ಅಖಂಡ ಕರ್ನಾಟಕಕ್ಕೆ ಹೋರಾಟಗಾರರ ಪಾತ್ರ ಹಿರಿದು


Team Udayavani, Nov 28, 2020, 3:37 PM IST

ಅಖಂಡ ಕರ್ನಾಟಕಕ್ಕೆ  ಹೋರಾಟಗಾರರ ಪಾತ್ರ ಹಿರಿದು

ಬೀದರ: ಒಡೆದು ಛಿದ್ರಗೊಂಡಿದ್ದ ಕನ್ನಡ ನಾಡನ್ನು ಒಗ್ಗೂಡಿಸಿ, ಅಖಂಡ ಕರ್ನಾಟಕ ಸ್ಥಾಪಿಸುವಲ್ಲಿ ಜಿಲ್ಲೆಯ ಅನೇಕ ಕನ್ನಡಪರ ಹೋರಾಟಗಾರರು ಹಾಗೂ ಮಠಗಳ ಪಾತ್ರ ಹಿರಿದಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ರಂಗ ಮಂದಿರದಲ್ಲಿ ಶುಕ್ರವಾರ ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ, ಸ್ನೇಹಾ ಕಲ್ಚರಲ್‌ ಮತ್ತು ಸೋಶಿಯಲ್‌ ಡೆವಲಪ್‌ಮೆಂಟ್‌ಫೌಂಡೇಶನ್‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 65ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಾರಾಷ್ಟ್ರಮತ್ತು ತೆಲಂಗಾಣದ ಗಡಿಯಲ್ಲಿರುವ ಬೀದರಜಿಲ್ಲೆಯಲ್ಲಿ ಕನ್ನಡ ಭಾಷೆ ಮಿಶ್ರವಾಗಿದೆ. ಬೀದರ ಕನ್ನಡ ಭಾಷೆ ವಿಶಿಷ್ಟತೆಯಿಂದ ಕೂಡಿದೆ ಎಂದರು. ಪ್ರತಿಫಲದ ಆಸೆ ಮಾಡದೇ ಸೇವೆ ಮಾಡಿದರೆ,ಒಂದಲ್ಲ, ಒಂದು ದಿನ ಜನರ ಆಶೀರ್ವಾದದಿಂದ ಜನನಾಯಕನ ಮನ್ನಣೆ ಸಿಕ್ಕೇ ಸಿಗುತ್ತದೆ. ಸಹಕಾರ ಕ್ಷೇತ್ರದಲ್ಲಿ ಜನಸೇವಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಮುಂದೆಯೂ ಸಲ್ಲಿಸುತ್ತೇನೆ ಎಂದರು.

ಜೈ ಕರವೇ ಜಿಲ್ಲಾಧ್ಯಕ್ಷ ಶ್ರೀಮಂತ ಸಪಾಟೆ ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ತಮ್ಮನೇತೃತ್ವದಲ್ಲಿ ಅನೇಕ ಜನಪರ ಹೋರಾಟಗಳುಅಲ್ಲದೇ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಕನ್ನಡಾಂಬೆ ವೃತ್ತಕ್ಕಾಗಿ ಹೋರಾಟ ಮಾಡಲಾಗಿದೆ. ಬರುವ ದಿನಗಳಲ್ಲಿ ಕನ್ನಡಾಂಬೆ ವೃತ್ತ ನಿರ್ಮಾಣ ಮಾಡಿ, ತಾಯಿ ಭುವನೇಶ್ವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಆಶಯ ಇದೆ ಎಂದರು.

ಜೈ ಕರವೇ ರಾಜ್ಯಾಧ್ಯಕ್ಷ ಅರುಣಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿ,ಉದಯ ಕಾಮಿಡಿ ಪ್ರಶಸ್ತಿ ವಿಜೇತ ಲೋಕೇಶ, ಚಿತ್ರ ನಟಿ ಸ್ವಾತಿ ಚಿನ್ನು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೂರಜ್‌ಸಿಂಗ್‌ ರಾಜಪೂತ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾರ್ವತಿ ಸೋನಾರೆ, ಮಂಜುಳಾ ಪಾಟೀಲ, ಸುರೇಶ ಬಡಿಗೇರ,

ವಿಜಯಕುಮಾರ ಸೋನಾರೆ, ಜಿಪಂ ಮಾಜಿ ಅಧ್ಯಕ್ಷ ರಾಜಕುಮಾರ ಹಜಾರಿ, ಮಾಜಿ ಸದಸ್ಯ ಝರೆಪ್ಪ ಮಮದಾಪೂರೆ, ಯುವ ಉದ್ಯಮಿಗಳಾದ ವಿವೇಕ ವಾಲಿ, ಆದೀಶ ವಾಲಿ ಇತರರು ಇದ್ದರು. ದೇವಿದಾಸ ಜೋಶಿ ನಿರೂಪಿಸಿದರು.

ಮೆರವಣಿಗೆಗೆ ಚಾಲನೆ: ಕಾರ್ಯಕ್ರಮಕ್ಕೂ ಮುನ್ನ ನಗರದ ಕನ್ನಡಾಂಬೆ (ರೋಟರಿ) ವೃತ್ತದಿಂದ ರಂಗ ಮಂದಿರದವರೆಗೆ ನಡೆದ ಮೆರವಣಿಗೆಗೆ ಉದ್ಯಮಿ ಸಂತೋಷ ತಾಡಂಪಳ್ಳಿ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಗ್ರಾಮಗಳು ಕಲಾವಿದರ ಕೋಲಾಟ, ಛಕ್ರಿ ಭಜನೆ ಪ್ರದರ್ಶನ ಗಮನ ಸೆಳೆಯಿತು.

ಸೇವೆ ಮಾಡಲು ಸಹಕಾರ ಅಥವಾ ರಾಜಕೀಯ ಕ್ಷೇತ್ರ ಬೇಕಂತ ಏನಿಲ್ಲ. ಸೇವೆ ಮಾಡುವ ಮನೋಭಾವ ಇದ್ದರೆ, ಯಾವುದೇ ಅಧಿಕಾರವಿಲ್ಲದೇ ಜನರ ಸೇವೆ ಸಲ್ಲಿಸಬಹುದು. ನಿಸ್ವಾರ್ಥ ಮನೋಭಾವದಿಂದಜನಸಾಮಾನ್ಯರ ಸೇವೆ ಸಲ್ಲಿಸಿದ್ದಕ್ಕಾಗಿ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗುರುತಿಸಿದೆ. ಉಮಾಕಾಂತ ನಾಗಮಾರಪಳ್ಳಿ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.