ಅನುದಾನ ಇಲ್ಲದೇ ಕನ್ನಡ ಭವನ ನನೆಗುದಿಗೆ


Team Udayavani, Mar 29, 2022, 12:44 PM IST

8bhavan

ಬೀದರ: ಸುದೀರ್ಘ‌ ಹೋರಾಟದ ಪರಿಣಾಮ ಜಿಲ್ಲಾ ಕೇಂದ್ರ ಬೀದರನಲ್ಲಿ ಸ್ಥಾಪನೆಯಾಗುತ್ತಿರುವ ಸುಸಜ್ಜಿತ ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ಕೊರತೆ ಆಗಿದ್ದು, ಯೋಜನೆ ನನೆಗುದಿಗೆ ಬಿದ್ದಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆ ಕಾರಣವಾಗಿದ್ದು, ಅನುದಾನಕ್ಕಾಗಿ ಕಸಾಪ ಹೋರಾಟಕ್ಕೆ ಇಳಿಯುವುದು ಇಲ್ಲವೇ “ಜೋಳಿಗೆ’ ಅಭಿಯಾನ ನಡೆಸಲು ನಿರ್ಧರಿಸಿದೆ.

ಸಾಂಸ್ಕೃತಿಕ ನಗರಿ ಬೀದರನಲ್ಲಿ ಸಾಹಿತ್ಯಾಸಕ್ತರ ಸ್ವಾಭಿಮಾನದ ಹೆಗ್ಗುರುತು “ಕನ್ನಡ ಭವನ’ ನಿರ್ಮಾಣ ಆಗಬೇಕೆಂಬುದು ಕನ್ನಡಿಗರ ಎರಡು ದಶಕಗಳ ಕನಸು. ಕನ್ನಡದ ನೆಲದಲ್ಲೇ ಭವನಕ್ಕಾಗಿ ಅಗತ್ಯ ನಿವೇಶನಕ್ಕೆ ಹಲವು ವರ್ಷಗಳ ಕಾಲ ಸಂಘರ್ಷ ನಡೆಸಿದ ಕನ್ನಡ ಸಾಹಿತ್ಯ ಪರಿಷತ್‌, ಈಗ ಅರ್ದಕ್ಕೆ ನಿಂತಿರುವ ಕಟ್ಟಡಕ್ಕೆ ಅನುದಾನಕ್ಕಾಗಿ ಮಗದೊಮ್ಮೆ ಹೋರಾಟದ ಹಾದಿ ತುಳಿಯುವ ಪರಿಸ್ಥಿತಿ ಬಂದಿರುವುದು ವಿಪರ್ಯಾಸ.

ನಗರದ ಗುರುದ್ವಾರ ಪರಿಸರದ ಸರ್ವೇ ನಂ.60ರಲ್ಲಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಸುಸಜ್ಜಿತ ಭವನ ನಿರ್ಮಾಣಕ್ಕೆ ಕಳೆದ ನ.22ರಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮೂರು ಪ್ರತ್ಯೇಕ ಕಟ್ಟಡಗಳನ್ನು ಒಳಗೊಂಡಿರುವ ಯೋಜನೆಯಡಿ ಗ್ರಂಥಾಲಯ, ಆರ್ಟ್‌ ಗ್ಯಾಲರಿ, ವಸತಿ ಗೃಹ, ಕಸಾಪ ಕಚೇರಿ, ಸಭಾಂಗಣವುಳ್ಳ ಒಂದು ಕಟ್ಟಡ, 600 ಜನ ಸಾಮರ್ಥ್ಯದ ಸಭಾ ಭವನ ಮತ್ತು ಬಯಲು ರಂಗ ಮಂದಿರದ ಎರಡು ಕಟ್ಟಡಗಳು ಹೊಂದಿವೆ. ಸದ್ಯ ಯೋಜನೆಯಡಿ ಆಡಳಿತ ಕಚೇರಿ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ.

ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ ಕಳೆದ ವರ್ಷ 2 ಕೊಟಿ ರೂ. ಮಂಜೂರು ಮಾಡಲಾಗಿತ್ತು. ಆದರೆ, ಕೋವಿಡ್‌ ಕಾರಣದಿಂದ ಆರ್ಥಿಕ ತೊಂದರೆಯ ನೆಪವೊಡ್ಡಿ ಕೇವಲ 1 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಇನ್ನೊಂದೆಡೆ ಸಂಸದರು ಮತ್ತು ಬೀದರ ಶಾಸಕರು ತಮ್ಮ ನಿಧಿಯಿಂದ ಘೋಷಿಸಿದ್ದ ತಲಾ 10 ಲಕ್ಷ ರೂ. ಬಿಡುಗಡೆಗೆ ನಿರ್ಲಕ್ಷ ತೋರುತ್ತಿದ್ದಾರೆ. ಹಾಗಾಗಿ ಶೇ. 80ರಷ್ಟು ಪೂರ್ಣಗೊಂಡಿರುವ ಕಟ್ಟಡದ ಕಾಮಗಾರಿ ಈಗ ಹಣ ಇಲ್ಲದೇ ಕಳೆದ 3 ತಿಂಗಳಿಂದ ಸ್ಥಗಿತಗೊಂಡಿದೆ.

ತಾತ್ಕಾಲಿಕ ಹಾಲ್‌ನ್ನು ಸಹ ಒಳಗೊಂಡಿದ್ದ ಆಡಳಿತ ಕಚೇರಿಯನ್ನು ಒಂದೆರಡು ತಿಂಗಳಲ್ಲಿ ಪೂರ್ಣಗೊಳಿಸಿ, ಅಲ್ಲಿಂದ ಕನ್ನಡದ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗಬೇಕೆಂಬ ಕಸಾಪ ಕನಸಿಗೆ ಅನುದಾನ ಕೊರತೆ ತಣ್ಣೀರೆರಚಿದಂತಾಗಿದೆ.

2ನೇ ಕಂತಿನ ಹಣಕ್ಕಾಗಿ ಪ್ರಾಧಿಕಾರಕ್ಕೆ ನಿರಂತರ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಪ್ರಾಧಿಕಾರದ ಬಳಿ ಹಣ ಇಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೇ ಪಡೆಯುವಂತೆ ಕೈಚಲ್ಲಿದೆ. ಕನ್ನಡ ಭವನಕ್ಕೆ ಒಂದಾದ ಮೇಲೊಂದು ಅಡೆತಡೆ ಎದುರಾಗುತ್ತಿರುವುದು ಕನ್ನಡಿಗರನ್ನು ಕೆರಳಿಸುತ್ತಿದ್ದು, ಚುನಾಯಿತ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಲಾದರೂ ಎಚ್ಚೆತ್ತು ಸರ್ಕಾರದಿಂದ ಅಗತ್ಯ ಅನುದಾನ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿ, ಆದಷ್ಟು ಬೇಗ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಪಾರಂಪರಿಕ ನಗರ ಬೀದರಗೆ ಇನ್ನಷ್ಟು ಮೆರಗು ತುಂಬಬೇಕಿದೆ.

ಬೀದರ ನಗರದಲ್ಲಿ ಎಲ್ಲ ಅಡೆತಡೆಗಳನ್ನು ದಾಟಿ 8 ಕೋಟಿ ರೂ. ವೆಚ್ಚದ ಕನ್ನಡ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಗಡಿ ಪ್ರಾಧಿಕಾರ ಮಂಜೂರು ಮಾಡಿದ 2 ಕೋಟಿ ರೂ. ಪೈಕಿ 1 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಹಾಗಾಗಿ ಆರಂಭಿಕವಾಗಿ ಕೈಗೆತ್ತಿಕೊಂಡಿರುವ ಆಡಳಿತ ಕಚೇರಿ ಕೆಲಸವೂ ಸಹ ಸ್ಥಗಿತಗೊಂಡಿದೆ. ಇತ್ತಿಚೆಗೆ ಭೇಟಿ ನೀಡಿದ್ದ ಪ್ರಾಧಿಕಾರದ ಅಧ್ಯಕ್ಷರಿಗೆ ಈ ಬಗ್ಗೆ ಮನವರಿಕೆ ಮಾಡಿದ್ದೇನೆ. ಅಷ್ಟೇ ಅಲ್ಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಕೆಆರ್‌ಡಿಬಿಗೂ ಸಹ ಅನುದಾನಕ್ಕಾಗಿ ಮನವಿ ಮಾಡಿದ್ದೇನೆ. -ಸುರೇಶ ಚನಶೆಟ್ಟಿ, ಅಧ್ಯಕ್ಷರು, ಜಿಲ್ಲಾ ಕಸಾಪ, ಬೀದರ

-­ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.