದರ್ಶಿಸಲಾಯಿತು.
ಕಲಬುರಗಿ: ತಾಲೂಕಿನ ಕುಮಸಿ ಗ್ರಾಮದ ರೈತ ವೀರೇಂದ್ರ ಪಾಟೀಲ ಬೆಳೆದ ನಾಲ್ಕು ಎಕರೆ ಗುಲಾಬಿ ಹೂವು ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾರಾಟವಾಗದೇ ಸಂಪೂರ್ಣ ಹಾಳಾಗಿದ್ದು, ಪರಿಹಾರ ಒದಗಿಸಬೇಕು ಎಂದು ಕಲ್ಯಾಣ ಕರ್ನಾಟಕ ತೋಟಗಾರಿಕೆ, ಅರಣ್ಯ, ಕೃಷಿ ಮತ್ತು ಪರಿಸರ ಸಂರಕ್ಷಣ ಸಮಿತಿ ಮನವಿ ಮಾಡಿದೆ.
ಬೇಸಿಗೆಯಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ ಗುಲಾಬಿಗೆ ಬೇಡಿಕೆ ಬಹಳಷ್ಟಿರುತ್ತಿತ್ತು. ಈ ವೇಳೆ ಸುಮಾರು 6ರಿಂದ 8 ಲಕ್ಷ ರೂ. ಆದಾಯ ಬರಬಹುದೆಂದು ಭಾವಿಸಲಾಗಿತ್ತು. ಆದರೆ ಬೆಳೆದು ನಿಂತ ಗುಲಾಬಿ ಹೂವು ಶೇ. 75ರಷ್ಟು ಒಣಗಿದೆ. ಇನ್ನೊಂದು ವಾರದಲ್ಲಿ ಸಂಪೂರ್ಣ ಒಣಗುತ್ತದೆ. ಹೀಗಾಗಿ ಬೆಳೆಯಲು ಖರ್ಚು ಮಾಡಿದ ಹಣವೂ ಮರಳಿ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಹೂವು ಬೆಳೆದ ರೈತರಿಗೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ, ಕೃಷಿ ಸಚಿವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಸಾವಿರಾರು ರೈತರು ಗುಲಾಬಿ, ಮಲ್ಲಿಗೆ, ಚೆಂಡು ಮುಂತಾದ ಹೂ ಬೆಳೆದಿದ್ದಾರೆ. ಆದರೆ ಮಾರಾಟ ಆಗದಿರುವುದರಿಂದ ಚಿಂತಾಕ್ರಾಂತರಾಗಿದ್ದಾರೆ. ಇಂತಹ ರೈತರಿಗೆ ಸೂಕ್ತ ಪರಿಹಾರ ದರ ನೀಡಬೇಕೆಂದು ಜಿಲ್ಲಾಧಿ ಕಾರಿ ಮತ್ತು ತೋಟಗಾರಿಕೆ ಇಲಾಖೆಗೆ ಸಮಿತಿ ಅಧ್ಯಕ್ಷ ವೀರೇಂದ್ರ ಪಾಟೀಲ ಕುಮಸಿ, ಕೋಶಾಧ್ಯಕ್ಷ ಜಗದೀಶ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಬಿ. ಅಂಬಲಗಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
ಡ್ರಗ್ಸ್ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ