ಭೂ ಪರಿಹಾರಕ್ಕಾಗಿ ರೈತರಿಂದ ರಸ್ತೆ ಕಾಮಗಾರಿ ತಡೆ

ಪರಿಹಾರ ನೀಡುವವರೆಗೆ ಕಾಮಗಾರಿಗೆ ಆಸ್ಪದ ಕೊಡಲ್ಲ: ರೈತರ ಪಟ್ಟು

Team Udayavani, Feb 17, 2020, 4:22 PM IST

17-February-23

ಕಮಲನಗರ: ನಾಲ್ಕು ದಶಕಗಳ ಹಿಂದೆ ರಸ್ತೆ ನಿರ್ಮಾಣಕ್ಕಾಗಿ ವಶಪಡಿಸಿಕೊಂಡ ಭೂಮಿಯ ಪರಿಹಾರ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಮುಧೋಳ (ಬಿ) ಗ್ರಾಮದ ರೈತರು ರಸ್ತೆ ಅಗಲೀಕರಣ ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.

ಈ ರಸ್ತೆ ಕಮಲನಗರ-ತೋರಣಾ, ಮುಧೋಳ (ಬಿ) ಮಾರ್ಗವಾಗಿ ಔರಾದ (ಬಾ) ತಾಲೂಕಿಗೆ ಹೋಗುತ್ತದೆ. ಈ ರಸ್ತೆ ನಿರ್ಮಿಸುವಾಗ ಕಳೆದುಕೊಂಡ ಭೂಮಿಗೆ ಪರಿಹಾರ ನೀಡುವವರೆಗೆ ರಸ್ತೆ ಅಗಲೀಕರಣ, ಡಾಂಬರೀಕರಣ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಭೂಮಿ ಕಳೆದುಕೊಂಡ ಮುಧೋಳ (ಬಿ) ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಶಿವಕುಮಾರ ಕತ್ತೆ, ಸರ್ವೇ ನಂ. 113ರಲ್ಲಿ 16 ಎಕರೆ 12 ಗುಂಟೆ ಭೂಮಿ ಇದೆ. ಸರ್ಕಾರ ರಸ್ತೆ ನಿರ್ಮಿಸಲು ಎಷ್ಟು ಭೂಮಿ ಪಡೆದಿದೆ ಎನ್ನುವುದನ್ನು ರೈತರಿಗೆ ತಿಳಿಸಿಲ್ಲ. ರಸ್ತೆ ಅಗಲೀಕರಣಕ್ಕಾಗಿ ಭೂಮಿ ವಶಪಡಿಸಿಕೊಳ್ಳುವ ರೈತರಿಗೆ ನೋಟಿಸ್‌ ನೀಡಿಲ್ಲ. ಈ ಕುರಿತು ಸಂಬಂಧಪಟ್ಟವರು ಲಿಖೀತ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ರಸ್ತೆ ಅಗಲೀಕರಣಕ್ಕಾಗಿ ಹೊಲದಲ್ಲಿ ಟಿಪ್ಪರ್‌, ರೂಲರ್‌ ನಿಲ್ಲಿಸಲಾಗಿದ್ದು, ಕಂಕರ್‌, ಮೊರಂ ಹಾಕಲಾಗಿದೆ. ಈ ಕುರಿತು ಗುತ್ತಿಗೆದಾರರನ್ನು ಪ್ರಶ್ನಿಸಿದರೆ ಇದು ಸರ್ಕಾರದ ಭೂಮಿ ಎನ್ನುವ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಅಲ್ಲದೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪಾದಿಸಿದರು. ಹೊಲದಲ್ಲಿ ರಸ್ತೆ ನಿರ್ಮಿಸಿದ ಕುರಿತು 2019 ಡಿ.16ರಂದು ಠಾಣಾಕುಶನೂರ ಪೊಲೀಸ್‌
ಠಾಣೆಯಲ್ಲಿ ದೂರು ಸಲ್ಲಿಸಿದ್ದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ಪೊಲೀಸ್‌ ಠಾಣೆಯಿಂದ ತಮಗೆ ಬೆದರಿಕೆ ಬಂದಿತ್ತು ಎಂದು ದೂರಿದರು.

ಆನಂತರ 2020 ಫೆ.14ರಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಮುಧೋಳ (ಬಿ), ಔರಾದ (ಬಾ) ರೈತ ಸಂಘದ ತಾಲೂಕು ಅಧ್ಯಕ್ಷ, ಕಮಲನಗರ ರೈತ ಸಂಘದ ತಾಲೂಕು ಅಧ್ಯಕ್ಷರು ನಮ್ಮ ಬೇಡಿಕೆಗೆ ಸ್ಪಂದಿಸಿ ಪ್ರತಿಭಟನೆಗೆ ಬೆಂಬಲಿಸಿ, ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

ಕಾಮಗಾರಿ ಸ್ಥಗಿತ: ಠಾಣಾಕುಶನೂರ ಪೊಲೀಸ್‌ ಠಾಣೆ ಸಹಾಯಕ ಅಧಿಕಾರಿ ಬಸವರಾಜ ಕೋಟೆ ಸ್ಥಳಕ್ಕಾಗಮಿಸಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಮೇಲಾಧಿಕಾರಿ ತಿಳಿಸುವವರೆಗೆ ಕಾಮಗಾರಿ ಕೈಗೊಳ್ಳಬೇಡಿ ಎಂದು ಸೂಚಿಸಿದ ನಂತರ ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.

ಔರಾದ ( ಬಾ) ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಬಾವಗೆ, ಕಮಲನಗರ ತಾಲೂಕು ಸಂಘಟನಾ ಕಾರ್ಯದರ್ಶಿ ವೈಜಿನಾಥ ವಡ್ಡೆ, ರತಿಕಾಂತ ಗುಡ್ಡಾ, ಶಿವಕಂತ ಗುಡ್ಡಾ, ದಯಾನಂದ ಕತ್ತೆ, ಉದಯ ಸೊಲ್ಲಾಪುರೆ, ಗಂಗಾಧರ ಬೀಜಲಗಾವೆ, ಶಿವಪ್ಪ ಮೈಲಾರೆ, ಸಂಗಮ್ಮಾ ಕತ್ತೆ ಇತರರು ಇದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.