ಹದಗೆಟ್ಟ  ಸೋನಾಳ ರಸ್ತೆ

ಜನಪ್ರತಿನಿಧಿ -ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ-ರಸ್ತೆ ದುರಸ್ತಿಗೆ ಆಗ್ರಹ

Team Udayavani, Jan 19, 2020, 12:44 PM IST

19-January-5

ಕಮಲನಗರ: ತಾಲೂಕಿನ ಸೋನಾಳದಿಂದ- ಕಮಲನಗರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ತುಂಬ ತಗ್ಗು ಗುಂಡಿಗಳೇ ತುಂಬಿವೆ. ಇದರಿಂದ ವಾಹನ ಸವಾರರ ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ. ಹಲವು ವರ್ಷಗಳಿಂದ ರಸ್ತೆ ಹದಗೆಟ್ಟಿದ್ದು, ರಸ್ತೆಯ ಬಹುತೇಕ ಕಡೆ ಜಲ್ಲಿಕಲ್ಲು ಹೊರಬಂದು ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.

ದಗೆಟ್ಟ ರಸ್ತೆಯಿಂದಾಗಿ ವಾಹನ ಸವಾರರು ಭಯದಲ್ಲಿ ಸಂಚರಿಸುವಂತಾಗಿದೆ ಎಂದು ಸೋನಾಳ ಗ್ರಾಮದ ಅಂಕೋಶ ಹಣಮಶೆಟ್ಟೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋನಾಳದಿಂದ ಕಮಲನಗರಕ್ಕೆ ತೆರಳುವ ಮುಖ್ಯ ರಸ್ತೆ ಇದಾಗಿರುವುದರಿಂದ ಪ್ರತಿನಿತ್ಯ ಈ ರಸ್ತೆಯಲ್ಲಿ ನೂರಾರು ಖಾಸಗಿ, ಶಾಲಾ ವಾಹನ, ಸಾರಿಗೆ ಬಸ್‌, ಲಾರಿ, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಆದರೂ ಸಂಬಂಧಿಸಿದವರ ನಿಷ್ಕಾಳಜಿಯಿಂದ ಸುಗಮ ಸಂಚಾರಕ್ಕೆ ಬಾರದಂತಾಗಿದೆ.

ಗ್ರಾಮಸ್ಥರು ಹದಗೆಟ್ಟ ರಸ್ತೆಯ ಬಗ್ಗೆ ಹಲವು ಬಾರಿ ಸಂಬಂಧಿತ ಅಧಿಕಾರಿ ಮತ್ತು ಚುನಾಯಿತ ಪ್ರತಿನಿಧಿ ಗಳ ಗಮನಕ್ಕೆ ತಂದು,
ಹೊಸ ರಸ್ತೆ ನಿರ್ಮಿಸುವಂತೆ ಮನವಿ ಕೂಡ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ವ್ಯಾಪಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಾಲೆಗೆ, ಬ್ಯಾಂಕ್‌ಗಳಿಗೆ, ತಹಶೀಲ್ದಾರ್‌ ಕಚೇರಿಗೆ ಹಾಗೂ ಮುಂತಾದ ಕಾರ್ಯ ನಿಮಿತ್ತ ನಿತ್ಯ ಈ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಆದರೆ ಇಲ್ಲಿ ಸಂಚಾರ ಸಂಕಟ ಹೇಳತೀರದಾಗಿದೆ. ಆದ್ದರಿಂದ ಕೂಡಲೇ ರಸ್ತೆ ಅಭಿವೃದ್ಧಿಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಒದಗಿಸಬೇಕು ಎಂದು ಸೋನಾಳ ಗ್ರಾಮದ ಶ್ರೀಕಾಂತ ಜಡಗೆ, ಮಹೇಶ ಬಿರಾದಾರ, ಬಸವರಾಜ ಇಸರಣ್ಣಾ, ಅರುಣ ಇಸರಣ್ಣಾ ಒತ್ತಾಯಿಸಿದ್ದಾರೆ.

ಸೋನಾಳ-ಕಮಲನಗರ ಮುಖ್ಯ ರಸ್ತೆ ಬಹು ವರ್ಷಗಳಿಂದ
ಹಾಳಾಗಿದ್ದು, ವಾಹನ ಸವಾರರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಬಂಧಿತ ಅಧಿಕಾರಿಗಳು ಶೀಘ್ರದಲ್ಲಿ ರಸ್ತೆ ಅಭಿವೃದ್ಧಿಗೊಳಿಸಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು
ಮಾಡಿಕೊಡಬೇಕು.
 ಆನಂದ ಬಿರಾದಾರ, ಕರವೇ
ಕಮಲನಗರ ವಲಯ ಅಧ್ಯಕ್ಷ

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಹು ವರ್ಷಗಳಿಂದ
ಹದಗೆಟ್ಟಿದೆ. ಬೈಕ್‌ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ವಾಹನ ಚಲಾಯಿಸುವಂತಾಗಿದೆ.
ಪ್ರೇಮಕುಮಾರ ಘಾಳೆ,
ಸೋನಾಳ ಗ್ರಾಮಸ್ಥ

„ವೈಜಿನಾಥ ವಡ್ಡೆ

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.