ಕನ್ನಡಿಗರು ಶೀಘ್ರ ತಾಯ್ನಾಡಿಗೆ
Team Udayavani, Aug 7, 2020, 3:20 PM IST
ಬೀದರ: ಕುವೈತ್ನಲ್ಲಿ ಸಿಲುಕಿರುವ ಕನ್ನಡಿಗರನ್ನು ಅಲ್ಲಿನ ಭಾರತ ರಾಯಭಾರ ಕಚೇರಿ ಸಂಪರ್ಕಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಅಂತಾರಾಷ್ಟ್ರೀಯ ವಿಮಾನಗಳ ಸೇವೆ ಎರಡನೇ ವಾರದಲ್ಲಿ ಪ್ರಾರಂಭವಾಗಲಿದ್ದು, ತಕ್ಷಣವೇ ಅಲ್ಲಿನ ಕನ್ನಡಿಗರನ್ನು ಕರೆತರುವ ಬಗ್ಗೆ ವಿದೇಶಾಂಗ ಸಚಿವರು ಭರವಸೆ ನೀಡಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಉದ್ಯೋಗಕ್ಕಾಗಿ ಕುವೈತ್ಗೆ ತೆರಳಿ ಕೋವಿಡ್ ನಿಂದ ಬೀದರ ಸೇರಿದಂತೆ ಕನ್ನಡಿಗರು ಸಿಲುಕಿರುವ ಕುರಿತು ಈಗಾಗಲೇ ವಿದೇಶಾಂಗ ಸಚಿವ ಸುಬ್ರಮಣ್ಯಂ ಜೈಶಂಕರ ಅವರ ಗಮನಕ್ಕೆ ತಂದಿದ್ದು, ಮೇಘಾ ಇಂಜಿನಿಯರಿಂಗ್ ಕಂಪನಿಗೆ ಕುವೈತ್ನ ರಾಯಭಾರ ಕಚೇರಿಯಿಂದ ನೋಟಿಸ್ ನೀಡಲಾಗಿತ್ತು. ಹಾಗಾಗಿ ಕಂಪನಿ ಯುವಕರನ್ನು ಭೇಟಿ ಮಾಡಿ, ನಿಮ್ಮನ್ನು ಮರಳಿ ಭಾರತಕ್ಕೆ ಕಳುಹಿಸುತ್ತೇವೆ ಎಂದು ಹೇಳಿ, ಊಟ ಸೇರಿ ಸೌಲತ್ತುಗಳ ವ್ಯವಸ್ಥೆಗಳನ್ನು ಮಾಡಿದೆ ಎಂದು ಹೇಳಿದ್ದಾರೆ.
ಗುರುವಾರ ಮತ್ತೂಮ್ಮೆ ವಿದೇಶಾಂಗ ಸಚಿವರನ್ನು ಸಂಪರ್ಕಿಸಿದಾಗ ಕುವೈತ್ನಲ್ಲಿರುವ ಭಾರತದ ರಾಯಭಾರ ಕಚೇರಿಯು ಎಲ್ಲಾ ಕನ್ನಡಿಗರ ತಂಡವನ್ನು ಸಂಪರ್ಕಿಸಿದೆ ಮತ್ತು ಮೇಘಾ ಕಂಪನಿಯವರನ್ನು ಸಹ ಸಂಪರ್ಕಿಸಿದೆ. ಅವರನ್ನು ಭಾರತಕ್ಕೆ ವಾಪಸ್ ಕರೆತರಲು ವಿಮಾನ ಟಿಕೆಟ್ (ಜಾಜಿರಾ ಏರ್ಲೈನ್ಸ್ ಮೂಲಕ) ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್