ಆತ್ಮ ಶುದ್ಧಿಯಲ್ಲಿದೆ ನಿಜವಾದ ಸೌಂದರ್ಯ: ಸ್ವಾಮೀಜಿ


Team Udayavani, Feb 29, 2020, 5:24 PM IST

29-February-27

ಕಮಲನಗರ: ಬಾಹ್ಯ ರೂಪವೇ ಸುಂದರವಲ್ಲ. ನಿಜವಾದ ಸೌಂದರ್ಯ ಆತ್ಮ ಶುದ್ಧಿಯಲ್ಲಿದೆ. ಇದನ್ನು ಪಡೆಯಬೇಕಾದರೆ ಸತ್ಕಾರ್ಯಗಳಿಗೆ ತಮ್ಮ ಶಕ್ತಿ ಅನುಸಾರ ದಾನ ಮಾಡಿದಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ತಮಲೂರು ಮಠದ ಪೀಠಾಧಿಪತಿ ಡಾ| ಶಿವಾನಂದ ಶಿವಾಚಾರ್ಯರು ಹೇಳಿದರು.

ಪಟ್ಟಣದ ಮಹಾತ್ಮಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ 84ನೇ ಮಹಾಶಿವಾರಾತ್ರಿ ಪ್ರಯುಕ್ತ ಹಮ್ಮಿಕೊಂಡಿದ್ದ 12 ಜ್ಯೋತಿರ್ಲಿಂಗ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮೀಜಿ ಮಾತನಾಡಿದರು.

ಮನುಷ್ಯ ತನ್ನ ಬದುಕಿನಲ್ಲಿ ಪಾಪ, ಕರ್ಮದಿಂದ ಮುಕ್ತರಾಗಬೇಕಾದರೆ ಸತ್ಸಂಗದಲ್ಲಿ ಭಾಗವಹಿಸಿ ಸನ್ಮಾರ್ಗದಲ್ಲಿ ನಡೆದರೆ ಬದುಕು ಪಾವನವಾಗುತ್ತದೆ ಎಂದು ಹೇಳಿದರು. ಮಾನವ ಸತ್ಸಂಗದಲ್ಲಿ ಉಳಿದು ತನ್ನನ್ನು ತಾನು ಅರಿತು ನಡೆದರೆ ದೇವಮಾನವನಾಗುತ್ತಾನೆ. ಶಿವನ ತೇಜ ಅರಿಯಲು ಆತ್ಮ, ಪರಮಾತ್ಮನ ಮಿಲನ ಕಾರ್ಯದಲ್ಲಿ ನಾವು ಭಕ್ತಿ, ಭಾವದಿಂದ ಧ್ಯಾನ ಮಾಡಿದಾಗ ಮಾತ್ರ ಸಾಧ್ಯ ಎಂದು ಹೇಳಿದರು.

ಬೀದರ ಈಶ್ವರೀಯ ಮಹಾವಿದ್ಯಾಲಯ ಸಂಚಾಲಕಿ ಬಿಕೆ ಸುನಂದಾ ಮಾತನಾಡಿ, ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪ್ರಕೃತಿ ಬಳಸುತ್ತಿದ್ದಾನೆ. ಪ್ರಕೃತಿ ಕಾಪಾಡಲು ಮುಂದಾಗದೆ ಇರುವುದು ಬೇಸರದ ಸಂಗತಿ. ಪ್ರಕೃತಿ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಸಂತರು, ಶರಣರ ತತ್ವಾದರ್ಶವನ್ನು ಯುವಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಬ್ರಹ್ಮಕುಮಾರಿ ವಿಶ್ವವಿದ್ಯಾಲಯದಲ್ಲಿ ಯಾರು ಪ್ರವೇಶ ಪಡೆದುಕೊಂಡು ಭಕ್ತಿ ಮಾರ್ಗದಲ್ಲಿ ನಡೆಯುವರೋ ಅವರು ಜೀವನದಲ್ಲಿ ದೇವಮಾನವನಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು.

ಹಲಬರ್ಗಾ, ಶಿವಣಿ ಮಠದ ಪೀಠಾಧಿಪತಿ ಹಾವಗೀಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ, ದಿನನಿತ್ಯ ಷಡಕ್ಷರಿ ಮಂತ್ರದೊಂದಿಗೆ ಶಿವನ ಧ್ಯಾನ ಮಾಡುವುದರಿಂದ ಮನಸ್ಸು ಶಾಂತವಾಗಿ ಸುಖಮಯ ಜೀವನ ಸಾಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಾನವನ ಬದುಕು ಚಿಕ್ಕಂದಿನಲ್ಲಿ, ಯವ್ವನದಲ್ಲಿ, ಮುಪ್ಪಿನಲ್ಲಿ ಯಾವ ರೀತಿ ಬದುಕು ಸಾಗಿಸುವನೋ, ಅವನ ಸ್ಥಿತಿ ಹೇಗೆ ಇರುವುದರ ಕುರಿತು ಮಾರ್ಮಿಕವಾಗಿ ಜನರ ಮನದಟ್ಟವಾಗುವಂತೆ ಕೆಲಕಾಲ ಸಭಿಕರನ್ನು ಹಾಸ್ಯದಲ್ಲಿ ಮುಳುಗಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೇರಳದ ಡಾ| ಬಿಕೆ ಸ್ವಾಮಿನಾಥನ್‌ ಮಾತನಾಡಿ, ನಕಾರಾತ್ಮಕ ವಿಚಾರಗಳಿಂದ ಜೀವನದಲ್ಲಿ ದುಃಖ, ಕಷ್ಟದೊಂದಿಗೆ ನೆಮ್ಮದಿ ಹಾಳಾಗುತ್ತದೆ. ಅದಕ್ಕೆ ಪರಮಾತ್ಮನ ಧ್ಯಾನ ಮಾಡಿ ಸಕಾರಾತ್ಮಕ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಬೀದರನ ಸುಮಂಗಲಾ ಬಹನಜೀ, ಕಮಲನಗರ ಈಶ್ವರೀಯ ಮಹಾವಿದ್ಯಾಲಯ ಸಂಚಾಲಕಿ ಜಯಶ್ರೀ ಬಹನಜೀ, ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಶಿವಾನಂದ ವಡ್ಡೆ, ಮುಖಂಡ ಶಿವಾನಂದ ವಡ್ಡೆ, ನಾಗೇಶ ಪತ್ರೆ, ಲಿಂಗಾನಂದ ಮಹಾಜನ, ನೀಲಕಂಠರಾವ ಕಾಂಬಳೆ, ಶಿವರಾಜ ಪಾಟೀಲ, ಪ್ರಕಾಶ ಮಾನಕರಿ, ಶಂಕರರಾವ ಬಿರಾದಾರ, ಸವಿತಾ ಸಂತೋಷ ಕಾರಬಾರಿ, ದೇವೆಂದ್ರ, ಮಡಿವಾಳಪ್ಪ ಮುರ್ಕೆ, ಬಾಬುರಾವ ಹರಪಳ್ಳೆ, ಪತ್ರಕರ್ತ ಮನೋಜಕುಮಾರ ಹಿರೇಮಠ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.