ಬಸವ ಮಹಾಮನೆಯಲ್ಲಿ ಕಲ್ಯಾಣ ಪರ್ವ; ಡಾ| ಉಮೇಶ ಜಾಧವ

ಈ ಧರ್ಮ ವಿಶ್ವವ್ಯಾಪ್ತಿಯಲ್ಲಿ ಪಸರಿಸುವ ಕೆಲಸ ನಿರಂತರವಾಗಿ ನಡೆಯಬೇಕು

Team Udayavani, Oct 10, 2022, 5:43 PM IST

ಬಸವ ಮಹಾಮನೆಯಲ್ಲಿ ಕಲ್ಯಾಣ ಪರ್ವ; ಡಾ| ಉಮೇಶ ಜಾಧವ

ಬಸವಕಲ್ಯಾಣ: ಶರಣರು ಕಾಯಕಕ್ಕೆ ಮಹತ್ವ ನೀಡಿ ದಾಸೋಹಕ್ಕೆ ಆದ್ಯತೆ ನೀಡಿದ ಭೂಮಿ ಇದಾಗಿದೆ. ಈ ನೆಲ ಶ್ರೇಷ್ಠ ನೆಲವಾಗಿದೆ. ಕಾಶಿ, ಅಯೋಧ್ಯೆ ಅಭಿವೃದ್ಧಿ ಹೊಂದಿದ ಸ್ಥಾನದಲ್ಲಿವೆ. ಬಸವಕಲ್ಯಾಣ ಕೂಡಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು. ಬಸವ ಕಲ್ಯಾಣದಲ್ಲಿ ವಿಮಾನ ವಿಲ್ದಾಣ ಸ್ಥಾಪಿಸಿದರೆ ಜನರಿಗೆ ಇಲ್ಲಿಗೆ ಆಗಮಿಸಲು ಅನುಕೂಲವಾಗಲಿದೆ ಎಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವ ಹೇಳಿದರು.

ನಗರದ ಬಸವ ಮಹಾಮನೆಯಲ್ಲಿ ಬಸವ ಧರ್ಮ ಪೀಠದಿಂದ ಹಮ್ಮಿಕೊಂಡ 21ನೇ ಕಲ್ಯಾಣ ಪರ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಿಸಿದ್ದಾರೆ. ಈ ಧರ್ಮ ವಿಶ್ವವ್ಯಾಪ್ತಿಯಲ್ಲಿ ಪಸರಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಲಿಂಗಾಯತರಿಗೆ ಒಂದು ಕಡೆ ಕೂತು ಸಭೆ ನಡೆಸಲು ಹಾಗೂ ಕೂಡಲ ಸಂಗಮ ಹಾಗೂ ಬಸವಕಲ್ಯಾಣ ಲಿಂಗಾಯತರ ತೀರ್ಥ ಹಾಗೂ ಪವಿತ್ರ ಕ್ಷೇತ್ರಗಳಾಗಿವೆ ಎಂದು ತೋರಿಸಿಕೊಟ್ಟವರು ಲಿಂ| ಲಿಂಗಾನಂದ ಅಪ್ಪಾಜಿ ಹಾಗೂ ಲಿಂ| ಡಾ| ಮಾತೆ ಮಹಾದೇವಿ ಅವರಾಗಿದ್ದಾರೆ ಎಂದರು.

ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ಲಿಂ| ಡಾ| ಮಾತೆ ಮಹಾದೇವಿ ಬಸವಕಲ್ಯಾಣದಲ್ಲಿ ಕಲ್ಯಾಣ ಪರ್ವ ಹಾಗೂ ಕೂಡಲ ಸಂಗಮದಲ್ಲಿ ಶರಣ ಮೇಳ ಕಾರ್ಯಕ್ರಮವು ಬಸವ ಧರ್ಮ ಪೀಠದಿಂದ ಆರಂಭಿಸಿದ್ದಾರೆ. ಹೀಗಾಗಿ ಮಾತಾಜಿ ಅವರು ಬದುಕಿದ್ದ ಸಮಯದಲ್ಲಿ ಕೈಗೊಂಡ ಕಾರ್ಯಗಳು ಅದ್ಭುತವಾಗಿವೆ. ಅವರು ಹೇಳಿದ ಹಾಗೆ ಸಮಾಜ ಸಾಗಿದರೆ ಸುಧಾರಣೆಗೊಂಡು ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗುತ್ತದೆ ಎಂದರು. ಬೀದರನ ಶಾಹೀನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಅಬ್ದುಲ್‌ ಖದೀರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಬೀದರನ ಉದ್ಯಮಿ ಗುರುನಾಥ ಕೊಳ್ಳೂರ ಸನ್ಮಾನ ಸ್ವೀಕರಿಸಿದರು. ಬೆಂಗಳೂರನ ಹಿರಿಯ ಸಾಹಿತಿ ಟಿ.ಆರ್‌. ಚಂದ್ರಶೇಖರಯ್ನಾ ಅವರು ಕಲ್ಯಾಣ- ಮಾನವೀಯತೆಯ ಪುಣ್ಯಕ್ಷೇತ್ರ ಎಂಬ ವಿಷಯದ ಮೇಲೆ ಅನುಭಾವ ನೀಡಿದರು.

ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಡಾ| ಮಾತೆ ಗಂಗಾದೇವಿ, ಹೈದ್ರಾಬಾದನ ಬಸವ ಮಂಟಪದ ಶ್ರೀ ಅನಿಮಿಶಾನಂದ ಸ್ವಾಮೀಜಿ, ಜಗದ್ಗುರು ಶ್ರೀ ಬಸವಕುಮಾರ ಸ್ವಾಮೀಜಿ, ಶ್ರೀ ಮಹಾಲಿಂಗ ಸ್ವಾಮೀಜಿ, ಕಲ್ಯಾಣ ಪರ್ವ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ರಾಜೇಂದ್ರಕುಮಾರ ಗಂದಗೆ, ಸುರೇಶ ಸ್ವಾಮಿ, ಬಿಡಿಪಿಸಿ ಅಧ್ಯಕ್ಷ ಅನಿಲಕುಮಾರ ರಗಟೆ, ಉಪಾಧ್ಯಕ್ಷ ಅಶೋಕ ನಾಗರಾಳೆ, ಆರ್‌.ಜಿ. ಶಟಗಾರ, ಕಿರಣ
ಚಾಕೋತೆ, ಸಿದ್ರಾಮಪ್ಪ ಲದ್ದೆ, ವಿರೂಪಾಕ್ಷ ಗಾದಗಿ, ಬಸವರಾಜ ಪಾಟೀಲ ಶಿವಪೂರ ಮತ್ತಿತರರು ಇದ್ದರು. ಬೀದರನ ನೃತ್ಯಾಂಗನ ನಾಟ್ಯ ಮತ್ತು ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ವಚನಗಳ ಹಾಡಿನ ನೃತ್ಯ ಕಾರ್ಯಕ್ರಮ ಗಮನ ಸೆಳೆಯಿತು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.