ಮುಖ್ಯೋಪಾಧ್ಯಾಯರ ಸಂಘಕ್ಕೆ ಕಪಲಾಪುರೆ ಅಧ್ಯಕ್ಷ
Team Udayavani, Dec 7, 2021, 4:35 PM IST
ಬೀದರ: ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಶಿವರಾಜ ಕಪಲಾಪುರೆ ನೇಮಕಗೊಂಡಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸಂಘದ ರಾಜಾಧ್ಯಕ್ಷ ಕೆ. ಕೃಷ್ಣಪ್ಪ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸಿದ್ಧಾರೆಡ್ಡಿ ನಾಗೂರಾ (ಗೌರವಾಧ್ಯಕ್ಷ), ಚಿದಂಬರ ಶೇಖರ, ಸುಶೀಲಾಬಾಯಿ (ಉಪಾಧ್ಯಕ್ಷರು), ಮಹಮ್ಮದ್ ನಜಿಬೊದ್ದಿನ್ (ಪ್ರಧಾನ ಕಾರ್ಯದರ್ಶಿ), ಅಶೋಕ ಸಪಾಟೆ (ಸಹ ಕಾರ್ಯದರ್ಶಿ), ಸೈಯದ್ ಅಸ್ಲಂ, ಲಲಿತಾಬಾಯಿ (ಸಂಘಟನಾ ಕಾರ್ಯದರ್ಶಿಗಳು) ಮತ್ತು ನರಸಪ್ಪ ಕೀರ್ತಿ (ಖಜಾಂಚಿ).
ಪದಾಧಿಕಾರಿಗಳಿಗೆ ಸನ್ಮಾನ: ಇಲ್ಲಿನ ನೌಕರರ ಸಮುದಾಯ ಭವನದಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ಶಿವರಾಜ ಕಪಲಾಪೂರೆ ಅವರು ವಿವಿಧ ಸಂಘ, ಸಂಸ್ಥೆಗಳ ಅಧ್ಯಕ್ಷ, ಪದಾಧಿಕಾರಿಯಾಗಿ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಇದೀಗ ಅವರಿಗೆ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘವು ಜಿಲ್ಲಾಧ್ಯಕ್ಷ ಸ್ಥಾನದ ಹೊಣೆ ನೀಡಿದೆ ಎಂದು ಹೇಳಿದರು.
ನೂತನ ಅಧ್ಯಕ್ಷ ಶಿವರಾಜ ಕಪಲಾಪುರೆ ಮಾತನಾಡಿ, ಮುಖ್ಯೋಪಾಧ್ಯಾಯರ ಸಂಘ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವೆ. ಜಿಲ್ಲೆಯಲ್ಲಿ ಮುಖ್ಯಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಶಕ್ತಿಮೀರಿ ಶ್ರಮಿಸುವೆ. ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ರೂಪಿಸಬೇಕು. ಪದವೀಧರೇತರ ಮುಖ್ಯಶಿಕ್ಷಕರು ಇರುವ ಶಾಲೆಗಳ ಮಕ್ಕಳ ಸಂಖ್ಯೆಯನ್ನು 250 ರಿಂದ 120ಕ್ಕೆ ಇಳಿಸಬೇಕು. 20 ವರ್ಷ, 25 ವರ್ಷ ಹಾಗೂ 30 ವರ್ಷದ ಕಾಲಮಿತಿ ಬಡ್ತಿ ಕಲ್ಪಿಸಬೇಕು. ಬಿಸಿಯೂಟ ವೆಚ್ಚಕ್ಕಾಗಿ ಮುಂಗಡ ಹಣ ನೀಡಬೇಕು ಎನ್ನುವ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ನೌಕರರ ವಿವಿಧ ಸಂಘಗಳ ಪ್ರಮುಖರಾದ ಬಸವರಾಜ ಜಕ್ಕಾ, ರಾಜಶೇಖರ ಮಂಗಲಗಿ, ಪಾಂಡುರಂಗ ಬೆಲ್ದಾರ್, ಸುರೇಶ ಟಾಳೆ, ಸಂಜುಕುಮಾರ ಸೂರ್ಯವಂಶಿ, ವಿಜಯ ಕುಮಾರ ಮಲಶೆಟ್ಟೆ, ರಾಮಶೆಟ್ಟಿ ಕೆಂಚಾ, ಸರಸ್ವತಿ, ಸುಮತಿ ರುದ್ರಾ, ರಮೇಶ ಸಿಂದೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ