ಅ. 18ರಿಂದ 20ನೇ ಕಲ್ಯಾಣ ಪರ್ವ ಉತ್ಸವ- ಮಾತೆ ಗಂಗಾದೇವಿ


Team Udayavani, Sep 29, 2021, 6:08 PM IST

ಅ. 18ರಿಂದ 20ನೇ ಕಲ್ಯಾಣ ಪರ್ವ ಉತ್ಸವ- ಮಾತೆ ಗಂಗಾದೇವಿ

ಬೀದರ್: ಬಸವಣ್ಣನವರ ಕಾರ್ಯ ಕ್ಷೇತ್ರದ ಬಸವಕಲ್ಯಾಣದಲ್ಲಿ ಅ. 18 ರಿಂದ ಮೂರು ದಿನಗಳ ಕಾಲ ಬಸವ ಧರ್ಮ ಪೀಠದಿಂದ 20ನೇ ಕಲ್ಯಾಣ ಪರ್ವ ಉತ್ಸವ ಆಯೋಜಿಸಲಾಗಿದ್ದು, ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು ಪೀಠಾಧ್ಯಕ್ಷರಾದ ಡಾ. ಮಾತೆ ಗಂಗಾದೇವಿ ಮನವಿ ಮಾಡಿದ್ದಾರೆ.

ಬಸವಕಲ್ಯಾಣ ಜಾಗತೀಕ ಮಟ್ಟದಲ್ಲಿ ಬೆಳೆಯಬೇಕೆಂಬ ಆಶಯದೊಂದಿಗೆ ಲಿಂ. ಮಾತೆ ಮಹಾದೇವಿಯವರು ಕಲ್ಯಾಣ ಪರ್ವ ಆರಂಭಿಸಿ, 17 ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು. ಪೂಜ್ಯರು ಲಿಂಗೈಕ್ಯರಾದ ನಂತರ 3ನೇ ಪರ್ವ ಇದಾಗಿದೆ. ಕಳೆದ ವರ್ಷ ಕೋವಿಡ್ ಹಿನ್ನಲೆ ಸರಳವಾಗಿ ಆಚರಿಸಲಾಗಿತ್ತು. ಈ ವರ್ಷ ಅರ್ಥಪೂರ್ಣವಾಗಿ ನಡೆಯಲಿದ್ದು, ಕರ್ನಾಟಕ ಮಾತ್ರವಲ್ಲ ನೆರೆ ರಾಜ್ಯಗಳ ಸಾವಿರಾರು ಬಸವಾನುಯಾಯಿಗಳು ಪಾಲ್ಗೊಳ್ಳಲಿದ್ದಾರೆ. ಭಕ್ತರಿಗಾಗಿ ಅಗತ್ಯ ವಸತಿ, ಪ್ರಸಾದ ವ್ಯವಸ್ಥೆಯನ್ನು ಉತ್ಸವ ಸಮಿತಿ ಮಾಡಲಿದೆ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಕಿತ್ತಾಟದಿಂದ ಪಾಕ್‍-ಐಎಸ್‍ಐಗೆ ಲಾಭ : ಕಪಿಲ್ ಸಿಬಲ್  

ಅ. 18 ರಂದು ಬೆಳಿಗ್ಗೆ 10.30ಕ್ಕೆ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಕಲ್ಯಾಣ ಪರ್ವಕ್ಕೆ ಚಾಲನೆ ನೀಡುವರು. ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಜೆ 6.30ಕ್ಕೆ ಧರ್ಮ ಚಿಂತನೆ ಗೋಷ್ಠಿ ಜರುಗಲಿವೆ. 19ರಂದು ಬೆಳಿಗ್ಗೆ 7ಕ್ಕೆ ಸಾಮೂಹಿಕ ಇಷ್ಟಲಿಂಗ ಪೂಜೆ, ನಂತರ ಶರಣ ವಂಚನೆ ಹಾಗೂ ಶರಣರಿಗೆ ಶರಣಾರ್ಥಿ ಕಾರ್ಯಕ್ರಮ, ಸಾಯಂಕಾಲ ‘ಲಿಂಗಾಯತ ಧರ್ಮದ ಮಾನ್ಯತೆ ಕುರಿತಂತೆ ಚಿಂತನೆಗೋಷ್ಠಿ ನಡೆಯವುದು. 20ರಂದು ಬೆ. 10ಕ್ಕೆ ಪರುಷ ಕಟ್ಟೆಯಿಂದ ಬಸವ ಮಹಾಮನೆವರೆಗೆ ಪಥ ಸಂಚಲನ, ತದ ನಂತರ ಅಲ್ಲಮಪ್ರಭು ಶೂನ್ಯ ಪೀಠದ ಪೀಠಾರೋಹಣ, ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಲಿಂಗಾಯತ ಧರ್ಮಿಯರಿಗೆ ಕೂಡಲ ಸಂಗಮ ಮತ್ತು ಬಸವಕಲ್ಯಾಣ ಕ್ಷೇತ್ರಗಳು ಎರಡು ಕಣ್ಣುಗಳಿದ್ದಂತೆ. ಇವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಸಬೇಕಾದದ್ದು ನಮ್ಮೆಲ್ಲರ ಹೊಣೆ. ಜನ ಬದುಕಲಿ, ಜಗ ಬದುಕಲಿ ಎಂದು ವಚನ ಸಾಹಿತ್ಯವನ್ನು ನೀಡಿದ ಹಾಗೂ ಜಗತ್ತಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮೊಟ್ಟ ಮೊದಲು ನೀಡಿದ ಅನುಭವ ಮಂಟಪ ಸ್ಥಾಪನೆಯಾದ ಬಸವಣ್ಣ ಕಾರ್ಯ ಕ್ಷೇತ್ರ ಬಸವಕಲ್ಯಾಣ. ಕಲ್ಯಾಣ ಕರ್ನಾಟಕ ಭಾಗದ ಜನರು ಸ್ವಯಂ ಪ್ರೇರಿತರಾಗಿ ಕಲ್ಯಾಣ ಪರ್ವಕ್ಕಾಗಿ ದುಡಿಯಲು ಮುಂದೆ ಬರಬೇಕು ಎಂದು ಕೋರಿದರು.

ಕಲ್ಯಾಣ ಪರ್ವದ ಯಶಸ್ವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಗೌರವಾಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗಿದ್ದು, ಶಾಸಕ ಶರಣು ಸಲಗರ ಅಧ್ಯಕ್ಷರಾಗಿ, ಶಂಕರೆಪ್ಪ ಪಾಟೀಲ ಕಾರ್ಯಾಧ್ಯಕ್ಷ ಮತ್ತು ಹಾವಶೆಟ್ಟಿ ಪಾಟೀಲ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಅಯ್ಕೆ ಮಾಡಲಾಗಿದೆ ಎಂದು ಮಾತಾಜಿ ತಿಳಿಸಿದರು.

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.